ಬೆಂಗಳೂರಿನ ನ್ಯಾಷನಲ್ ಕಾಲೇಜು ವಾತಾವರಣದಲ್ಲಿ ಬೆಳೆದ ಶ್ರೀನಿವಾಸ್ ಸಹಜವಾಗಿಯೇ ರಾಜಕೀಯ ನಾಯಕರ ಮಾತಿನಿಂದ ಅಕರ್ಷಿತರಾಗಿ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್ಎಸ್ಯುಐ ಜತೆ ಒಡನಾಟ ಬೆಳೆಸಿಕೊಂಡರು. 2010ರಲ್ಲಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣದ ನಂತರದಲ್ಲಿ ಸಾಕಷ್ಟು ಹೆಸರು ಮಾಡಿದರು. ಇವರನ್ನು ಗುರುತಿಸಿದ ಕಾಂಗ್ರೆಸ್ ಪಕ್ಷವು ರಾಜ್ಯ ಯುವ ಘಟಕದ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಘಟಕದ ಕಾರ್ಯದರ್ಶಿ ಜವಾಬ್ದಾರಿಗಳನ್ನು ನೀಡಿತ್ತು. ಇಂದು ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.