‘ಶಾಸಕ, ಮಂತ್ರಿಗಳಿರುವ ಕ್ಷೇತ್ರದಲ್ಲಿನ ವಾರ್ಡ್ಗಳ ಸದಸ್ಯರನ್ನು ಮೇಯರ್ ಹುದ್ದೆಗೆ ಪರಿಗಣಿಸಿಲ್ಲ. ಮಂತ್ರಿಗಳಿಲ್ಲದ ಕ್ಷೇತ್ರದ ವಾರ್ಡ್ನ ಸದಸ್ಯರನ್ನು ಪರಿಗಣಿಸಲಾಗಿದೆ’ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಹೇಳಿದರು.
ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೋಹನ್ರಾಜು ಪರ 129 ಹಾಗೂ ವಿರುದ್ಧವಾಗಿ 110 ಮತಗಳು ಚಲಾವಣೆಯಾಗಿವೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಗಂಗಮ್ಮ ಪರ 112 ಹಾಗೂ ವಿರುದ್ಧವಾಗಿ 129 ಮತ ಚಲಾವಣೆಗಿದೆ.
ದೇಶ, ರಾಜ್ಯ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ಆಡಳಿತ ಇರಬೇಕು ಎಂಬ ಬಯಕೆ ಇತ್ತು. ಅದು ಈಗ ಈಡೇರಿದೆ. ಡೆಲ್ಲಿಯಿಂದ ಗಲ್ಲಿವರೆಗೂ ಬಿಜೆಪಿ ಬಾವುಟ ಹಾರುತ್ತಿದೆ ಎಂದು ಕಂದಾಯ ಸಚಿವ, ಚುನಾವಣೆಗೆ ಸರ್ಕಾರದಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ಆರ್. ಅಶೋಕ್ ಹೇಳಿದರು.
‘ಎಲ್ಲದರಲ್ಲೂ ಹುಳುಕು ಹುಡುಕಬೇಡಿ.
ಗೌತಮ್ ಕನ್ನಡಿಗರಲ್ಲ ಎಂದು ಹೇಳುವುದು ಸರಿಯಲ್ಲ. ಅವರನ್ನು ಬಹುಮತದಿಂದ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ. ಗೌಡರಿಗೆ ಅನ್ಯಾಯವಾಗಿದೆ, ಲಿಂಗಾಯತರಿಗೆ ಮೋಸವಾಗಿದೆ ಎಂದೆಲ್ಲ ಹೇಳುವುದು ಸರಿಯಲ್ಲ’ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದರು.
ಉಪಮೇಯರ್ ಸ್ಥಾನದ ಉಮೇದುವಾರರಾಗಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಗಂಗಮ್ಮ ಮತ್ತು ಬಿಜೆಪಿಯಿಂ ರಾಮಮೋಹನ್ ರಾಜು ಕಣದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಉಪ ಮೇಯರ್ ಸ್ಥಾನ ಒಲಿಯುವುದು ಬಹುತೇಕ ಖಚಿತ.
ಬಿಜೆಪಿ ಬೆಂಗಳೂರು ಕಾರ್ಯದರ್ಶಿಯಾಗಿದ್ದ ಗೌತಮ್ ಜೈನ್, 2013-14ರಲ್ಲಿ ಬಿಬಿಎಂಪಿ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಆರ್ಎಸ್ಎಸ್ ಹಿನ್ನೆಲೆಯೂ ಅವರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಜೋಗುಪಾಳ್ಯ ವಾರ್ಡ್ ಸಂಖ್ಯೆ 89ರ ಸದಸ್ಯ ಬಿಜೆಪಿಯ ಗೌತಮ್ ಕುಮಾರ್ ಜೈನ್ ಬಿ.ಕಾಂ ಪದವೀಧರ. ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಶಾಂತಿನಗರದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯದರ್ಶಿಯಾಗಿ, ರಾಜ್ಯ ಯುವ ಮೋರ್ಚಾದ ಖಜಾಂಚಿಯಾಗಿ ಕೆಲಸ ಮಾಡಿದ್ದಾರೆ.
‘ನಮ್ಮ ನಾಯಕರಾದ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರಿಗೆ ಒಳ್ಳೇ ಹೆಸರು ಬರುವಂತೆ ಕೆಲಸ ಮಾಡುತ್ತೇನೆ. ಇದು ನಮ್ಮ ಬೆಂಗಳೂರು, ನಾವು ಚೆನ್ನಾಗಿ ಕಟ್ತೀವಿ’ –ಗೌತಮ್ಕುಮಾರ್
ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಾಲಿಕೆ ಸದಸ್ಯನಾಗುವ ಕನಸೇ ನನಗಿರಲಿಲ್ಲ. ಅಂಥದ್ದರಲ್ಲಿ ಪಕ್ಷ–ಸಂಘಟನೆಗೆ ನನಗೆ ಮೇಯರ್ ಸ್ಥಾನ ಕೊಟ್ಟಿದೆ. ನಾನು ಕೃತಜ್ಞನಾಗಿರುತ್ತೇನೆ.