LIVE| ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ| ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು
LIVE
ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು 100 ದಿನಗಳಿಂದ ನಡೆಸುತ್ತಿದ್ದ ಧರಣಿ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೋರಾಟಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಲಾಗಿದ್ದು, ಹೋರಾಟಗಾರರು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಕನ್ನಡ ಕಾರ್ಯಕರ್ತರು ಮೆರವಣಿಗೆ ನಡೆಸಲಿದ್ದಾರೆ.ಈ ಹೋರಾಟಕ್ಕೆ ಹಲವು ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳೂ ಬೆಂಬಲ ನೀಡಿವೆ. ಈ ಕುರಿತ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.
Bengaluru: CM meets pro-Kannada activists; they submitted a memorandum to him. Several pro-Kannada groups have called for K'taka bandh today demanding implementation of Sarojini Mahishi report, recommending certain percentage of jobs to Kannadigas in pvt & public sector companies pic.twitter.com/9KpflFs3PT
Tanveer, President of Ola, Uber Drivers’ and Owners’ Association, Bengaluru: We have told our drivers to stop services till evening. More than 70,000 vehicles usually run, but we are stopping the service today. We are supporting the bandh. #Karnataka
ಬಳ್ಳಾರಿಯಲ್ಲಿ ಬೃಹತ್ ಮೆರವಣಿಗೆಗೆ ಕನ್ನಡ ಸಂಘಟನೆಗಳು ಸಜ್ಜು
04:4513 Feb 2020
ಹಾವೇರಿಯಲ್ಲಿ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ +
04:3213 Feb 2020
ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಕುರಿತ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಹಲವು ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಆದರೆ, ಜನಜೀವನ ಎಂದಿನಂತೆ ಸಾಗಿದ್ದು, ಸಾರಿಗೆ ಸಂಸ್ಥೆ ಬಸ್ಗಳು, ರೈಲುಗಳ ಸಂಚಾರ ಅಬಾಧಿತವಾಗಿ ಮುಂದುವರಿದಿದೆ. ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.