‘ಶೋಭಾಯಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಅಸಂಖ್ಯಾತ ಭಕ್ತರು ಬರುತ್ತಾರೆ. ಕೊರೊನಾ ಸೋಂಕು ಸಂಪೂರ್ಣವಾಗಿ ಹೋಗಿಲ್ಲ. ಅದನ್ನು ತಡೆಯುವುದು ಎಲ್ಲರ ಜವಾಬ್ದಾರಿ. ಹೀಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಂದು ಪ್ರಸಾರ ಆಗಲಿರುವ ವಿಸರ್ಜನಾ ಮಹೋತ್ಸವದ ಲೈವ್ ಕಾರ್ಯಕ್ರಮವನ್ನು ಮನೆಯಿಂದಲೇ ಕಣ್ತುಂಬಿಕೊಳ್ಳಿ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.