<p><strong>ಮಾಸ್ಕೊ:</strong> ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ವಿಮಾನವೊಂದು ತುರ್ತಾಗಿ ಇಳಿಯುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ.</p>.<p>ಈ ಅವಘಡದಲ್ಲಿ ಇಬ್ಬರು ಮಕ್ಕಳೂ ಸೇರಿ ಕನಿಷ್ಠ 41 ಜನರು ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿದ್ದಾರೆ. ರಷ್ಯಾ ನಿರ್ಮಿತ ‘ಸುಖೊಯ್ ಸೂಪರ್ ಜೆಟ್–100’ ವಿಮಾನ ಷೆರೆಮೆಟ್ಯೆವೊ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಸಿಬ್ಬಂದಿ ಅಪಾಯದ ಸಂದೇಶ ನೀಡಿದರು.</p>.<p>ಮೊದಲ ಬಾರಿ ತುರ್ತು ಭೂಸ್ಪರ್ಶ ಮಾಡುವ ಪ್ರಯತ್ನ ವಿಫಲವಾಯಿತು. ಎರಡನೇ ಬಾರಿ ಭೂಸ್ಪರ್ಶ ಮಾಡಿದಾಗ ಬೆಂಕಿ ತಗುಲಿತು.</p>.<p>ರಷ್ಯಾದ ಮುರ್ಮನ್ಸ್ಕ್ ನಗರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಸಿಬ್ಬಂದಿಯೂ ಸೇರಿ 78 ಜನ ಇದ್ದರು. ಈ ಪೈಕಿ 37 ಮಂದಿ ಅಪಾಯದಿಂದ ಪಾರಾಗಿದ್ದಾರೆ. 11 ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಘಟನೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದಾರೆ. ಬೆಂಕಿ ಅವಘಡದ ಬಗ್ಗೆ ತನಿಖೆ ನಡೆಸಲು ಪ್ರಧಾನಿ ಡಿಮಿಟ್ರಿ ಮೆಡ್ವೆಡೆವ್ ಅವರು ವಿಶೇಷ ಸಮಿತಿ ರಚಿಸಿದ್ದಾರೆ. ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಸ್ಕೊ:</strong> ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ವಿಮಾನವೊಂದು ತುರ್ತಾಗಿ ಇಳಿಯುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ.</p>.<p>ಈ ಅವಘಡದಲ್ಲಿ ಇಬ್ಬರು ಮಕ್ಕಳೂ ಸೇರಿ ಕನಿಷ್ಠ 41 ಜನರು ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿದ್ದಾರೆ. ರಷ್ಯಾ ನಿರ್ಮಿತ ‘ಸುಖೊಯ್ ಸೂಪರ್ ಜೆಟ್–100’ ವಿಮಾನ ಷೆರೆಮೆಟ್ಯೆವೊ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಸಿಬ್ಬಂದಿ ಅಪಾಯದ ಸಂದೇಶ ನೀಡಿದರು.</p>.<p>ಮೊದಲ ಬಾರಿ ತುರ್ತು ಭೂಸ್ಪರ್ಶ ಮಾಡುವ ಪ್ರಯತ್ನ ವಿಫಲವಾಯಿತು. ಎರಡನೇ ಬಾರಿ ಭೂಸ್ಪರ್ಶ ಮಾಡಿದಾಗ ಬೆಂಕಿ ತಗುಲಿತು.</p>.<p>ರಷ್ಯಾದ ಮುರ್ಮನ್ಸ್ಕ್ ನಗರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಸಿಬ್ಬಂದಿಯೂ ಸೇರಿ 78 ಜನ ಇದ್ದರು. ಈ ಪೈಕಿ 37 ಮಂದಿ ಅಪಾಯದಿಂದ ಪಾರಾಗಿದ್ದಾರೆ. 11 ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಘಟನೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದಾರೆ. ಬೆಂಕಿ ಅವಘಡದ ಬಗ್ಗೆ ತನಿಖೆ ನಡೆಸಲು ಪ್ರಧಾನಿ ಡಿಮಿಟ್ರಿ ಮೆಡ್ವೆಡೆವ್ ಅವರು ವಿಶೇಷ ಸಮಿತಿ ರಚಿಸಿದ್ದಾರೆ. ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>