ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ‘ನೀವು ಜವಾಬ್ದಾರಿಯಿಂದ ಹೇಳಿಕೆ ಕೊಡಬೇಕು’ ಎಂದು ಎಚ್ಚರಿಸಿತು. ಕ್ಷಮೆಯಾಚನೆ ಹಿನ್ನೆಲೆಯಲ್ಲಿ ಅರ್ಜಿ ವಜಾ ಮಾಡಿತು.
ಮರುಪರಿಶೀಲನಾ ಅರ್ಜಿಗೆ ಯಾವುದೇ ಆಧಾರವಿಲ್ಲ ಎಂದ ಸುಪ್ರೀಂಕೋರ್ಟ್
ರಫೇಲ್ ಖರೀದಿ ಮರುಪರಿಶೀಲನಾ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್.
ಶಬರಿಮಲೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2018ರಲ್ಲಿ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಅಥವಾ ಮಾರ್ಪಾಡು ಸೂಚಿಸಿಲ್ಲ. ಧಾರ್ಮಿಕ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಸಂಘರ್ಷದ ವಿಚಾರ ಇರುವುದರಿಂದ ಇನ್ನಷ್ಟು ಚರ್ಚೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು 7 ನ್ಯಾಯಮೂರ್ತಿಗಳಿರುವ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ವಿಸ್ತೃತ ನ್ಯಾಯಪೀಠದ ವಿಚಾರಣೆ ಮುಗಿದು, ತೀರ್ಪು ಹೊರಬೀಳುವವರೆಗೆ ಹಿಂದಿನ ತೀರ್ಪು ಊರ್ಜಿತದಲ್ಲಿರುತ್ತದೆ. ಹೀಗಾಗಿ ಶಬರಿಮಲೆಗೆ ಹೆಣ್ಣುಮಕ್ಕಳ ಪ್ರವೇಶ ಅಬಾಧಿತ.
2:3 ಬಹುಮತದಿಂದ ವಿಸ್ತೃತ ಪೀಠಕ್ಕೆ ವಿಚಾರವಣೆ ವರ್ಗಾವಣೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್ ಮತ್ತು ನಾರೀಮನ್ ವಿರೋಧ. ಉಳಿದ ನ್ಯಾಯಮೂರ್ತಿಗಳಿಂದ ವಿಸ್ತೃತ ವಿಚಾರಣೆಗೆ ಒಪ್ಪಿಗೆ.
ಇದು ಕೇವಲ ಹಿಂದೂ ಮಹಿಳೆಯರ ದೇಗುಲ ಪ್ರವೇಶ ವಿಚಾರವಷ್ಟೇ ಅಲ್ಲ. ಮುಸ್ಲಿಮರು, ಪಾರ್ಸಿಗಳ ವಿಚಾರವೂ ಇದೆ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವಿಚಾರವೂ ಇದರಲ್ಲಿದೆ. ವಿಸ್ತೃತವಾದ ಮತ್ತು ವ್ಯಾಪಕವಾದ ಚರ್ಚೆಯಾಗಬೇಕಿದೆ. ಹೀಗಾಗಿ ಏಳು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಲಾಗಿದೆ.
ದೇಗುಲ ಪ್ರವೇಶಕ್ಕೆ ಯಾರನ್ನೂ ನಿರ್ಬಂಧಿಸಲು ಸಾಧ್ಯವಿಲ್ಲ.
ದೇವಸ್ಥಾನ ಪ್ರವೇಶಕ್ಕೆ ಪುರುಷ ಮತ್ತು ಮಹಿಳೆಯರಿಗೆ ಸಮಾನ ಹಕ್ಕಿದೆ.
ತೀರ್ಪು ಓದಲು ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ.
ಕಲಾಪ ಆರಂಭಿಸಿದ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ. ತೀರ್ಪು ಓದುತ್ತಿರುವ ನ್ಯಾಯಾಧೀಶರು.