ಜಮೀನಿನ ಮ್ಯುಟೇಷನ್ನಲ್ಲಿ ಹೆಸರು ಬದಲಾವಣೆ ಮಾಡುವಂತೆ ಖರೀದಿದಾರರು ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ₹ 50 ಲಕ್ಷ ಲಂಚ ನೀಡುವಂತೆ ಪುಟ್ಟ ಹನುಮಯ್ಯ ಬೇಡಿಕೆ ಇಟ್ಟಿದ್ದರು. ಜಮೀನಿನ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವ ಕುರಿತು ಸ್ಥಳದಲ್ಲಿ ಮಾಹಿತಿ ಫಲಕ ಅಳವಡಿಸಿ, ರಕ್ಷಣೆ ನೀಡುವಂತೆಯೂ ದೂರುದಾರರು ಚಿಕ್ಕಜಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ₹ 10 ಲಕ್ಷ ಲಂಚಕ್ಕೆ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.