ಯಡಿಯೂರಪ್ಪ ನೆರಳಿನಿಂದ ಹೊರಬಂದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು ಎಂಬ ಸೂಚನೆಯನ್ನೂ ವರಿಷ್ಠರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನೀಡಿದ್ದಾರೆ. ಅವರ ನಿರ್ದೇಶನದ ಅನ್ವಯ ಬೊಮ್ಮಾಯಿ ಬೆಳಿಗ್ಗೆ ದೆಹಲಿಯಿಂದ ಮರಳಿದ ಬಳಿಕ ನೇರವಾಗಿ ಯಡಿಯೂರಪ್ಪ ಅವರ ಮನೆಗೆ ಹೋಗದೇ ವಿಧಾನಸೌಧಕ್ಕೆ ತೆರಳಿದರು. ಹಿಂದೆಲ್ಲ ಯಾವುದೇ ಕೆಲಸಕ್ಕೂ ಮೊದಲು ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡುತ್ತಿದ್ದರು.