ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆರೋಪಿ ಪರ ವಕೀಲ ಬಾಹುಬಲಿ ದಾಂಡೇವಾಲೆ, ‘ನಾಲ್ಕು ವರ್ಷಗಳಷ್ಟು ಹಳೆಯ ಪ್ರಕರಣದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು, ಎಫ್ಐಆರ್ ಹಾಗೂ ದೋಷಾರೋಪಪಟ್ಟಿಯಲ್ಲಿ ವಿನಯ ಕುಲಕರ್ಣಿ ಅವರ ಹೆಸರಿಲ್ಲ. ನಿರೀಕ್ಷಣಾ ಜಾಮೀನು ಪಡೆಯಲು ಸಹ ಅವರು ಅರ್ಜಿ ಸಲ್ಲಿಸಿಲ್ಲ. ಗುರುವಾರ ವಶಕ್ಕೆ ಪಡೆದ ನಂತರ ಸಿಬಿಐ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿದ್ದಾರೆ’ ಎಂದರು.