<p><strong>ಕೊಳ್ಳೇಗಾಲ:</strong> ಮಹದೇಶ್ವರ ಬೆಟ್ಟಕ್ಕೆ ಸುಮಾರು 6 ತಾಸುಗಳವರೆಗೆ ಬಸ್ಗಳು ಬಾರದಿರುವುದನ್ನು ಖಂಡಿಸಿ ನೂರಾರು ಪ್ರಯಾಣಿಕರು ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>ಅಮಾವಾಸ್ಯೆ ಪ್ರಯುಕ್ತ ಮಹದೇಶ್ವರ ಬೆಟ್ಟಕ್ಕೆ ತೆರಳಲು ನೂರಾರು ಮಂದಿ, ನಗರದ ಬಸವೇಶ್ವರ ಮಿಲ್ ಸಮೀಪವಿರುವ ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಬಂದಿದ್ದರು. ಆದರೆ, ಗಂಟೆಗಳು ಕಳೆದರೂ ಬೆಟ್ಟಕ್ಕೆ ಹೋಗುವ ಬಸ್ಗಳು ಬರಲಿಲ್ಲ. ಇದರಿಂದ ಆಕ್ರೋಶಗೊಂಡ ಭಕ್ತರು ರಸ್ತೆ ತಡೆ ನಡೆಸಿದರು.</p>.<p>ಹಬ್ಬ, ಜಾತ್ರೆ, ವಿಶೇಷ ಪೂಜೆ ಸಂದರ್ಭದಲ್ಲಿ ಬೆಟ್ಟಕ್ಕೆ ಹೆಚ್ಚುವರಿ ಬಸ್ಗಳನ್ನು ಒದಗಿಸಬೇಕು. ಆದರೆ, ಕೆಎಸ್ಆರ್ಟಿಸಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುವುದರಿಂದ ಭಕ್ತರು ಹಾಗೂ ಪ್ರಯಾಣಿಕರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಬಳಿಕ, ಬೆಟ್ಟಕ್ಕೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದ್ದರಿಂದ ಪ್ರತಿಭಟನೆಯನ್ನು ಕೈಬಿಟ್ಟರು.</p>.<p>ಪ್ರತಿಭಟನೆಯಲ್ಲಿ ಮದ್ದೂರಿನ ಶಶಿ, ಮಲ್ಲಯ್ಯ, ರಾಜಣ್ಣ, ಬೆಂಗಳೂರಿನ ಮಂಟಯ್ಯ, ರಾಮನಗರದ ಕಿಟ್ಟಿ, ಚನ್ನಪಟ್ಟಣದ ಕುಮಾರ, ರಾಜಮ್ಮ, ಸಿದ್ದಮ್ಮ, ಚಂದ್ರಮ್ಮ, ರಾಧಾ, ಚಿನ್ನಮ್ಮ, ಪಾರ್ವತಿ, ಮಾದೇವಮ್ಮ, ಪುಟ್ಟರಾಜು, ಮಹೇಂದ್ರ, ರಂಗರಾಜು, ಶಶಿಕುಮಾರ್, ರಾಜಶೇಖರ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ಮಹದೇಶ್ವರ ಬೆಟ್ಟಕ್ಕೆ ಸುಮಾರು 6 ತಾಸುಗಳವರೆಗೆ ಬಸ್ಗಳು ಬಾರದಿರುವುದನ್ನು ಖಂಡಿಸಿ ನೂರಾರು ಪ್ರಯಾಣಿಕರು ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>ಅಮಾವಾಸ್ಯೆ ಪ್ರಯುಕ್ತ ಮಹದೇಶ್ವರ ಬೆಟ್ಟಕ್ಕೆ ತೆರಳಲು ನೂರಾರು ಮಂದಿ, ನಗರದ ಬಸವೇಶ್ವರ ಮಿಲ್ ಸಮೀಪವಿರುವ ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಬಂದಿದ್ದರು. ಆದರೆ, ಗಂಟೆಗಳು ಕಳೆದರೂ ಬೆಟ್ಟಕ್ಕೆ ಹೋಗುವ ಬಸ್ಗಳು ಬರಲಿಲ್ಲ. ಇದರಿಂದ ಆಕ್ರೋಶಗೊಂಡ ಭಕ್ತರು ರಸ್ತೆ ತಡೆ ನಡೆಸಿದರು.</p>.<p>ಹಬ್ಬ, ಜಾತ್ರೆ, ವಿಶೇಷ ಪೂಜೆ ಸಂದರ್ಭದಲ್ಲಿ ಬೆಟ್ಟಕ್ಕೆ ಹೆಚ್ಚುವರಿ ಬಸ್ಗಳನ್ನು ಒದಗಿಸಬೇಕು. ಆದರೆ, ಕೆಎಸ್ಆರ್ಟಿಸಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುವುದರಿಂದ ಭಕ್ತರು ಹಾಗೂ ಪ್ರಯಾಣಿಕರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಬಳಿಕ, ಬೆಟ್ಟಕ್ಕೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದ್ದರಿಂದ ಪ್ರತಿಭಟನೆಯನ್ನು ಕೈಬಿಟ್ಟರು.</p>.<p>ಪ್ರತಿಭಟನೆಯಲ್ಲಿ ಮದ್ದೂರಿನ ಶಶಿ, ಮಲ್ಲಯ್ಯ, ರಾಜಣ್ಣ, ಬೆಂಗಳೂರಿನ ಮಂಟಯ್ಯ, ರಾಮನಗರದ ಕಿಟ್ಟಿ, ಚನ್ನಪಟ್ಟಣದ ಕುಮಾರ, ರಾಜಮ್ಮ, ಸಿದ್ದಮ್ಮ, ಚಂದ್ರಮ್ಮ, ರಾಧಾ, ಚಿನ್ನಮ್ಮ, ಪಾರ್ವತಿ, ಮಾದೇವಮ್ಮ, ಪುಟ್ಟರಾಜು, ಮಹೇಂದ್ರ, ರಂಗರಾಜು, ಶಶಿಕುಮಾರ್, ರಾಜಶೇಖರ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>