ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LIVE| ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ| ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು 
LIVE

ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು 100 ದಿನಗಳಿಂದ ನಡೆಸುತ್ತಿದ್ದ ಧರಣಿ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೋರಾಟಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದ್ದು, ಹೋರಾಟಗಾರರು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಕನ್ನಡ ಕಾರ್ಯಕರ್ತರು ಮೆರವಣಿಗೆ ನಡೆಸಲಿದ್ದಾರೆ.ಈ ಹೋರಾಟಕ್ಕೆ ಹಲವು ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳೂ ಬೆಂಬಲ ನೀಡಿವೆ. ಈ ಕುರಿತ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.
Last Updated 13 ಫೆಬ್ರುವರಿ 2020, 7:31 IST
ಅಕ್ಷರ ಗಾತ್ರ
07:3113 Feb 2020

ಬೀದರ್‌: ಕನ್ನಡ ಸಂಘಟನೆಗಳ ಪ್ರತಿಭಟನೆ

ಬೀದರ್‌:  ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ನಗರದ  ಜಿಲ್ಲಾಧಿಕಾರಿ ಕಚೇರಿ ಸಮೀಪ ಗುರುವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆ(ರಿ) ಸ್ವಾಭಿಮಾನ ಸೇನೆ, ಕರ್ನಾಟಕ ವಿಶ್ವನಿರ್ಮಾಣ ಸೇನೆ ಹಾಗೂ ದಲಿತ ಸಮರ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿದರು. ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಜಿಲ್ಲೆಯಲ್ಲಿ ಯಾವುದೇ ಸಂಘಟನೆ ಬಂದ್‌ಗೆ ಕರೆ ನೀಡಿರಲಿಲ್ಲ.  ಬಸ್ ಹಾಗೂ ಆಟೊ, ಸಂಚಾರ ಎಂದಿನಂತಿದೆ.  ಮಾರುಕಟ್ಟೆ ವಹಿವಾಟು ಸಹಜವಾಗಿದ್ದು, ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

06:1613 Feb 2020

ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು 

ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿರುವ ಕನ್ನಡ ಪರ ಹೋರಾಟಗಾರರು ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.  

05:3313 Feb 2020

ಓಲಾ, ಉಬರ್‌ ಕ್ಯಾಬ್‌ ಚಾಲಕರ ಸಂಘದಿಂದ ಬಂದ್‌ಗೆ ಬೆಂಬಲ

ಓಲಾ, ಉಬರ್‌ ಸೇರಿದಂತೆ ಕ್ಯಾಬ್‌ ಚಾಲಕರ ಸಂಘಟನೆಗಳು ಇಂದಿನ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ. ಈ ಕುರಿತು ಸಂಘಟನೆ ಮುಖ್ಯಸ್ಥ ತನ್ವೀರ್‌ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸೇವೆ ಸ್ಥಗಿತಗೊಳಿಸುವಂತೆ ನಮ್ಮ ಚಾಲಕರಿಗೆ ಸೂಚಿಸಿದ್ದೇವೆ. ನಾವು ಬಂದ್‌ಗೆ ಬೆಂಬಲ ನೀಡಿದ್ದೇವೆ. ಸಂಘದ ಅಡಿಯಲ್ಲಿ  ನೊಂದಾಯಿಸಲ್ಪಟ್ಟ 70 ಸಾವಿರ ವಾಹನಗಳು ನಿತ್ಯ ಸಂಚರಿಸುತ್ತವೆ. ಆದರೆ, ಇಂದು ಸೇವೆ ನಿಲ್ಲಿಸುತ್ತಿದ್ದೇವೆ ಎಂದು ತನ್ವೀರ್‌ ಹೇಳಿದ್ದಾರೆ. 

04:2413 Feb 2020

ಮುನ್ನೆಚ್ಚರಿಕಾ ಕ್ರಮವಾಗಿ 180 ಮಂದಿ ವಶಕ್ಕೆ

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್ ಗಳು ಸೇರಿ 180 ಮಂದಿಯನ್ನು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಉತ್ತರ ವಿಭಾಗದ ಪೊಲೀಸರು ಗುರುವಾರ ನಸುಕಿನಲ್ಲಿ ವಶಕ್ಕೆ ಪಡೆದಿದ್ದಾರೆ. ನಸುಕಿನಲ್ಲಿ 4 ಗಂಟೆಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬುಧವಾರ ರಾತ್ರಿ ಪೊಲೀಸ್ ಅಧಿಕಾರಿಗಳು ವಿಶೇಷ ಗಸ್ತು ನಡೆಸಿದ್ದಾರೆ. ಈ ವೇಳೆ, ಹಿಂದೆ ಕಾವೇರಿ ಹೋರಾಟ ಸೇರಿದಂತೆ ಹಲವು ಪ್ರತಿಭಟನೆಗಳಲ್ಲಿ ಭಾಗಿಯಾದವರು ಸೇರಿ ರೌಡಿಶೀಟರ್ ಗಳನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದವರ ಪೈಕಿ ಕೆಲವರು ಶಂಕಾಸ್ಪದವಾಗಿ ತಿರುಗಾಡುತ್ತಿದ್ದರು ಎಂದು ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ತಿಳಿಸಿದರು.

04:4713 Feb 2020

ಬಳ್ಳಾರಿಯಲ್ಲಿ ಬೃಹತ್‌ ಮೆರವಣಿಗೆಗೆ ಕನ್ನಡ ಸಂಘಟನೆಗಳು ಸಜ್ಜು

ವಾಹನಗಳು ಸಂಚರಿಸುತ್ತಿವೆ. ಅಂಗಡಿ, ಹೋಟೆಲುಗಳಲ್ಲಿ ವ್ಯಾಪಾರ ಚಟುವಟಿಕೆ ನಡೆಯುತ್ತಿದೆ. ಕರ್ನಾಟಕ ಸಂಘಟನೆಗಳ ಒಕ್ಕೂಟ ಮತ್ತು ಪ್ರಗತಿಪರ ಹೋರಾಟಗಾರರು ನಗರದ ನಗರೂರು ನಾರಾಯಣರಾವ್ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲು ‌ಸಜ್ಜಾಗಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.

04:4513 Feb 2020

ಹಾವೇರಿಯಲ್ಲಿ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ +

ಹಾವೇರಿ: ಡಾ.ಸರೋಜಿನಿ ಮಹಿಷಿ ವರದಿ  ಆಗ್ರಹಿಸಿ ವಿವಿಧಪರ ಸಂಘಟನೆಗಳು ಕರ್ನಾಟಕ ಬಂದಗೆ ಕರೆ ನೀಡಿವೆ.  ಆದರೆ  ಜಿಲ್ಲೆಯಲ್ಲಿ ಯಾವುದೇ ಬಂದ್ ಇಲ್ಲ . ಜಿಲ್ಲೆಯಾದ್ಯಂತ ಎಂದಿನಂತೆ ನಗರದಲ್ಲಿ ಬಸ್, ಆಟೊ ಹಾಗೂ ಖಾಸಗಿ ವಾಹನಗಳು ಸಂಚರಿಸುತ್ತೀವೆ. ಎಂದಿನಂತೆ ಜನಜೀವನವಿದ್ದು ಅಂಗಡಿ ಮುಂಗಟ್ಟುಗಳು ತೆರೆದಿವೆ.

    ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಎಂದಿನಂತೆ ಕಾರ್ಯ ನಿರ್ವಹಿಸಲಿವೆ‌. ಅಲ್ಲದೆ ವಿದ್ಯಾರ್ಥಿಗಳ ಪೂರ್ವತಯಾರಿ ಪರೀಕ್ಷೆಗಳು ಸಹ ನಡೆಯುತ್ತಿವೆ. 

ಈ ಮಧ್ಯೆ ಹಾವೇರಿ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲಿವೆ‌‌‌‌.

04:3213 Feb 2020
04:2313 Feb 2020
04:2113 Feb 2020

ರಾಯಚೂರು: ಬಂದ್‌ಗೆ ಪ್ರತಿಕ್ರಿಯೆ ಇಲ್ಲ

ರಾಯಚೂರು: ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಕೆರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಪೊಲೀಸರು ಜನದಟ್ಟಣೆಯ ಕೇಂದ್ರಗಳಲ್ಲಿ ಬಂದೋಬಸ್ತ್ ಮಾಡಿದ್ದು, ಮಧ್ಯಾಹ್ನ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಜನಜೀವನ ಎಂದಿನಂತಿದೆ. ಶಾಲಾ, ಕಾಲೇಜುಗಳು ಕಾರ್ಯಾರಂಭಿಸಿವೆ. ವ್ಯಾಪಾರ, ಸರ್ಕಾರಿ ಬಸ್ ಹಾಗೂ ಇತರೆಲ್ಲ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿಲ್ಲ.

04:2013 Feb 2020

ಬಂದ್ ಆತಂಕದಲ್ಲಿ ಮುಂಚಿತವಾಗಿಯೇ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು

ದೇವನಹಳ್ಳಿ: ಬಂದ್ ಆತಂಕದಿಂದ ಕೆಂಪೇಗೌಡ ಅಂತರರಾಷ್ಟ್ರೀಯ. ವಿಮಾನ ನಿಲ್ದಾಣದಲ್ಲಿ ದಟ್ಟಣೆ ಉಂಟಾಗಿದೆ. ಬೆಳಗ್ಗೆ ಮಾತ್ರವಲ್ಲದೆ ಮಧ್ಯಾಹ್ನದ ಬಳಿಕ ಹೊರರಾಜ್ಯ ಮತ್ತು ದೂರದ ಪ್ರದೇಶಗಳಿಗೆ ತೆರಳುವ  ಪ್ರಯಾಣಿಕರು ಬಂದು ಸೇರಿದ್ದು ಹೆಚ್ಚಿನ ಜನದಟ್ಟಣೆ ಕಂಡುಬಂತು.
ಟಿಕೆಟ್ ಇದ್ದವರನ್ನು ಮಾತ್ರ ಸದ್ಯ ವಿಮಾನನಿಲ್ದಾಣದ ಒಳಕ್ಕೆ ಬಿಡಲಾಗುತ್ತಿದೆ.