2013ರಲ್ಲಿ ಇಲ್ಲಿ ನಡೆದ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ 2015ರಲ್ಲಿ ನಡೆದ ನವರಸ ಉತ್ಸವದಲ್ಲಿ ಗೋಳಗುಮ್ಮಟಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ನಂತರ ಪ್ರತಿ ಶನಿವಾರ ಮತ್ತು ಭಾನುವಾರ ದೀಪಾಲಂಕಾರ ಮುಂದುವರಿದಿತ್ತು. ಕಾರಣಾಂತರಗಳಿಂದ ಸದ್ಯ ಅದು ಸ್ಥಗಿತಗೊಂಡಿದೆ. ಗೋಳಗುಮ್ಮಟ ವೀಕ್ಷಣೆಗೆ ರಾತ್ರಿ 9 ಗಂಟೆಯವರೆಗೆ ಅವಕಾಶ ಕಲ್ಪಿಸಿದರೆ ವಿದ್ಯುತ್, ಕುಡಿಯುವ ನೀರಿನ ಸೌಲಭ್ಯ ಅಗತ್ಯವಾಗಿ ಬೇಕು. ಸ್ವಚ್ಛತಾ ಹಾಗೂ ಭದ್ರತಾ ಸಿಬ್ಬಂದಿ ಹೆಚ್ಚಿಸಬೇಕು. ಇವೆಲ್ಲವೂ ಸಾಕಾರಗೊಂಡಲ್ಲಿ ಪ್ರವಾಸಿಗರಿಗೆ ವಿದ್ಯುತ್ ದೀಪಾಲಂಕರದ ಬೆಳಕಿನಲ್ಲಿ ಗುಮ್ಮಟದ ಸೌಂದರ್ಯ ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದು.