ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ರಾಜ್ಯದ ಸಮಸ್ಯೆಗಳಿಗೆ ಪರಿಹಾರ

Last Updated 9 ಫೆಬ್ರುವರಿ 2018, 8:43 IST
ಅಕ್ಷರ ಗಾತ್ರ

ಜೇವರ್ಗಿ: ‘ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯವಾಗಲಿದೆ’ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು. ಗುರುವಾರ ಪಟ್ಟಣದ ಮಹಿಬೂಬ್ ಫಂಕ್ಷನ್ ಹಾಲ್‌ನಲ್ಲಿ ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಳ್ಳಿಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ತಿಳಿಯಬೇಕು. ಹಳ್ಳಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸಂಘಟಿತ ಹೋರಾಟ ನಡೆಸಬೇಕು ಎಂದರು.

ಬಿಜೆಪಿ ಜಿಲ್ಲಾ ಚುನಾವಣಾ ಪ್ರಣಾಳಿಕೆ ಸಮಿತಿ ಉಸ್ತುವಾರಿ ಸುಭಾಷ ರಾಠೋಡ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಪಕ್ಷದ ಜನಪ್ರತಿನಿಧಿಗಳು ಮುಂದೆ ಬರಬೇಕು. ಜನಪರ, ರೈತಪರ ಸರ್ಕಾರ ನೀಡಲು ಬಿಜೆಪಿ ಬದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡರಾದ ಶಶಿಕಲಾ ತೆಂಗಳಿ, ಲಿಂಗರಾಜ್ ಬಿರಾದಾರ, ಮಲ್ಲಿನಾಥಗೌಡ ಯಲಗೋಡ, ರಮೇಶಬಾಬು ವಕೀಲ, ಹಳ್ಳೆಪ್ಪಾಚಾರ್ಯ ಜೋಶಿ, ತಾಲ್ಲೂಕು ಘಟಕದ ಅಧ್ಯಕ್ಷ ಸಾಯಬಣ್ಣ ದೊಡಮನಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ದಂಡಪ್ಪ ಸಾಹು ಕುಳಗೇರಿ, ಶಿವರಾಜ ಪಾಟೀಲ ರದ್ದೇವಾಡಗಿ, ನಗರ ಘಟಕದ ಅಧ್ಯಕ್ಷ ಷಣ್ಮುಖಪ್ಪ ಸಾಹು ಗೋಗಿ, ಸಿದ್ದಣ್ಣ ಹೂಗಾರ, ಮರೆಪ್ಪ ಬಡಿಗೇರ್, ವಿಜಯಲಕ್ಷ್ಮಿ ಆಂದೋಲಾ, ಗುರುರಾಜ ಸೂಲಹಳ್ಳಿ, ಭೀಮರಾವ್ ಗುಜಗೊಂಡ, ಪುಂಡಲಿಕ ಗಾಯಕವಾಡ, ಕಿಶನರಾವ್ ಹೇಮನೂರ, ಗಿರಿಜಾಶಂಕರ ಅರಳಗುಂಡಗಿ, ಮಲ್ಲಣ್ಣ ಕುಲಕರ್ಣಿ ಕೋಳಕೂರ, ಭೀಮರಾಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT