<p><strong>ಕಕ್ಕೇರಾ(ಯಾದಗಿರಿ): </strong>ಇಲ್ಲಿ 12ನೇ ಶತಮಾನದ ಕಲ್ಯಾಣ ಕ್ರಾಂತಿಯ ಭಾಗವಾಗಿದ್ದ ಶರಣ ಡೋಹರ ಕಕ್ಕಯ್ಯನವರ ದೇವಸ್ಥಾನ ಗಮನಸೆಳೆಯುತ್ತದೆ.</p>.<p>ಈ ದೇಗುಲ ನಾಲ್ಕು ಸ್ತಂಭಗಳನ್ನು ಹೊಂದಿದೆ. ವಿಶೇಷವಾದ ಲಿಪಿಯಲ್ಲಿ ಬರೆಯಲಾಗಿದೆ. ಶಿವಲಿಂಗ ಹಾಗೂ ನಂದಿ ವಿಗ್ರಹಗಳೂ ಇಲ್ಲಿವೆ. ಗರ್ಭಗುಡಿ ಹಾಗೂ ಸುತ್ತಲಿನ ಗೋಡೆಗಳನ್ನು ಬೃಹತ್ ಕಲ್ಲುಗಳಿಂದ ನಿರ್ಮಿಸಲಾಗಿದೆ. ಇದು ಪ್ರಾಚಿನ ವಾಸ್ತುಶಿಲ್ಪ ವೈಭವವನ್ನು ನೆನಪಿಸುತ್ತದೆ.</p>.<p>ಈ ದೇಗುಲ ವಿಶ್ವಗುರು ಬಸವಣ್ಣನವರ ಐಕ್ಯಸ್ಥಳ ಕೂಡಲಸಂಗಮದಲ್ಲಿರುವ ದೇವಾಲಯದ ಆಕಾರದಲ್ಲಿದೆ.</p>.<p>ಶರಣ ಡೋಹರ ಕಕ್ಕಯ್ಯ ಇಲ್ಲಿಗೆ ಬಂದು ವಿಶ್ರಾಂತಿ ಪಡೆದು ಇಲ್ಲಿಯೇ ಐಕ್ಯರಾಗಿದ್ದಾರೆ ಎಂದು ಹಿರಿಯರು ತಿಳಿಸುತ್ತಾರೆ.</p>.<p>‘ಶಿವರಾತ್ರಿಯಂದು ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಾರೆ. ಉಪವಾಸ ವ್ರತ ಕೈಗೊಂಡವರಿಗೆ ಬಾಳೆಹಣ್ಣು, ಖರ್ಜೂರ, ಪ್ರಸಾದ ವಿತರಣೆ ಮಾಡಲಾಗುತ್ತದೆ. ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗುತ್ತದೆ’ ಎಂದು ವೀರಭದ್ರಯ್ಯ ಸ್ವಾಮಿ ತಿಳಿಸುತ್ತಾರೆ.</p>.<p>‘ಬಸವಸೇವಾ ಸಮಿತಿ ವತಿಯಿಂದ ದೇವಾಲಯದಲ್ಲಿ ಪ್ರತಿ ಹುಣ್ಣಿಮೆಯ ದಿನ ಅರಿವು–ಆಚಾರ ಕಾರ್ಯಕ್ರಮ ನಡೆಯುತ್ತದೆ. ಪ್ರತಿ ಗುರುವಾರ ಮನೆ–ಮನೆ ಬಸವ ಬೆಳಗು ಇಷ್ಟಲಿಂಗ ಕಾರ್ಯಕ್ರಮವನ್ನೂ ಮಾಡಲಾಗುತ್ತದೆ. ಸಮಿತಿ ಕಾರ್ಯ ಶ್ಲಾಘನೀಯ’ ಎಂದು ಹಾಲುಮತ ಸಮಾಜದ ಮುಖಂಡ ನಿಂಗಯ್ಯ ಬೂದಗುಂಪಿ ಹೇಳಿದರು.</p>.<p>ಈ ಹಿಂದೆ ಈ ದೇಗುಲ ಪಾಳುಬಿದ್ದಿತ್ತು. ಬಸವ ಸೇವಾ ಸಮಿತಿಯ ಪದಾಧಿಕಾರಿಗಳು ಊರಿನ ಹಿರಿಯರ ಸಹಾಯದಿಂದ ದೇವಾಲಯ ಆವರಣಕ್ಕೆ ಬಂಡೆ ಹಾಸಿದರು. ಆದ್ದರಿಂದ ಈಗ ಇದು ಗಮನಸೆಳೆಯುತ್ತಿದೆ.</p>.<p>‘ಶರಣ ಡೋಹರ ಕಕ್ಕಯ್ಯನವರ ದೇವಸ್ಥಾನ ನವೀಕರಿಸಬೇಕು. ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಬಸವಾ ಸೇವಾ ಸಮಿತಿ ಸದಸ್ಯನಂದಯ್ಯಸ್ವಾಮಿ ಒತ್ತಾಯಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ(ಯಾದಗಿರಿ): </strong>ಇಲ್ಲಿ 12ನೇ ಶತಮಾನದ ಕಲ್ಯಾಣ ಕ್ರಾಂತಿಯ ಭಾಗವಾಗಿದ್ದ ಶರಣ ಡೋಹರ ಕಕ್ಕಯ್ಯನವರ ದೇವಸ್ಥಾನ ಗಮನಸೆಳೆಯುತ್ತದೆ.</p>.<p>ಈ ದೇಗುಲ ನಾಲ್ಕು ಸ್ತಂಭಗಳನ್ನು ಹೊಂದಿದೆ. ವಿಶೇಷವಾದ ಲಿಪಿಯಲ್ಲಿ ಬರೆಯಲಾಗಿದೆ. ಶಿವಲಿಂಗ ಹಾಗೂ ನಂದಿ ವಿಗ್ರಹಗಳೂ ಇಲ್ಲಿವೆ. ಗರ್ಭಗುಡಿ ಹಾಗೂ ಸುತ್ತಲಿನ ಗೋಡೆಗಳನ್ನು ಬೃಹತ್ ಕಲ್ಲುಗಳಿಂದ ನಿರ್ಮಿಸಲಾಗಿದೆ. ಇದು ಪ್ರಾಚಿನ ವಾಸ್ತುಶಿಲ್ಪ ವೈಭವವನ್ನು ನೆನಪಿಸುತ್ತದೆ.</p>.<p>ಈ ದೇಗುಲ ವಿಶ್ವಗುರು ಬಸವಣ್ಣನವರ ಐಕ್ಯಸ್ಥಳ ಕೂಡಲಸಂಗಮದಲ್ಲಿರುವ ದೇವಾಲಯದ ಆಕಾರದಲ್ಲಿದೆ.</p>.<p>ಶರಣ ಡೋಹರ ಕಕ್ಕಯ್ಯ ಇಲ್ಲಿಗೆ ಬಂದು ವಿಶ್ರಾಂತಿ ಪಡೆದು ಇಲ್ಲಿಯೇ ಐಕ್ಯರಾಗಿದ್ದಾರೆ ಎಂದು ಹಿರಿಯರು ತಿಳಿಸುತ್ತಾರೆ.</p>.<p>‘ಶಿವರಾತ್ರಿಯಂದು ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಾರೆ. ಉಪವಾಸ ವ್ರತ ಕೈಗೊಂಡವರಿಗೆ ಬಾಳೆಹಣ್ಣು, ಖರ್ಜೂರ, ಪ್ರಸಾದ ವಿತರಣೆ ಮಾಡಲಾಗುತ್ತದೆ. ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗುತ್ತದೆ’ ಎಂದು ವೀರಭದ್ರಯ್ಯ ಸ್ವಾಮಿ ತಿಳಿಸುತ್ತಾರೆ.</p>.<p>‘ಬಸವಸೇವಾ ಸಮಿತಿ ವತಿಯಿಂದ ದೇವಾಲಯದಲ್ಲಿ ಪ್ರತಿ ಹುಣ್ಣಿಮೆಯ ದಿನ ಅರಿವು–ಆಚಾರ ಕಾರ್ಯಕ್ರಮ ನಡೆಯುತ್ತದೆ. ಪ್ರತಿ ಗುರುವಾರ ಮನೆ–ಮನೆ ಬಸವ ಬೆಳಗು ಇಷ್ಟಲಿಂಗ ಕಾರ್ಯಕ್ರಮವನ್ನೂ ಮಾಡಲಾಗುತ್ತದೆ. ಸಮಿತಿ ಕಾರ್ಯ ಶ್ಲಾಘನೀಯ’ ಎಂದು ಹಾಲುಮತ ಸಮಾಜದ ಮುಖಂಡ ನಿಂಗಯ್ಯ ಬೂದಗುಂಪಿ ಹೇಳಿದರು.</p>.<p>ಈ ಹಿಂದೆ ಈ ದೇಗುಲ ಪಾಳುಬಿದ್ದಿತ್ತು. ಬಸವ ಸೇವಾ ಸಮಿತಿಯ ಪದಾಧಿಕಾರಿಗಳು ಊರಿನ ಹಿರಿಯರ ಸಹಾಯದಿಂದ ದೇವಾಲಯ ಆವರಣಕ್ಕೆ ಬಂಡೆ ಹಾಸಿದರು. ಆದ್ದರಿಂದ ಈಗ ಇದು ಗಮನಸೆಳೆಯುತ್ತಿದೆ.</p>.<p>‘ಶರಣ ಡೋಹರ ಕಕ್ಕಯ್ಯನವರ ದೇವಸ್ಥಾನ ನವೀಕರಿಸಬೇಕು. ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಬಸವಾ ಸೇವಾ ಸಮಿತಿ ಸದಸ್ಯನಂದಯ್ಯಸ್ವಾಮಿ ಒತ್ತಾಯಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>