<p><strong>ಕೆಂಗೇರಿ:</strong> ಸ್ಥಳೀಯ ಸಂಸ್ಥೆಗಳು ಮೂಲಸೌಕರ್ಯ ಒದಗಿಸುವುದರ ಜತೆಗೆ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದು ತಟಗುಪ್ಪೆ ಮೌಂಟ್ ಕಾರ್ಮೆಲ್ ಚರ್ಚ್ ಧರ್ಮಗುರು ಆರ್.ಥಾಮಸ್ ಹೇಳಿದರು.</p>.<p>ಬೆಂಗಳೂರು ದಕ್ಷಿಣ ತಾಲೂಕು ತರಳು ಗ್ರಾಮ ಪಂಚಾಯಿತಿ ವತಿಯಿಂದ ತಟಗುಪ್ಪೆ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದರು.</p>.<p>‘ಉತ್ತಮ ಪರಿಸರ ಹೊಂದಿದ್ದ ಹಳ್ಳಿಗಳು ನಗರೀಕರಣದ ಪ್ರಭಾವಕ್ಕೆ ಒಳಗಾಗಿ ವಾಯುಮಾಲಿನ್ಯ ಜಲಮಾಲಿನ್ಯಗಳಿಗೆ ತುತ್ತಾಗಿ, ಜನರ ಬದುಕು ಸಂಕಷ್ಟಕ್ಕೆ ಸಿಲುಕಿವೆ. ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ’ ಎಂದು ತಿಳಿಸಿದರು.</p>.<p>‘ಗ್ರಾಮ ಸಭೆಯಲ್ಲಿ ಕಂದಾಯ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯವೈಖರಿಯ ಬಗ್ಗೆ ಖಂಡನೆ ವ್ಯಕ್ತವಾಯಿತು. ಇಲಾಖೆಯ ಸವಲತ್ತುಗಳು ಘೋಷಣೆಗೆ ಸೀಮಿತವಾಗಿದೆ. ಜನರನ್ನು ತಲುಪುತ್ತಿಲ್ಲ. ಅಧಿಕಾರಿಗಳು ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಜನರು ಒತ್ತಾಯಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಜಿ.ಮಹೇಶ್ ಕುಮಾರ್ ಮಾತನಾಡಿದರು. ಇದೇ ವೇಳೆ ಬಿಬಿಎಂಪಿ ವತಿಯಿಂದ ಮೂರು ಆಟೊ ಟಿಪ್ಪರ್ ಹಾಗೂ ಒಂದು ಲಾರಿಯನ್ನು ಪಂಚಾಯಿತಿಗೆ ಹಸ್ತಾಂತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ಸ್ಥಳೀಯ ಸಂಸ್ಥೆಗಳು ಮೂಲಸೌಕರ್ಯ ಒದಗಿಸುವುದರ ಜತೆಗೆ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದು ತಟಗುಪ್ಪೆ ಮೌಂಟ್ ಕಾರ್ಮೆಲ್ ಚರ್ಚ್ ಧರ್ಮಗುರು ಆರ್.ಥಾಮಸ್ ಹೇಳಿದರು.</p>.<p>ಬೆಂಗಳೂರು ದಕ್ಷಿಣ ತಾಲೂಕು ತರಳು ಗ್ರಾಮ ಪಂಚಾಯಿತಿ ವತಿಯಿಂದ ತಟಗುಪ್ಪೆ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದರು.</p>.<p>‘ಉತ್ತಮ ಪರಿಸರ ಹೊಂದಿದ್ದ ಹಳ್ಳಿಗಳು ನಗರೀಕರಣದ ಪ್ರಭಾವಕ್ಕೆ ಒಳಗಾಗಿ ವಾಯುಮಾಲಿನ್ಯ ಜಲಮಾಲಿನ್ಯಗಳಿಗೆ ತುತ್ತಾಗಿ, ಜನರ ಬದುಕು ಸಂಕಷ್ಟಕ್ಕೆ ಸಿಲುಕಿವೆ. ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ’ ಎಂದು ತಿಳಿಸಿದರು.</p>.<p>‘ಗ್ರಾಮ ಸಭೆಯಲ್ಲಿ ಕಂದಾಯ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯವೈಖರಿಯ ಬಗ್ಗೆ ಖಂಡನೆ ವ್ಯಕ್ತವಾಯಿತು. ಇಲಾಖೆಯ ಸವಲತ್ತುಗಳು ಘೋಷಣೆಗೆ ಸೀಮಿತವಾಗಿದೆ. ಜನರನ್ನು ತಲುಪುತ್ತಿಲ್ಲ. ಅಧಿಕಾರಿಗಳು ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಜನರು ಒತ್ತಾಯಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಜಿ.ಮಹೇಶ್ ಕುಮಾರ್ ಮಾತನಾಡಿದರು. ಇದೇ ವೇಳೆ ಬಿಬಿಎಂಪಿ ವತಿಯಿಂದ ಮೂರು ಆಟೊ ಟಿಪ್ಪರ್ ಹಾಗೂ ಒಂದು ಲಾರಿಯನ್ನು ಪಂಚಾಯಿತಿಗೆ ಹಸ್ತಾಂತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>