ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಗರಿಗೆದರಿದ ರಾಜಕೀಯ, ಹರಿಯಾಣದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು
LIVE

ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳ ಮತ ಎಣಿಕೆ 8ಕ್ಕೆ ಆರಂಭವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ–ಶಿವಸೇನೆ ಮೈತ್ರಿಕೂಟ ಮತ್ತು ಹರಿಯಾಣದಲ್ಲಿ ಬಿಜೆಪಿ ನಿಚ್ಚಳ ಬಹುಮತ ಸಾಧಿಸಲಿವೆ ಎಂದು ಮತಗಟ್ಟೆ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ. ಆದರೆ ಒಟ್ಟಾರೆ ಸ್ಥಾನಗಳ ಸಂಖ್ಯೆ ಏರುಪೇರಾಗುವ ನಿರೀಕ್ಷೆಯೂ ವ್ಯಕ್ತವಾಗಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿಯ ನಂತರ ನಡೆದ ಮೊದಲ ವಿಧಾನಸಭೆ ಚುನಾವಣೆಗಳು ಇವು. ಎರಡೂ ರಾಜ್ಯಗಳ ಫಲಿತಾಂಶ ಮುಂದಿನ ಹಲವು ಚುನಾವಣೆಗಳಿಗೆ ರಾಜಕೀಯ ಪಕ್ಷಗಳ ಕಾರ್ಯತಂತ್ರ ನಿರ್ಧರಿಸಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸರಳ ಬಹುಮತ ಪಡೆದಿದೆ. ಹರಿಯಾಣದಲ್ಲಿ ಬಿಜೆಪಿ 40 ಸ್ಥಾನ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
Last Updated 24 ಅಕ್ಟೋಬರ್ 2019, 12:09 IST
ಅಕ್ಷರ ಗಾತ್ರ
12:0324 Oct 2019

ಹರಿಯಾಣದಲ್ಲಿ ಪಕ್ಷೇತರರ ಜೊತೆಗೂಡಿ ಸರ್ಕಾರ ರಚನೆ: ಬಿಜೆಪಿ

ಹರಿಯಾಣದಲ್ಲಿ ಪಕ್ಷೇತರ ಶಾಸಕರ ಜೊತೆಗೂಡಿ ಸರ್ಕಾರ ರಚನೆ ಮಾಡುವುದಾಗಿ ಬಿಜೆಪಿಯ ಹಿರಿಯ ನಾಯಕರು ಸುಳಿವು ನೀಡಿದ್ದಾರೆ. ಬಿಜೆಪಿ 40 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಸರಳ ಬಹುಮತಕ್ಕೆ 6 ಸ್ಥಾನಗಳ ಕೊರತೆ ಇರುವುದರಿಂದ ಪಕ್ಷೇತರ ಶಾಸಕರ ಜೊತೆ ಸೇರಿ ಸರ್ಕಾರ ರಚಿಸುವುದಾಗಿ ಹೇಳಿದ್ದಾರೆ. 

11:5124 Oct 2019

ಮುಖ್ಯಮಂತ್ರಿ ಹುದ್ದೆ ಕುರಿತಂತೆ ಬಿಜಿಪಿ ಜೊತೆ ಚರ್ಚೆ: ಶಿವಸೇನೆ ಮುಖ್ಯಸ್ಥ ಉದ್ದವ್‌ ಠಾಕ್ರೆ 

ಬಿಜೆಪಿ ಜೊತೆ ಈ ಹಿಂದೆ ಮಾಡಿಕೊಂಡ ಒಪ್ಪಂದಕ್ಕೆ ನಾವು ಬದ್ಧರಾಗಿದ್ದು ಮುಖ್ಯಮಂತ್ರಿ ಹುದ್ದೆ ಕುರಿತಂತೆ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡುತ್ತೇವೆ ಎಂದು ಶಿವಸೇನೆ ಮುಖ್ಯಸ್ಥ ಉದ್ದವ್‌ ಠಾಕ್ರೆ ಹೇಳಿದ್ದಾರೆ. 

09:5424 Oct 2019

ಶಿವಸೇನೆ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ: ಶರದ್‌ ಪವಾರ್‌

ಮಹಾರಾಷ್ಟ್ರದಲ್ಲಿ 55 ಸ್ಥಾನಗಳನ್ನು ಪಡೆದಿರುವ ಎನ್‌ಸಿಪಿ ಪಕ್ಷ ಇತರರು ಹಾಗೂ ಶಿವಸೇನೆ ನೆರವಿನಿಂದ ಸರ್ಕಾರ ರಚಿಸುವ ವದಂತಿಗಳನ್ನು ತಳ್ಳಿ ಹಾಕಿರುವ ಶರದ್‌ ಪವಾರ್‌ ಶಿವಸೇನೆ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 

08:5124 Oct 2019

ವಿರೋಧ ಪಕ್ಷದಲ್ಲಿ ಕೂರಲು ಜನರ ಆದೇಶ

'ಅಧಿಕಾರ ವಹಿಸಲು ಅವಕಾಶ ಸಿಗುತ್ತದೆ, ಆದರೆ ನೆಲದ ಮೇಲೆ ಕಾಲೂರಿರುವುದು ಮುಖ್ಯ' ಎಂದು ಬಿಜೆಪಿ ವಿರುದ್ಧ ಶರದ್‌ ಪವಾರ್‌ ಆಕ್ರೋಶ ವ್ಯಕ್ತಪಡಿಸಿ್ದರು. ಜನರು ನಮ್ಮನ್ನು ವಿರೋಧ ಪಕ್ಷದಲ್ಲಿ ಕೂರಲು ಆದೇಶಿಸಿದ್ದಾರೆ; ನಾವು ಅದನ್ನು ನಿರ್ವಹಿಸುತ್ತೇವೆ ಎಂದರು. 

08:5024 Oct 2019

ದೀಪಾವಳಿ ನಂತರ ರಾಜ್ಯ ಸಂಚಾರ– ಶರದ್‌ ಪವಾರ್‌

'ಮಹಾರಾಷ್ಟ್ರದಲ್ಲಿ ಬಿಜೆಪಿಯ 220+ ಸ್ಥಾನಗಳನ್ನು ಗಳಿಸುವ ಯೋಜನೆಯನ್ನು ಜನರು ಒಪ್ಪಿಲ್ಲ. ದೀಪಾವಳಿಯ ಬಳಿಕ ವೈಯಕ್ತಿವಾಗಿ ರಾಜ್ಯದಲ್ಲಿ ಸಂಚಾರ ನಡೆಸಿ ಪಕ್ಷವನ್ನು ಬಲಗೊಳಿಸಲು ಪ್ರಯತ್ನಿಸುತ್ತೇನೆ.' – ಶರದ್‌ ಪವಾರ್‌

08:3924 Oct 2019

ರಣದೀಪ್‌ ಸುರ್ಜೇವಾಲಾಗೆ ಸೋಲು

ಕೈಥಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಣದೀಪ್‌ ಸುರ್ಜೇವಾಲಾ ಸೋಲು ಕಂಡಿದ್ದಾರೆ. 

08:3824 Oct 2019

ಸತಾರಾ ಲೋಕಸಭಾ ಕ್ಷೇತ್ರದಲ್ಲಿ ಎನ್‌ಸಿಪಿ ಗೆಲುವು

ಸತಾರಾ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಉದಯನ್‌ರಾಜೇ ಭೋಸಲೇ ವಿರುದ್ಧ ಎನ್‌ಸಿಪಿಯ ಶ್ರೀನಿವಾಸ್‌ ಪಾಟಿಲ್‌ ಗೆಲುವು ಸಾಧಿಸಿದ್ದಾರೆ.

08:2724 Oct 2019

ಮತದಾರರಿಗೆ ಶರದ್‌ ಪವಾರ್‌ ಧನ್ಯವಾದ

'ನಮ್ಮನ್ನು ಬಿಟ್ಟು ಹೋದವರನ್ನು ಜನರು ಸ್ವೀಕರಿಸಿಲ್ಲ ಎಂಬುದು ಮುಖ್ಯವಾದ ಸಂಗತಿ.  ಪಕ್ಷಾಂತರ ಬಿಟ್ಟು ಹೋದವರ ಪರವಾಗಿ ಕೆಲಸ ಮಾಡಿಲ್ಲ' - ಶರದ್‌ ಪವಾರ್‌, ಎನ್‌ಸಿಪಿ ಅಧ್ಯಕ್ಷ 

07:5224 Oct 2019

ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತೆ: ಭೂಪಿಂದರ್‌ ಸಿಂಗ್‌ ಹೂಡಾ

ರಾಜ್ಯದ ಜನ ಬಿಜೆಪಿ ವಿರುದ್ಧ ಮತ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಸರ್ಕಾರ ರಚನೆ ಮಾಡಲಿದೆ. ಪಕ್ಷೇತರರು ಮತ್ತು ಜೆಜೆಪಿಯೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ನಮ್ಮ ಬಳಿ ಸಾಕಷ್ಟು ಆಯ್ಕೆಗಳಿವೆ. ಎಲ್ಲರಿಗೂ ಸೂಕ್ತ ಸ್ಥಾನ ಮಾನ ನೀಡುತ್ತೇವೆ. ಅಧಿಕಾರ ಅವಕಾಶ ವಿಲ್ಲದ ಬಿಜೆಪಿ ಪಕ್ಷೇತರ ಶಾಸಕರಿಗೆ ಬೆದರಿಕೆ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್ ಹೂಡಾ ಹೇಳಿದ್ದಾರೆ. 

07:3324 Oct 2019

ಮಹಾರಾಷ್ಟ್ರದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಮುಂಬೈ: ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲು ಆರಂಭಿಸಿದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಬಿಜೆಪಿ–ಶಿವಸೇನೆ ಮೈತ್ರಿಕೂಟ ಅಂದುಕೊಂಡಷ್ಟು ಸ್ಥಾನಗಳಲ್ಲಿ ಜಯಗಳಿಸಿಲ್ಲ.

ಈವರೆಗೆ ಬಿಜೆಪಿ 101 ಕ್ಷೇತ್ರಗಳಲ್ಲಿ ಮುನ್ನಡೆ ಅಥವಾ ಗೆಲುವು ಸಾಧಿಸಿದೆ. ಶಿವಸೇನೆ 64, ಕಾಂಗ್ರೆಸ್ 40, ಎನ್‌ಸಿಪಿ 50 ಮತ್ತು ಇತರರು 16 ಸ್ಥಾನಗಳಲ್ಲಿ ಮುನ್ನಡೆ ಅಥವಾ ಗೆಲುವು ಸಾಧಿಸಿದ್ದಾರೆ.

ಶಿವಸೇನೆಯ ಹಿರಿಯ ನಾಯಕ ಮನೋಹರ್‌ ಜೋಶಿ ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶಿವಸೇನೆಯವರೇ ಆಗುತ್ತಾರೆ ಎಂದು ಹೇಳಿದ್ದಾರೆ. ಶಿವಸೇನೆಯ ವಕ್ತಾರ ಸಂಜಯ್ ರೌತ್, 50:50 ಸೂತ್ರದಂತೆ ಅಧಿಕಾರ ಹಂಚಿಕೆ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.

ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ಈವರೆಗೆ ಮಾಧ್ಯಮಗಳೊಂದಿಗೆ ಮಾತನಾಡಿಲ್ಲ. ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಉದ್ಧವ್ ಠಾಕ್ರೆ ಅವರ ಮಗ ಆದಿತ್ಯ ಠಾಕ್ರೆ ಮುಂಬೈನ ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್‌ಪವಾರ್ ಮಧ್ಯಾಹ್ನ 1.30ಕ್ಕೆ ಮಾಧ್ಯಮಗೋಷ್ಠಿ ನಡೆಸುವ ನಿರೀಕ್ಷೆ ಇದೆ.

ಈ ನಡುವೆ ಕಾಂಗ್ರೆಸ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಚಿನ್ ಸಾವಂತ್‌, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್‌ ಎಲ್ಲ ಪ್ರಯತ್ನ ಮಾಡಲಿದೆ ಎಂದು ಹೇಳಿದ್ದಾರೆ.