ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾಕೇಜ್‌ ಪ್ರವಾಸ| ಭಕ್ತರಿಗೆ ಧರ್ಮಸ್ಥಳದಲ್ಲಿ ವಿಶೇಷ ದರ್ಶನ ವ್ಯವಸ್ಥೆಗೆ ಮನವಿ

Last Updated 12 ಫೆಬ್ರುವರಿ 2021, 19:27 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಆಯೋಜಿಸುವ ಪ್ಯಾಕೇಜ್‌ ಪ್ರವಾಸದಲ್ಲಿ ಬರುವ ಭಕ್ತರಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸುವಂತೆ ನಿಗಮದ ಅಧ್ಯಕ್ಷೆ ಶೃತಿ ಅವರು ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಶೃತಿ, ಈ ಕುರಿತ ಮನವಿ ಪತ್ರ ಸಲ್ಲಿಸಿದರು. ನಿಗಮವು ಆಯೋಜಿಸುವ ಪ್ಯಾಕೇಜ್‌ ಪ್ರವಾಸಗಳಲ್ಲಿ ಧರ್ಮಸ್ಥಳ ಭೇಟಿಯು ಪ್ರಮುಖವಾಗಿದೆ. ಪ್ಯಾಕೇಜ್‌ ಪ್ರವಾಸದಲ್ಲಿ ಬರುವ ಭಕ್ತರಿಗೆ ವಿಶೇಷ ದರ್ಶನದ ವ್ಯವಸ್ಥೆಯ ಮೂಲಕ ತ್ವರಿತವಾಗಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿದರೆ ಅನುಕೂಲವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಭೇಟಿಯ ವೇಳೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಉಪಸ್ಥಿತರಿದ್ದರು. ನಿಗಮದ ಬೇಡಿಕೆ ಕುರಿತು ಕ್ಷೇತ್ರಕ್ಕೆ ಹಿಂದಿರುಗಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ವೀರೇಂದ್ರ ಹೆಗ್ಗಡೆ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT