<p><strong>ಇಸ್ಲಾಮಾಬಾದ್:</strong> ‘ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಕಾಶ್ಮೀರ ಸಮಸ್ಯೆಗೆ ಯುದ್ಧ ಪರಿಹಾರ ಅಲ್ಲ. ಮಾತುಕತೆ ಮೂಲಕವೇ ಈ ಬಿಕ್ಕಟ್ಟನ್ನು ಪರಿಹರಿಸಲು ಸಾಧ್ಯ’ ಎಂದು ಪ್ರಧಾನಿ ಇಮ್ರಾನ್ಖಾನ್ ಪ್ರತಿಪಾದಿಸಿದರು.</p>.<p>ಟಿ.ವಿ ಸಂದರ್ಶನದಲ್ಲಿ ಮಾತ ನಾಡಿದ ಅವರು, ‘ಉಭಯ ದೇಶಗಳ ನಡುವೆ ಮಾತಕತೆ ನಡಯದೇ ಕಾಶ್ಮೀರ ಬಿಕ್ಕಟ್ಟು ಪರಿಹರಿಸಲು ನಮ್ಮ ಮುಂದಿರುವ ಬೇರೆ ಆಯ್ಕೆಗಳ ಕುರಿತು ಚರ್ಚೆ ಸಾಧ್ಯವಿಲ್ಲ’ ಎಂದರು.</p>.<p>‘ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಎರಡು– ಮೂರು ಪರಿಹಾರ ಸೂತ್ರಗಳಿವೆ. ಅವುಗಳ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ’ ಎಂದರು.</p>.<p>‘2004ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಳ್ಳದೇ ಇದ್ದಿದ್ದರೆ ಕಾಶ್ಮೀರ ಸಮಸ್ಯೆ ಬಗೆಹರಿಯುತ್ತಿತ್ತು ಎಂಬ ಮಾತನ್ನು ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ವಿದೇಶಾಂಗ ಸಚಿವ ನಟವರ್ಸಿಂಗ್ ಹೇಳಿದ್ದರು’ ಎಂದೂ ಅವರು ಸ್ಮರಿಸಿದರು.</p>.<p>‘ಭಾರತದೊಂದಿಗೆ ಯುದ್ಧ ನಡೆಯುವ ಸಾಧ್ಯತೆ ಇಲ್ಲ. ಯುದ್ದದಿಂದ ಅನಪೇಕ್ಷಿತ ಪರಿಣಾಮ ಇರುತ್ತದೆ. ಹೀಗಾಗಿ ಎರಡು ದೇಶಗಳು ಇಂತಹ ಸಾಹಸಕ್ಕೆ ಕೈ ಹಾಕವು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ‘ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಕಾಶ್ಮೀರ ಸಮಸ್ಯೆಗೆ ಯುದ್ಧ ಪರಿಹಾರ ಅಲ್ಲ. ಮಾತುಕತೆ ಮೂಲಕವೇ ಈ ಬಿಕ್ಕಟ್ಟನ್ನು ಪರಿಹರಿಸಲು ಸಾಧ್ಯ’ ಎಂದು ಪ್ರಧಾನಿ ಇಮ್ರಾನ್ಖಾನ್ ಪ್ರತಿಪಾದಿಸಿದರು.</p>.<p>ಟಿ.ವಿ ಸಂದರ್ಶನದಲ್ಲಿ ಮಾತ ನಾಡಿದ ಅವರು, ‘ಉಭಯ ದೇಶಗಳ ನಡುವೆ ಮಾತಕತೆ ನಡಯದೇ ಕಾಶ್ಮೀರ ಬಿಕ್ಕಟ್ಟು ಪರಿಹರಿಸಲು ನಮ್ಮ ಮುಂದಿರುವ ಬೇರೆ ಆಯ್ಕೆಗಳ ಕುರಿತು ಚರ್ಚೆ ಸಾಧ್ಯವಿಲ್ಲ’ ಎಂದರು.</p>.<p>‘ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಎರಡು– ಮೂರು ಪರಿಹಾರ ಸೂತ್ರಗಳಿವೆ. ಅವುಗಳ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ’ ಎಂದರು.</p>.<p>‘2004ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಳ್ಳದೇ ಇದ್ದಿದ್ದರೆ ಕಾಶ್ಮೀರ ಸಮಸ್ಯೆ ಬಗೆಹರಿಯುತ್ತಿತ್ತು ಎಂಬ ಮಾತನ್ನು ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ವಿದೇಶಾಂಗ ಸಚಿವ ನಟವರ್ಸಿಂಗ್ ಹೇಳಿದ್ದರು’ ಎಂದೂ ಅವರು ಸ್ಮರಿಸಿದರು.</p>.<p>‘ಭಾರತದೊಂದಿಗೆ ಯುದ್ಧ ನಡೆಯುವ ಸಾಧ್ಯತೆ ಇಲ್ಲ. ಯುದ್ದದಿಂದ ಅನಪೇಕ್ಷಿತ ಪರಿಣಾಮ ಇರುತ್ತದೆ. ಹೀಗಾಗಿ ಎರಡು ದೇಶಗಳು ಇಂತಹ ಸಾಹಸಕ್ಕೆ ಕೈ ಹಾಕವು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>