ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ಕಾಯ್ದೆ ಪ್ರತಿಭಟನೆ| ಮಂಗಳೂರಿನಲ್ಲಿ 20 ಪೊಲೀಸರಿಗೆ ಗಾಯ, ಇಬ್ಬರು ನಾಗರಿಕರು ಐಸಿಯುನಲ್ಲಿ
LIVE

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ವಿವಿಧ ಕಡೆಗಳಲ್ಲಿ ಪ್ರತಿಭಟನೆಯ ಕಿಚ್ಚು ಹೊತ್ತಿಕೊಂಡಿದೆ. ವಿವಿಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೆಲವು ಕಡೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ...
Last Updated 19 ಡಿಸೆಂಬರ್ 2019, 14:42 IST
ಅಕ್ಷರ ಗಾತ್ರ
14:2719 Dec 2019

ಮಂಗಳೂರಿನಲ್ಲಿ 20 ಪೊಲೀಸರು, ಇಬ್ಬರು ನಾಗರಿಕರಿಗೆ ಗಾಯ

ಮಂಗಳೂರಿನಲ್ಲಿ ಪೌರತ್ವ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆಯಲ್ಲಿ ಜರುಗಿದ ಹಿಂಸಾಚಾರದಲ್ಲಿ 20 ಪೊಲೀಸರು ಹಾಗೂ  ಇಬ್ಬರು ನಾಗರಿಕರಿಗೆ ಗಾಯಗೊಂಡಿದ್ದಾರೆ. ಇಬ್ಬರು ನಾಗರಿಕರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ತಿಳಿಸಿದ್ದಾರೆ. 

13:5219 Dec 2019

ಮಂಗಳೂರು ನಗರ ವ್ಯಾಪ್ತಿಯಲ್ಲಿ ನಾಳೆ (ಶನಿವಾರ) ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

13:2719 Dec 2019

ಬೆಂಗಳೂರಿನಲ್ಲಿ IIMB ವಿದ್ಯಾರ್ಥಿಗಳ ಪ್ರತಿಭಟನೆ 

ಬೆಂಗಳೂರು: ಪೌರತ್ವ ಕಾಯ್ದೆ ವಿರುದ್ಧ ಬನ್ನೇರುಘಟ್ಟ ರಸ್ತೆಯಲ್ಲಿ IIMB ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಾಲೇಜು ಆವರಣದ ಹೊರಗೆ ಪ್ರತಿಭಟನೆ ನಡೆಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಆವರಣದೊಳಗೆ ಕುಳಿತು, ತಮ್ಮ ಪಾದರಕ್ಷೆಗಳನ್ನು ಹೊರಗೆ ಬಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪಾದರಕ್ಷೆ ವಾಪಸ್ಸು ಪಡೆಯದಿರಲು ವಿದ್ಯಾರ್ಥಿಗಳ ನಿರ್ಧಾರ ಮಾಡಿದ್ದಾರೆ. ಪ್ರತಿಭಟನೆಗೆ ನಿರ್ಬಂಧಿಸಿದ್ದರಿಂದ ಈ ವಿನೂತನ ಪ್ರತಿಭಟನೆ ನಡೆಸಲಾಯಿತು ಎನ್ನಲಾಗಿದೆ.

 ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ನಡುವೆ  ಮಾತಿನ ಚಕಮಕಿ ನಡೆದಿದ್ದು, ಪ್ರತಿಭಟನೆ ವಾಪಸ್ಸು ಪಡೆಯಲು ಆಡಳಿತ ಮಂಡಳಿ ಒತ್ತಡ ಹಾಕುತ್ತಿದ್ದು, ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮದ ಬೆದರಿಕೆ ಹಾಕಲಾಗಿದೆ ಎಂದು ಕೆಲ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

13:0119 Dec 2019

ಮಂಗಳೂರಿನಲ್ಲಿ ಉದ್ರಿಕ್ತ ವಾತಾವರಣ, ಕರ್ಫ್ಯೂ 

ಮಂಗಳೂರು: ನಗರದಲ್ಲಿ ಉದ್ರಿಕ್ತ ವಾತಾವರಣ ಮುಂದುವರಿದಿದ್ದು, ಹಂಪನಕಟ್ಟೆ, ಬಂದರು ಸೇರಿದಂತೆ ಉಪನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಂಗಳೂರು ಉತ್ತರ, ದಕ್ಷಿಣ, ಪೂರ್ವ, ಬರ್ಕೆ ಮತ್ತು ಉರ್ವ ಠಾಣೆ ವ್ಯಾಪ್ತಿಯಲ್ಲಿ 20 ರಂದು ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

11:4419 Dec 2019

ಪ್ರತಿಭಟನೆಯಿಂದ ಹಿಂದೆ ಸರಿಯಬೇಡಿ–ಮಮತಾ ಬ್ಯಾನರ್ಜಿ

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವವವರೆಗೂ ಪ್ರತಿಭಟನೆಯನ್ನು ಮುಂದುವರೆಸಿ, ಯಾವುದೇ ಕಾರಣಕ್ಕೂ ‍ಪ್ರತಿಭಟನೆಯಿಂದ ಹಿಂದೆ ಸರಿಯಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

11:2319 Dec 2019

ಮುಂಬೈನ ಕ್ರಾಂತಿ ಮೈದಾನದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನಾಕಾರರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಪೊಲೀಸರು ವ್ಯಾಪಕ ಬಂದೋ ಬಸ್ತ್‌ ಮಾಡಿದ್ದಾರೆ. 

11:0919 Dec 2019

ಮಹಾರಾಷ್ಟ್ರದಲ್ಲಿ ಪೌರತ್ವ ಕಾಯ್ದೆ ವಿರೋದಿಸಿ ಪ್ರತಿಭಟನೆಗಳು ನಡೆಯುತ್ತಿದ್ದು ಮುಂಬೈ, ನಾಗಪುರ ಸೇರಿದಂತೆ ಹಲವು ಕಡೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

11:0519 Dec 2019

ದೆಹಲಿಯಲ್ಲಿ ಪೌರತ್ವ ಕಾಯ್ದೆ ವಿರೋದಿಸಿ ಪ್ರತಿಭಟನಾ ನಡೆಸುವವರನ್ನು ಪೊಲೀಸರು ಇಲ್ಲಿನ ಸುರ್ಜೆವಾಲ್‌ ಕ್ರೀಡಾಂಗಣದಲ್ಲಿ ಬಂಧಿಸಿದ್ದಾರೆ. ಪ್ರತಿಭಟನಾಕಾರರಿಗೆ ಪೊಲೀಸರು ಹಣ್ಣುಗಳನ್ನು ನೀಡಿದರು

10:4319 Dec 2019

ಬೆಂಗಳೂರು: ಚದುರಿದ ಪ್ರತಿಭಟನಾಕಾರರು. ಸಂಚಾರ ಸಹಜ ಸ್ಥಿತಿಗೆ ಮರಳಲು ಇನ್ನೂ ಸಮಯ ಬೇಕು.

ಬೆಂಗಳೂರು: ಚದುರಿದ ಪ್ರತಿಭಟನಾಕಾರರು. ಸಂಚಾರ ಸಹಜ ಸ್ಥಿತಿಗೆ ಮರಳಲು ಇನ್ನೂ ಸಮಯ ಬೇಕು.

10:4119 Dec 2019

ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಪೌರತ್ವ ಕಾಯ್ದೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ವಾಹನಗಳಿಗೆ ಮತ್ತು ಪೊಲೀಸ್‌ ಠಾಣೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.