ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮಂಗಲ: ರಂಗಮಂದಿರದಿಂದ ಸುಮಲತಾ ಭಾವಚಿತ್ರ ತೆರವು

Last Updated 11 ಮಾರ್ಚ್ 2023, 19:30 IST
ಅಕ್ಷರ ಗಾತ್ರ

ನಾಗಮಂಗಲ (ಮಂಡ್ಯ): ಸಂಸದೆ ಸುಮಲತಾ ಶುಕ್ರವಾರ ಬಿಜೆಪಿಗೆ ಬೆಂಬಲ ಘೋಷಿಸಿದ್ದರಿಂದ ಕುಪಿತರಾಗಿರುವ ತಾಲ್ಲೂಕಿನ ಬಿದರಕೆರೆ ಯುವಕರು ರಂಗಮಂದಿರದಲ್ಲಿ ಹಾಕಿದ್ದ ಸುಮಲತಾ ಅವರ ಭಾವಚಿತ್ರವನ್ನು ತೆರವುಗೊಳಿಸಿದ್ದಾರೆ.

ಅಂಬರೀಷ್ ಅವರು ಸಂಸದರಾಗಿದ್ದಾಗ ನೀಡಿದ್ದ ಅನುದಾನದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ನಿರ್ಮಿಸಿದ್ದ ರಂಗಮಂದಿರದಲ್ಲಿ ಸುಮಲತಾ ಅವರ ಫೋಟೊವನ್ನೂ ಅಳವಡಿಸಲಾಗಿತ್ತು.

ಲಂಕೇಶ್ ಪತ್ರಿಕೆಯ‌ ಅಂಕಣಕಾರರಾಗಿದ್ದ ಬಿ.ಚಂದ್ರೇಗೌಡ ಅವರು ಪಿ.ಲಂಕೇಶ್‌ ಅವರ ಮೇಲಿನ ಪ್ರೀತಿ ಮತ್ತು ಅಭಿಮಾನದ ಪ್ರತೀಕವಾಗಿ ಗ್ರಾಮದಲ್ಲಿ ಲೋಕಸಭಾ ಸದಸ್ಯರ ಕ್ಷೇತ್ರಾಭಿವೃದ್ಧಿಯ ನಿಧಿಯ ಅನುದಾನದಲ್ಲಿ ಪಿ.ಲಂಕೇಶ್ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಿಸಿ ಗೌರಿ ಲಂಕೇಶ್ ಅವರಿಂದ ಉದ್ಘಾಟನೆ ಮಾಡಿಸಿದ್ದರು.

‘ಸುಮಲತಾ ಅವರಿಂದ ಪ್ರಭಾವಿತರಾಗಿದ್ದ ಯುವಕರು ಅವರ ಫೋಟೊವನ್ನು ಹಾಕಿದ್ದರು. ಈಗ ಅವರ ನಿರ್ಧಾರದಿಂದ ನೋವಾಗಿದೆ, ನಮಗೆ ಅವರು ಮೋಸ ಮಾಡಿದ್ದಾರೆ ಎಂದು ಯುವಕರು ತಿಳಿಸಿದರು. ನಾವು ಮೂಕ ಪ್ರೇಕ್ಷಕರಾಗಬೇಕಾಯಿತು’ ಎಂದು ಬಿ.ಚಂದ್ರೇಗೌಡ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT