<p><strong>ಬೆಂಗಳೂರು</strong>: ರಾಜ್ಯದಲ್ಲಿ ಯುವ ಜನರ ಸಮಗ್ರ ಅಭಿವೃದ್ಧಿಯನ್ನು ಸಕ್ರಿಯಗೊಳಿಸುವುದು ಮತ್ತು ರಚನಾತ್ಮಕ ಸಾಮಾಜಿಕ ಬದಲಾವಣೆ ತಂದು ಯುವ ಜನರನ್ನು ಸಶಕ್ತರನ್ನಾಗಿಸುವ ಉದ್ದೇಶ ಹೊಂದಿರುವ ಕರ್ನಾಟಕ ಯುವ ನೀತಿ–22ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಯುವ ನೀತಿ ರೂಪಿಸಲು ರಾಜ್ಯ ಸರ್ಕಾರ ರಚಿಸಿದ್ದ ಡಾ.ಆರ್.ಬಾಲಸುಬ್ರಹ್ಮಣ್ಯಂ ಅಧ್ಯಕ್ಷತೆಯ ಸಮಿತಿಯು ಈ ಕುರಿತು ಶಿಫಾರಸು ಮಾಡಿತ್ತು.</p>.<p>ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಈ ವಿಷಯ ತಿಳಿಸಿದರು.</p>.<p>ಯುವ ಜನರ ಸುಸ್ಥಿರ ಅಭಿವೃದ್ಧಿಗಾಗಿ 2030 ರ ಕಾರ್ಯಸೂಚಿಯೊಂದಿಗೆ ಯುವ ನೀತಿಯು ಎಂಟು ವರ್ಷಗಳ ಅವಧಿಗೆ ಅಂದರೆ, 2030 ರವರೆಗೆ ಕಾರ್ಯ ನಿರ್ವಹಿಸಲಿದೆ ಎಂದರು.</p>.<p>ಉದ್ದೇಶಗಳು:</p>.<p>* ಹೆಚ್ಚು ಹೆಚ್ಚು ವಿದ್ಯಾವಂತರೂ ಮತ್ತು ಪರಿಣಿತ ಯುವ ಜನರನ್ನು ರೂಪಿಸಲು ಶಿಕ್ಷಣ ಮತ್ತು ತರಬೇತಿಯ ಪ್ರತಿ ಹಂತದಲ್ಲಿ ದಾಖಲಾತಿ ಮತ್ತು ಸಾಧನೆಯ ಮಟ್ಟವನ್ನು ಹೆಚ್ಚಿಸುವುದು.</p>.<p>* ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವುದು ಮತ್ತು ಯುವ ಜನರು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸಲು ಅವರಿಗೆ ತರಬೇತಿ ನೀಡುವುದು.</p>.<p>*ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಯುವ ಜನ ಉದ್ಯಮಶೀಲರಿಗೆ/ ಉದ್ಯಮಿಗಳಿಗೆ ಆರ್ಥಿಕ ಬೆಂಬಲ ಮತ್ತು ಮಾರ್ಗದರ್ಶನ ನೀಡುವುದು.</p>.<p>* ಯುವ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಯುವ ಜನರ ಪೋಷಣೆ, ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೇಂದ್ರೀಕರಿಸುವುದು.</p>.<p>* ರಾಜ್ಯದ ಶ್ರೀಮಂತ ಮತ್ತು ವೈವಿಧ್ಯಮಯ ಕಲಾತ್ಮಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಯುವ ಜನರಲ್ಲಿ ಅರಿವು ಮೂಡಿಸಲು ಮತ್ತು ತೊಡಗಿಸಿಕೊಳ್ಳಲು ಮಾರ್ಗಗಳನ್ನು /ವಿಧಾನಗಳನ್ನು ಅಭಿವೃದ್ಧಿಪಡಿಸುವುದು.</p>.<p>* ನಾಯಕತ್ವ ಗುಣಗಳನ್ನು ಬೆಳೆಸುವ ಮೂಲಕ ಯುವಜನರು ನಾಗರಿಕ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಯುವ ಜನರ ಸಮಗ್ರ ಅಭಿವೃದ್ಧಿಯನ್ನು ಸಕ್ರಿಯಗೊಳಿಸುವುದು ಮತ್ತು ರಚನಾತ್ಮಕ ಸಾಮಾಜಿಕ ಬದಲಾವಣೆ ತಂದು ಯುವ ಜನರನ್ನು ಸಶಕ್ತರನ್ನಾಗಿಸುವ ಉದ್ದೇಶ ಹೊಂದಿರುವ ಕರ್ನಾಟಕ ಯುವ ನೀತಿ–22ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಯುವ ನೀತಿ ರೂಪಿಸಲು ರಾಜ್ಯ ಸರ್ಕಾರ ರಚಿಸಿದ್ದ ಡಾ.ಆರ್.ಬಾಲಸುಬ್ರಹ್ಮಣ್ಯಂ ಅಧ್ಯಕ್ಷತೆಯ ಸಮಿತಿಯು ಈ ಕುರಿತು ಶಿಫಾರಸು ಮಾಡಿತ್ತು.</p>.<p>ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಈ ವಿಷಯ ತಿಳಿಸಿದರು.</p>.<p>ಯುವ ಜನರ ಸುಸ್ಥಿರ ಅಭಿವೃದ್ಧಿಗಾಗಿ 2030 ರ ಕಾರ್ಯಸೂಚಿಯೊಂದಿಗೆ ಯುವ ನೀತಿಯು ಎಂಟು ವರ್ಷಗಳ ಅವಧಿಗೆ ಅಂದರೆ, 2030 ರವರೆಗೆ ಕಾರ್ಯ ನಿರ್ವಹಿಸಲಿದೆ ಎಂದರು.</p>.<p>ಉದ್ದೇಶಗಳು:</p>.<p>* ಹೆಚ್ಚು ಹೆಚ್ಚು ವಿದ್ಯಾವಂತರೂ ಮತ್ತು ಪರಿಣಿತ ಯುವ ಜನರನ್ನು ರೂಪಿಸಲು ಶಿಕ್ಷಣ ಮತ್ತು ತರಬೇತಿಯ ಪ್ರತಿ ಹಂತದಲ್ಲಿ ದಾಖಲಾತಿ ಮತ್ತು ಸಾಧನೆಯ ಮಟ್ಟವನ್ನು ಹೆಚ್ಚಿಸುವುದು.</p>.<p>* ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವುದು ಮತ್ತು ಯುವ ಜನರು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸಲು ಅವರಿಗೆ ತರಬೇತಿ ನೀಡುವುದು.</p>.<p>*ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಯುವ ಜನ ಉದ್ಯಮಶೀಲರಿಗೆ/ ಉದ್ಯಮಿಗಳಿಗೆ ಆರ್ಥಿಕ ಬೆಂಬಲ ಮತ್ತು ಮಾರ್ಗದರ್ಶನ ನೀಡುವುದು.</p>.<p>* ಯುವ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಯುವ ಜನರ ಪೋಷಣೆ, ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೇಂದ್ರೀಕರಿಸುವುದು.</p>.<p>* ರಾಜ್ಯದ ಶ್ರೀಮಂತ ಮತ್ತು ವೈವಿಧ್ಯಮಯ ಕಲಾತ್ಮಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಯುವ ಜನರಲ್ಲಿ ಅರಿವು ಮೂಡಿಸಲು ಮತ್ತು ತೊಡಗಿಸಿಕೊಳ್ಳಲು ಮಾರ್ಗಗಳನ್ನು /ವಿಧಾನಗಳನ್ನು ಅಭಿವೃದ್ಧಿಪಡಿಸುವುದು.</p>.<p>* ನಾಯಕತ್ವ ಗುಣಗಳನ್ನು ಬೆಳೆಸುವ ಮೂಲಕ ಯುವಜನರು ನಾಗರಿಕ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>