<p>ಉಳ್ಳಾಲ: ನಾಡಿನ ಹೆಮ್ಮೆಯ ಕಲೆ ಯಕ್ಷಗಾನ ಸರ್ಕಾರದಿಂದ ಅಥವಾ ಪ್ರಾಧಿಕಾರದಿಂದ ಬೆಳೆದು ಬಂದಿಲ್ಲ. ಅದು ಜನರಿಂದಲೇ ಉಳಿದಿದೆ ಎಂದು ವಿಶ್ರಾಂತ ಕುಲಪತಿ ಪ್ರೊ. ಬಿ.ಎ ವಿವೇಕ ರೈ ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಗುರುವಾರ ಆಯೋಜಿಸಿದ್ದ ಪ್ರೊ.ಬಿ.ಎ. ವಿವೇಕ ರೈ ಅವರ ವಿದ್ಯಾರ್ಥಿ–ಕಲಾವಿದರ ಕಲಾಭಿನಂದನೆ ಮತ್ತು ತಾಳಮದ್ದಲೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯಕ್ಷಗಾನ ಕಲಿಕೆಯಿಂದ ಹವ್ಯಾಸ ಬೆಳೆದು ಉದ್ಯೋಗದ ಅವಕಾಶವೂ ದೊರೆಯುತ್ತದೆ. ಜೊತೆಯಲ್ಲಿ ಮಾನಸಿಕ ನೆಮ್ಮದಿಯೂ ಸಿಗುತ್ತದೆ. ಈ ಕಲೆಯನ್ನು ವ್ರತದಂತೆ ಅಭ್ಯಾಸ ಮಾಡಬೇಕು ಎಂದು ಅವರು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಮಾತನಾಡಿ ವಿವೇಕ್ ರೈ ಅವರಿಲ್ಲದಿದ್ದರೆ ವಿಶ್ವವಿದ್ಯಾನಿಲಯದ ಪರಿಕಲ್ಪನೆಯೇ ಮೂಡಲು ಸಾಧ್ಯವಿರಲಿಲ್ಲ ಎಂದರು.</p>.<p>ಅಭಿವಂದನಾ ನುಡಿಗಳನ್ನಾಡಿದ ಯಕ್ಷಗಾನ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಅವರು ಪ್ರೊ.ವಿವೇಕ ರೈ ಸಂಶೋಧನೆ, ಜಾನಪದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದರು. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಧನಂಜಯ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಯಿಸುಮ ನಾವಡ ನಿರೂಪಿಸಿದರು.</p>.<p>ಭೀಷ್ಮಾರ್ಜುನ ಕಾಳಗ ತಾಳಮದ್ದಳೆಯಲ್ಲಿ ಭಾಗವತರಾಗಿ ಸುಬ್ರಾಯ ಸಂಪಾಜೆ, ಚೆಂಡೆ/ಮದ್ದಲೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅರ್ಥಧಾರಿಗಳಾಗಿ ಗಣರಾಜ ಕುಂಬಳೆ, ರಾಧಾಕೃಷ್ಣ ಕಲ್ಚಾರ್, ನಾಗವೇಣಿ ಮಂಚಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-29-885483352</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಳ್ಳಾಲ: ನಾಡಿನ ಹೆಮ್ಮೆಯ ಕಲೆ ಯಕ್ಷಗಾನ ಸರ್ಕಾರದಿಂದ ಅಥವಾ ಪ್ರಾಧಿಕಾರದಿಂದ ಬೆಳೆದು ಬಂದಿಲ್ಲ. ಅದು ಜನರಿಂದಲೇ ಉಳಿದಿದೆ ಎಂದು ವಿಶ್ರಾಂತ ಕುಲಪತಿ ಪ್ರೊ. ಬಿ.ಎ ವಿವೇಕ ರೈ ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಗುರುವಾರ ಆಯೋಜಿಸಿದ್ದ ಪ್ರೊ.ಬಿ.ಎ. ವಿವೇಕ ರೈ ಅವರ ವಿದ್ಯಾರ್ಥಿ–ಕಲಾವಿದರ ಕಲಾಭಿನಂದನೆ ಮತ್ತು ತಾಳಮದ್ದಲೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯಕ್ಷಗಾನ ಕಲಿಕೆಯಿಂದ ಹವ್ಯಾಸ ಬೆಳೆದು ಉದ್ಯೋಗದ ಅವಕಾಶವೂ ದೊರೆಯುತ್ತದೆ. ಜೊತೆಯಲ್ಲಿ ಮಾನಸಿಕ ನೆಮ್ಮದಿಯೂ ಸಿಗುತ್ತದೆ. ಈ ಕಲೆಯನ್ನು ವ್ರತದಂತೆ ಅಭ್ಯಾಸ ಮಾಡಬೇಕು ಎಂದು ಅವರು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಮಾತನಾಡಿ ವಿವೇಕ್ ರೈ ಅವರಿಲ್ಲದಿದ್ದರೆ ವಿಶ್ವವಿದ್ಯಾನಿಲಯದ ಪರಿಕಲ್ಪನೆಯೇ ಮೂಡಲು ಸಾಧ್ಯವಿರಲಿಲ್ಲ ಎಂದರು.</p>.<p>ಅಭಿವಂದನಾ ನುಡಿಗಳನ್ನಾಡಿದ ಯಕ್ಷಗಾನ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಅವರು ಪ್ರೊ.ವಿವೇಕ ರೈ ಸಂಶೋಧನೆ, ಜಾನಪದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದರು. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಧನಂಜಯ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಯಿಸುಮ ನಾವಡ ನಿರೂಪಿಸಿದರು.</p>.<p>ಭೀಷ್ಮಾರ್ಜುನ ಕಾಳಗ ತಾಳಮದ್ದಳೆಯಲ್ಲಿ ಭಾಗವತರಾಗಿ ಸುಬ್ರಾಯ ಸಂಪಾಜೆ, ಚೆಂಡೆ/ಮದ್ದಲೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅರ್ಥಧಾರಿಗಳಾಗಿ ಗಣರಾಜ ಕುಂಬಳೆ, ರಾಧಾಕೃಷ್ಣ ಕಲ್ಚಾರ್, ನಾಗವೇಣಿ ಮಂಚಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-29-885483352</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>