ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ: ಟ್ವೀಟ್‌ ಮೂಲಕ ಯಶ್‌ ಸಂತಾಪ

ಸಿದ್ದರಾಮಯ್ಯ, ಯಶ್‌ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್‌ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ
Last Updated 18 ಫೆಬ್ರುವರಿ 2021, 11:24 IST
ಅಕ್ಷರ ಗಾತ್ರ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಟ ಯಶ್‌ ತನ್ನ ಅಂತ್ಯಕ್ರಿಯೆಲ್ಲಿ ಪಾಲ್ಗೊಳ್ಳಬೇಕು ಎಂದು ಡೆತ್‌ನೋಟ್‌ ಬರೆದಿಟ್ಟು ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದ ಯುವಕ ರಾಮಕೃಷ್ಣ (25) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಮಕೃಷ್ಣ
ರಾಮಕೃಷ್ಣ

ಅವಿವಾಹಿತನಾಗಿದ್ದ ಆತ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ತಾಯಿ ಮತ್ತು ಅಣ್ಣನ ಜತೆ ವಾಸವಾಗಿದ್ದ. ನಾಲ್ಕೈದು ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೆರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಆತ ಬರೆದಿಟ್ಟಿದ್ದ ಡೆತ್‌ನೋಟ್‌ ಸಿಕ್ಕಿದೆ. ‘ ತಂದೆ–ತಾಯಿಗೆ ಒಳ್ಳೆಯ ಮಗನಾಗಲಿಲ್ಲ, ಅಣ್ಣನಿಗೆ ತಮ್ಮನಾಗಲಿಲ್ಲ, ಗೆಳತಿಗೆ ಸಂಗಾತಿಯಾಗಲಿಲ್ಲ. ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಟ ಯಶ್‌ ಅವರ ಅಭಿಮಾನಿ, ಅವರು ನನ್ನ ಅಂತ್ಯಕ್ರಿಯೆಗೆ ಬರಬೇಕು’ ಎಂದು ಬರೆದಿದ್ದಾನೆ.

ಸಿದ್ದರಾಮಯ್ಯ ಅಂತಿಮ ನಮನ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

‘ಮನೆಗೆ ಆಧಾರಸ್ತಂಭವಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ನೋವು ತಂದಿದೆ. ಯುವಕರು ಇಂತಹ ಕೃತ್ಯಕ್ಕೆ ಮುಂದಾಗಬಾರದು. ಜೀವನವನ್ನು ಧೈರ್ಯದಿಂದ ಎದುರಿಸಬೇಕು’ ಎಂದರು.

ಯಶ್ ಟ್ವೀಟ್‌

ಘಟನೆ ಕುರಿತು ನಟ ಯಶ್‌ ಟ್ವೀಟ್‌ ಮಾಡಿದ್ದಾರೆ. ‘ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು, ಜೀವನ, ಹೆಮ್ಮೆ. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆ ಪಡಲು ಸಾಧ್ಯವೇ... ಅಭಿಮಾನಕ್ಕೆ ಇದು ಮಾದರಿಯಾಗದಿರಲಿ. ಕೋಡಿದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ, ಓಂ ಶಾಂತಿ’ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT