ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಲ್‌ಇ: ಯುವಕನಿಗೆ ಯಕೃತ್‌ ಕಸಿ ಯಶಸ್ವಿ

ಕೆಎಲ್‌ಇ ಸಂಸ್ಥೆಯ ಆಸ್ಪತ್ರೆ ತಜ್ಞವೈದ್ಯರ ಸಾಧನೆ
Last Updated 20 ಅಕ್ಟೋಬರ್ 2022, 20:11 IST
ಅಕ್ಷರ ಗಾತ್ರ

ಬೆಳಗಾವಿ: ‘ಇಲ್ಲಿನ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ 19 ವರ್ಷದ ಯುವಕ ನಿಗೆ ಯಶಸ್ವಿಯಾಗಿ ಯಕೃತ್‌ ಕಸಿ ಮಾಡಲಾಗಿದೆ’ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.

‘ಹಾವೇರಿಯ ದರ್ಶನ್‌ ಎಂಬ ಯುವಕ ಯಕೃತ್‌ ಸಮಸ್ಯೆಯಿಂದ ಬಳಲುತ್ತಿದ್ದರು. ಯಕೃತ್‌ ಕಸಿ‌ಗಾಗಿ ಅವರು ಕೆಎಲ್‌ಇಎಸ್‌ ಆಸ್ಪತ್ರೆಗೆ ನೋಂದಣಿ ಮಾಡಿಸಿದ್ದರು. ಇತ್ತೀಚೆಗ ಅಥಣಿಯ 30 ವರ್ಷದ ಯುವಕನ ಮಿದುಳು ನಿಷ್ಕ್ರಿಯಗೊಂಡಿತ್ತು. ಅವರ ಪಾಲಕರು ಅಂಗಾಂಗ ದಾನ ಮಾಡಿ ದ್ದರು. ಅವರ ಯಕೃತ್ತನ್ನೇ ದರ್ಶನ್‌ ಅವರಿಗೆ ಕಸಿ ಮಾಡಲಾಗಿದೆ’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿ
ಯಲ್ಲಿ ತಿಳಿಸಿದರು.

‘ಬೆಂಗಳೂರು, ಮುಂಬೈ, ಹೈದರಾಬಾದ್‌ನಂಥ ನಗರಗಳ ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚದಲ್ಲಿ ಯಕೃತ್‌ ಕಸಿ ಮಾಡಲಾಗುತ್ತದೆ. ಅಲ್ಲಿಗಿಂತ ಅರ್ಧದಷ್ಟು ವೆಚ್ಚದಲ್ಲಿ ಕೆಎಲ್‌ಇಎಸ್‌ ಆಸ್ಪತ್ರೆಯಲ್ಲಿ ಕಸಿ ಮಾಡಲಾಗಿದೆ’ ಎಂದರು.

‘ಆಸ್ಪತ್ರೆಯ ಗ್ಯಾಸ್ಟ್ರೊಎಂಟರಾಲಜಿ ವಿಭಾಗದ ಡಾ.ಸಂತೋಷ ಹಜಾರೆ, ಡಾ.ಸುದರ್ಶನ ಚೌಗುಲೆ ಮತ್ತು ಬೆಂಗಳೂರಿನ ಅಸ್ಟರ್‌ ಆಸ್ಪತ್ರೆಯ ಡಾ.ಸೋನಲ್‌ ಆಸ್ಥಾನಾ ಅವರ ತಂಡ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಅರಿವಳಿಕೆ ತಜ್ಞರಾದ ಡಾ.ಅರುಣ, ಡಾ.ರಾಜೇಶ ಮಾನೆ, ಡಾ.ಮಂಜುನಾಥ, ಜೀವ ಸಾರ್ಥಕತೆ, ಮೋಹನ ಫೌಂಡೇಷನ್‌ ಮತ್ತು ಕಸಿ ಸಂಯೋಜಕರ ತಂಡ ಇದಕ್ಕೆ ಕೈ ಜೋಡಿಸಿದೆ’ ಎಂದರು.

ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ.ಜಾಲಿ, ಬಹುವಿಧ ಅಂಗಾಂಗ ಘಟಕದ ಅಧ್ಯಕ್ಷ ಡಾ.ಆರ್‌.ಬಿ.ನೇರ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT