ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆ: ನೂತನ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ
LIVE

ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಕಾಂಗ್ರೆಸ್‌–ಜೆಡಿಎಸ್‌ನಿಂದ ಬಂಡೆದ್ದು ಬಿಜೆಪಿಗೆ ವಲಸೆ ಬಂದ ಬಳಿಕ ಉಪಚುನಾವಣೆಯಲ್ಲಿ ಗೆದ್ದು ‘ಅರ್ಹ’ರಾದ 10 ಶಾಸಕರು ಸಚಿವರಾಗಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜುಭಾಯ್‌ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
Last Updated 6 ಫೆಬ್ರುವರಿ 2020, 10:20 IST
ಅಕ್ಷರ ಗಾತ್ರ
07:3206 Feb 2020

ಸಂಪುಟ ವಿಸ್ತರಣೆ: ನೂತನ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಮಾಡಿದ್ದು 10 ಜನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಎಲ್ಲರಿಗೂ ಶನಿವಾರದೊಳಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. 

06:0606 Feb 2020

ಶೀಘ್ರ ಸಂಪುಟ ಪುನರ್ ರಚನೆ: ಕಟೀಲ್

ಮುಖ್ಯಮಂತ್ರಿ ಅವರ ನಿರ್ಧಾರದಂತೆ ಮಂತ್ರಿಮಂಡಲ ವಿಸ್ತರಣೆ ಆಗಿದೆ. ಶೀಘ್ರ ಸಂಪುಟ ಪುನರ್ ರಚನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಪಕ್ಷದ ಶಾಸಕರು ಅಸಮಾಧಾನಗೊಳ್ಳುವ ಅಗತ್ಯ ಇಲ್ಲ, ಎಲ್ಲರಿಗೂ ಅವಕಾಶ ಸಿಗಲಿದೆ, ಶೀಘ್ರವಾಗಿ ಸಂಪುಟ ಪುನರ್ ರಚನೆಗೊಳ್ಳಲಿದೆ ಎಂದರು.

05:5106 Feb 2020

ಚಿತ್ರದುರ್ಗದಲ್ಲಿ ಶಾಸಕ ತಿಪ್ಪಾರೆಡ್ಡಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮತ್ತು ಬೆಳಗಾವಿಗೆ ಸಂಪುಟದಲ್ಲಿ ಹೆಚ್ಚಿನ ಪಾತಿನಿದ್ಯ ದೊರೆತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

05:3806 Feb 2020

ಬಿಜೆಪಿಯ ಹಿರಿಯ ಶಾಸಕರಾದ ಉಮೇಶ್‌ ಕತ್ತಿ, ಮುರುಗೇಶ್‌ ನಿರಾಣಿ ಹಾಗೂ ಸಿ.ಪಿ.ಯೋಗೇಶ್ವರ್‌ ಕಾರ್ಯಕ್ರಮಕ್ಕೆ ಗೈರಾಗಿದ್ದರು.

05:2806 Feb 2020

ರಾಷ್ಟ್ರಗೀತೆ ನುಡಿಸುವ ಮೂಲಕ ಪದಗ್ರಹಣ ಕಾರ್ಯಕ್ರಮ ಮುಕ್ತಾಯ

05:2606 Feb 2020

ಶ್ರೀಮಂತ ಪಾಟೀಲ್‌ ಪ್ರಮಾಣವಚನ

ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶ್ರೀಮಂತ ಪಾಟೀಲ್‌

05:2306 Feb 2020

ನಾರಾಯಣಗೌಡ ಪದಗ್ರಹಣ

ಮಂಡ್ಯದ ಕೆ.ಆರ್. ಪೇಟೆಯ ಕೈಗೋವನ ಹಳ್ಳಿಯ ಪುಟ್ಟಮ್ಮ ಚಿಕ್ಕೆಗೌಡನ ಮಗನಾದ ನಾರಾಯಣಗೌಡ ಆದ ನಾನು ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇನೆ

05:2006 Feb 2020

ಕೆ. ಗೋಪಾಲಯ್ಯ ಪ್ರಮಾಣವಚನ ಸ್ವೀಕಾರ

ದೇವರು ಮತ್ತು ತಂದೆ ತಾಯಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕಾಮಾಕ್ಷಿಪಾಳ್ಯ ಕೆ ಗೋಪಾಲಯ್ಯ

05:1706 Feb 2020

ಬಿ.ಸಿ. ಪಾಟೀಲ್‌ ಪದಗ್ರಹಣ

ದೇವರು, ನನ್ನ ಕ್ಷೇತ್ರದ ಜನತೆ, ತಂದೆ ತಾಯಿ ಹಾಗೂ ಬಸವಣ್ಣನವರ ಹೆಸರಿನಲ್ಲಿ ಬಿ.ಸಿ.ಪಾಟೀಲ್‌ ಪ್ರಮಾಣವಚನ ಸ್ವೀಕಾರ ಮಾಡಿದರು.

05:1506 Feb 2020

ಶಿವರಾಮ್‌ ಹೆಬ್ಬಾರ್‌ ಪ್ರಮಾಣವಚನ ಸ್ವೀಕರಿಸಿದರು

ದೇವರು ಮತ್ತು ತಂದೆ ತಾಯಿ ಹೆಸರಿನಲ್ಲಿ ಶಿವರಾಮ್‌ ಹೆಬ್ಬಾರ್‌ ಪ್ರಮಾಣವಚನ ಸ್ವೀಕರಿಸಿದರು