ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ವಿರುದ್ಧ ಈಶ್ವರಪ್ಪ ಪತ್ರ: ಸಿಎಂ ರಾಜೀನಾಮೆಗೆ ಡಿಕೆಶಿ‌ ಒತ್ತಾಯ

Last Updated 31 ಮಾರ್ಚ್ 2021, 14:47 IST
ಅಕ್ಷರ ಗಾತ್ರ

ನವದೆಹಲಿ: ‘ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಇಲಾಖೆಯಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ’ ಎಂದು ಆಕ್ಷೇಪಿಸಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದಾರೆ.

ಈ ಪತ್ರವನ್ನು ಉಲ್ಲೇಖಿಸಿ ಬುಧವಾರ ಸಂಜೆ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

'ಸರ್ಕಾರದ ಹಿರಿಯ ಸಚಿವರೊಬ್ಬರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತಕ್ಷಣವೇ ರಾಜೀನಾಮೆ ಸಲ್ಲಿಸಬೇಕು. ಒಂದು ವೇಳೆ ಸಚಿವರ ಆರೋಪಗಳಲ್ಲಿ ಸತ್ಯವಿರದಿದ್ದರೆ ಅವರನ್ನು ವಜಾಗೊಳಿಸಬೇಕು' ಎಂದು ಡಿಕೆಶಿ ಆಗ್ರಹಿಸಿದ್ದಾರೆ.

ಕರ್ನಾಟಕದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಗುಹೆಯಾಗಿ ಮಾರ್ಪಟ್ಟಿದೆ ಎಂದೂ ಅವರು ಹರಿಹಾಯ್ದಿದ್ದಾರೆ.

'ಕಳೆದ ಒಂದು ವರ್ಷದ ಅವಧಿಯಲ್ಲಿ ನನ್ನ ಇಲಾಖೆಗೆ ಸಂಬಂಧಿಸಿದ ಎಲ್ಲ ನಿರ್ಧಾರಗಳನ್ನು ನನ್ನ ಗಮನಕ್ಕೆ ತರದೇ ಮುಖ್ಯಮಂತ್ರಿಯವರು ಕೈಗೊಂಡಿದ್ದಾರೆ. ಇದರಿಂದ ಅತ್ಯಂತ ಹಿರಿಯ ಸದಸ್ಯನಾದ ನನಗೆ ತೀವ್ರ ಮುಜುಗರ ಮತ್ತು ನೋವು ಉಂಟಾಗಿದೆ' ಎಂದು ಪತ್ರದಲ್ಲಿ ಈಶ್ವರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT