ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಚ್.ಡಿ.ಕುಮಾರಸ್ವಾಮಿ ಎರಡೂ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗಳನ್ನು ನಿಲ್ಲಿಸಿ, ಆರ್ಎಸ್ಎಸ್ಗೆ ಬಯ್ಯುವ ಕೆಲಸ ಮಾಡುತ್ತಿದ್ದಾರೆ. ಆರ್ಎಸ್ಎಸ್ಗೆ ಬಯ್ದರೆ ಅಲ್ಪಸಂಖ್ಯಾತರ ಮತಗಳೆಲ್ಲ ಜೆಡಿಎಸ್ಗೆ ಬಂದು, ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ ಎನ್ನುವುದು ಅವರ ಲೆಕ್ಕಾಚಾರ. ಸೂಟ್ಕೇಸ್ ಪಡೆದರೆ ಸಾಲದು, ಆರ್ಎಸ್ಎಸ್ಗೆ ಬಯ್ಯವ ಕೆಲಸವೂ ಆಗಬೇಕು ಎಂದು ಬಿಜೆಪಿಯೇ ಹೇಳಿರಬಹುದು’ ಎಂದರು.