ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.16ಕ್ಕೆ ಕೆ.ಆರ್‌.ಪೇಟೆಗೆ ಯೋಗಿ

Last Updated 10 ಅಕ್ಟೋಬರ್ 2022, 20:01 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇದೇ 16ರಂದು ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕು ಅಕ್ಕಿಹೆಬ್ಬಾಳು ಸಮೀಪದ ಅಂಬಿಗರಹಳ್ಳಿಯಲ್ಲಿ ನಡೆಯುವ ಕುಂಭಮೇಳದಲ್ಲಿಭಾಗವಹಿಸಲಿದ್ದಾರೆ.

ಕಾವೇರಿ, ಲಕ್ಷ್ಮಣತೀರ್ಥ ಮತ್ತು ಹೇಮಾವತಿ ನದಿಗಳ ಸಂಗಮ ಸ್ಥಳವಾದ ಇಲ್ಲಿ ಇದೇ 14ರಿಂದ ಮೂರು ದಿನಗಳ ಕುಂಭಮೇಳ ನಡೆಯಲಿದೆ. ಆದಿಚುಂಚನಗಿರಿ ಮಠದ ಮುಂದಾಳತ್ವದಲ್ಲಿಕುಂಭಮೇಳ ನಡೆಯುತ್ತಿದ್ದು, ಇದಕ್ಕೆ ಯೋಗಿ ಅವರನ್ನು ಆಹ್ವಾನಿಸಲಾಗಿದೆ.

ಆದಿಚುಂಚನಗಿರಿ ಮಠ ಮತ್ತು ಯೋಗಿ ಆದಿತ್ಯನಾಥ ಅವರು ಮಹಂತರಾಗಿರುವ ಗೋರಕ್ಷ ಪೀಠವೂ ನಾಥ ಸಂಪ್ರ
ದಾಯಕ್ಕೆ ಸೇರಿವೆ. ಒಕ್ಕಲಿಗರ ಸಂಖ್ಯೆ ಹೆಚ್ಚಾಗಿರುವ ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಯೋಗಿಯವರ ಭೇಟಿಯಿಂದ ಪಕ್ಷಕ್ಕೆ ಲಾಭ ಆಗಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ. ಆದರೆ, ಪಕ್ಷದ ವತಿಯಿಂದ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT