ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಹೈಕೋರ್ಟ್ ಆದೇಶದಂತೆ ದೆಹಲಿ ಪೊಲೀಸರು ಬಿ.ವಿ. ಶ್ರೀನಿವಾಸ್ ಅವರಲ್ಲದೇ ಬಿಜೆಪಿ ಸಂಸದ ಗೌತಮ್ ಗಂಭೀರ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ದಿಲೀಪ್ ಪಾಂಡೆ ಅವರನ್ನೂ ವಿಚಾರಣೆ ನಡೆಸಿದ್ದಾರೆ. ಆದರೆ, ಶ್ರೀನಿವಾಸ್ ವಿಚಾರಣೆಯ ವಿಷಯದಲ್ಲಿ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ’ ಎಂದಿದ್ದಾರೆ.