‘ಸಂಚಾರ ಪೊಲೀಸರು ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ತಮ್ಮ ಕರ್ತವ್ಯವನ್ನೇ ಮರೆತಂತೆ ವರ್ತಿಸುತ್ತಿದ್ದಾರೆ. ಸಣ್ಣಪುಟ್ಟ ವ್ಯಾಪಾರಿಗಳು, ರೈತರು, ಜನಸಾಮಾನ್ಯರನ್ನೇ ಗುರಿಯಾಗಿಸಿ ದಂಡ ವಸೂಲಿ ಮಾಡುತ್ತಿದ್ದಾರೆ. ಪೊಲೀಸರ ಈ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರಿನ ಬೋಗಾದಿಯಲ್ಲಿ ಇದು ಸ್ಫೋಟಗೊಂಡಿ
ರುವುದು ಸಣ್ಣ ಉದಾಹರಣೆ. ಸಂಚಾರ ಪೊಲೀಸರಿಂದ ಎಲ್ಲೆಡೆ ಹಗಲು ದರೋಡೆ, ಶೋಷಣೆ ನಡೆಯುತ್ತಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.