<p><strong>ವಿಜಯಪುರ: </strong>‘ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕ್ಷಮೆ ಕೇಳೋಕೆ ಅವನ್ಯಾರು? ಅವನೇನು ಮೇಲಿಂದ ಬಿದ್ದವ್ನಾ? ಇದೇ ಮೊದಲಲ್ಲ, ಹಿಂದೆಯೂ ಹೀಗೆ ಮಾಡಿದ್ದಾನೆ. ನಮ್ಮ ಧರ್ಮದ ವಿಷಯದಲ್ಲಿ ಅವನ್ದೇನ್ ಕಿರಿಕಿರಿ...’</p>.<p>‘ಮೊದಲು ಅವ್ನ ಸುಧಾರಣೆ ಮಾಡ್ರಿ. ಆಮೇಲೆ ನಮ್ಮನ್ನು ಸುಧಾರಿಸುವಂತ್ರೀ. ಕ್ರಿಯೆಗೆ– ಪ್ರತಿಕ್ರಿಯೆ ಇದ್ದೇ ಇರುತ್ತೆ. ನನಗಷ್ಟೇ ಅಲ್ಲ. ವಿನಾಕಾರಣ ಮೂಗು ತೂರಿಸಬೇಡ ಎಂದು ಅವನಿಗೂ ವಾರ್ನ್ ಮಾಡಿ ಮೊದಲು...’</p>.<p>ಗೃಹ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನವೇ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಮೊಬೈಲ್ ಕರೆ ಮಾಡಿ, ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲಿ ಹರಿಹಾಯ್ದರು.</p>.<p><strong>ರಾಹುಲ್ಗೆ ದೂರು: </strong>ಲಿಂಗಾಯತ ಧರ್ಮದ ವಿಚಾರದಲ್ಲಿ ಸಚಿವ ಶಿವಕುಮಾರ್ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಅದಕ್ಕೆ ನಾನು ತುಪ್ಪ ಸುರಿಯಲ್ಲ. ಈ ವಿಷಯವನ್ನು ರಾಹುಲ್ ಗಾಂಧಿ ಗಮನಕ್ಕೆ ತರಲಾಗುವುದು’ ಎಂದು ಪಾಟೀಲ ತಿಳಿಸಿದರು.</p>.<p>‘ಕ್ಷಮೆ ಕೋರುವ ಅಧಿಕಾರವನ್ನು ಶಿವಕುಮಾರ್ಗೆ ಕೊಟ್ಟವರು ಯಾರು? ಮೊದಲು ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಘಟಿಸಲಿ. ಶಿವಕುಮಾರ್ ಉದ್ದೇಶ ಏನೆಂಬುದು ಗೊತ್ತಾಗಿದೆ’ ಎಂದರು.</p>.<p><strong>ಮುಗಿದ ಅಧ್ಯಾಯ: ಶಾಮನೂರು<br />ಕಲಬುರ್ಗಿ:</strong> ‘ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಮುಗಿದ ಅಧ್ಯಾಯ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೀರಶೈವ–ಲಿಂಗಾಯತ ಎರಡೂ ಒಂದೇ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹೊಡೆದಾಟ, ಬಡಿದಾಟ ಏನಿದ್ದರೂ ಸ್ವಾಮೀಜಿಗಳದ್ದೇ ನಡೆಯುತ್ತಿದೆ’ ಎಂದರು.</p>.<p>‘ವೀರಶೈವ–ಲಿಂಗಾಯತರ ಮಧ್ಯೆ ಭಿನ್ನಮತ ಇಲ್ಲ. ಸ್ವಾಮೀಜಿಗಳನ್ನು ರಾಜಕೀಯದಿಂದ ದೂರವಿಟ್ಟರೆ ಎಲ್ಲವೂ ಸರಿ ಹೋಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>‘ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕ್ಷಮೆ ಕೇಳೋಕೆ ಅವನ್ಯಾರು? ಅವನೇನು ಮೇಲಿಂದ ಬಿದ್ದವ್ನಾ? ಇದೇ ಮೊದಲಲ್ಲ, ಹಿಂದೆಯೂ ಹೀಗೆ ಮಾಡಿದ್ದಾನೆ. ನಮ್ಮ ಧರ್ಮದ ವಿಷಯದಲ್ಲಿ ಅವನ್ದೇನ್ ಕಿರಿಕಿರಿ...’</p>.<p>‘ಮೊದಲು ಅವ್ನ ಸುಧಾರಣೆ ಮಾಡ್ರಿ. ಆಮೇಲೆ ನಮ್ಮನ್ನು ಸುಧಾರಿಸುವಂತ್ರೀ. ಕ್ರಿಯೆಗೆ– ಪ್ರತಿಕ್ರಿಯೆ ಇದ್ದೇ ಇರುತ್ತೆ. ನನಗಷ್ಟೇ ಅಲ್ಲ. ವಿನಾಕಾರಣ ಮೂಗು ತೂರಿಸಬೇಡ ಎಂದು ಅವನಿಗೂ ವಾರ್ನ್ ಮಾಡಿ ಮೊದಲು...’</p>.<p>ಗೃಹ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನವೇ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಮೊಬೈಲ್ ಕರೆ ಮಾಡಿ, ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲಿ ಹರಿಹಾಯ್ದರು.</p>.<p><strong>ರಾಹುಲ್ಗೆ ದೂರು: </strong>ಲಿಂಗಾಯತ ಧರ್ಮದ ವಿಚಾರದಲ್ಲಿ ಸಚಿವ ಶಿವಕುಮಾರ್ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಅದಕ್ಕೆ ನಾನು ತುಪ್ಪ ಸುರಿಯಲ್ಲ. ಈ ವಿಷಯವನ್ನು ರಾಹುಲ್ ಗಾಂಧಿ ಗಮನಕ್ಕೆ ತರಲಾಗುವುದು’ ಎಂದು ಪಾಟೀಲ ತಿಳಿಸಿದರು.</p>.<p>‘ಕ್ಷಮೆ ಕೋರುವ ಅಧಿಕಾರವನ್ನು ಶಿವಕುಮಾರ್ಗೆ ಕೊಟ್ಟವರು ಯಾರು? ಮೊದಲು ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಘಟಿಸಲಿ. ಶಿವಕುಮಾರ್ ಉದ್ದೇಶ ಏನೆಂಬುದು ಗೊತ್ತಾಗಿದೆ’ ಎಂದರು.</p>.<p><strong>ಮುಗಿದ ಅಧ್ಯಾಯ: ಶಾಮನೂರು<br />ಕಲಬುರ್ಗಿ:</strong> ‘ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಮುಗಿದ ಅಧ್ಯಾಯ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೀರಶೈವ–ಲಿಂಗಾಯತ ಎರಡೂ ಒಂದೇ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹೊಡೆದಾಟ, ಬಡಿದಾಟ ಏನಿದ್ದರೂ ಸ್ವಾಮೀಜಿಗಳದ್ದೇ ನಡೆಯುತ್ತಿದೆ’ ಎಂದರು.</p>.<p>‘ವೀರಶೈವ–ಲಿಂಗಾಯತರ ಮಧ್ಯೆ ಭಿನ್ನಮತ ಇಲ್ಲ. ಸ್ವಾಮೀಜಿಗಳನ್ನು ರಾಜಕೀಯದಿಂದ ದೂರವಿಟ್ಟರೆ ಎಲ್ಲವೂ ಸರಿ ಹೋಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>