ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿ ಉಪ ನದಿಗಳೊಂದಿಗೆ ಸಂಗಮಗೊಂಡು ಕೆಆರ್ಎಸ್ ಜಲಾಶಯ ತಲುಪಿ ಬಳಿಕ ತಿ.ನರಸೀಪುರ ಬಳಿ ಕಬಿನಿ ಮೊದಲಾದ ಉಪನದಿಗಳ ಜತೆಯಾಗುತ್ತದೆ. ನದಿಯು ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಸಾಗಿ ಶಿವನಸಮುದ್ರ ತಲುಪುತ್ತಿದ್ದಂತೆಯೇ ಧುಮುಕಿ ಗಗನಚುಕ್ಕಿಯಾಗಿ, ಬಳಿಕ ಭರಚುಕ್ಕಿಯಾಗಿ ಹರಿಯುತ್ತದೆ. ಈ ದೃಶ್ಯ ವೈಭವ ನೋಡುಗರನ್ನು ರೋಮಾಂಚನಗೊಳಿಸುತ್ತದೆ.