<p><strong>ಪಟ್ನಾ:</strong> ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಹಾಗೂ ಪಕ್ಷದ ನಾಯಕರು ಗುರುವಾರ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆ ಮೇಲೆ ಯುವಕನೊಬ್ಬ ಚಪ್ಪಲಿ ತೂರಿದ್ದಾನೆ.</p>.<p>‘ಆದರೆ ಚಪ್ಪಲಿಯು, ವೇದಿಕೆ ಮುಂಭಾಗದಲ್ಲಿಕೂತಿದ್ದಪಕ್ಷದ ಕಾರ್ಯಕರ್ತರ ಮೇಲೆ ಬಿದ್ದಿದೆ. ಇದರಿಂದ ಸಿಟ್ಟಿಗೆದ್ದ ಅವರು, ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ತಕ್ಷಣವೇ ಆತನನ್ನುವಶಕ್ಕೆ ಪಡೆದಿದ್ದು,ಔರಾಂಗಾಬಾದ್ನ ಚಂದನ್ ಎಂದು ಗುರುತಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲೋಕನಾಯಕ ಜಯಪ್ರಕಾಶ್ ನಾರಾಯಣ್ ಜನ್ಮದಿನದ ಅಂಗವಾಗಿ ಪಕ್ಷದ ವತಿಯಿಂದ ‘ಛಾತ್ರಾ ಸಮಾಗಮ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಾರಾಯಣ್ಸಿಂಗ್ ಜೊತೆಗೆ ನಿತೀಶ್ ಪಾಲ್ಗೊಂಡಿದ್ದ ವೇಳೆ ಈ ಘಟನೆ ನಡೆದಿದೆ.</p>.<p>ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹಲ್ಲೆಗೊಳಗಾದ ಯುವಕ, ‘ಈಗಿರುವ ಮೀಸಲಾತಿ ಪದ್ಧತಿಯಿಂದ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದಲ್ಲಿರುವ ಕೆಲವೇ ವ್ಯಕ್ತಿಗಳು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಈ ಸಮುದಾಯದ ಅತ್ಯಂತ ಕಡುಬಡವರಿಗೆ ಯಾವುದೇ ಲಾಭವಾಗುತ್ತಿಲ್ಲ. ಇದರ ವಿರುದ್ಧ ನನ್ನ ಪ್ರತಿಭಟನೆಯನ್ನು ಈ ರೀತಿ ದಾಖಲಿಸಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಹಾಗೂ ಪಕ್ಷದ ನಾಯಕರು ಗುರುವಾರ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆ ಮೇಲೆ ಯುವಕನೊಬ್ಬ ಚಪ್ಪಲಿ ತೂರಿದ್ದಾನೆ.</p>.<p>‘ಆದರೆ ಚಪ್ಪಲಿಯು, ವೇದಿಕೆ ಮುಂಭಾಗದಲ್ಲಿಕೂತಿದ್ದಪಕ್ಷದ ಕಾರ್ಯಕರ್ತರ ಮೇಲೆ ಬಿದ್ದಿದೆ. ಇದರಿಂದ ಸಿಟ್ಟಿಗೆದ್ದ ಅವರು, ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ತಕ್ಷಣವೇ ಆತನನ್ನುವಶಕ್ಕೆ ಪಡೆದಿದ್ದು,ಔರಾಂಗಾಬಾದ್ನ ಚಂದನ್ ಎಂದು ಗುರುತಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲೋಕನಾಯಕ ಜಯಪ್ರಕಾಶ್ ನಾರಾಯಣ್ ಜನ್ಮದಿನದ ಅಂಗವಾಗಿ ಪಕ್ಷದ ವತಿಯಿಂದ ‘ಛಾತ್ರಾ ಸಮಾಗಮ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಾರಾಯಣ್ಸಿಂಗ್ ಜೊತೆಗೆ ನಿತೀಶ್ ಪಾಲ್ಗೊಂಡಿದ್ದ ವೇಳೆ ಈ ಘಟನೆ ನಡೆದಿದೆ.</p>.<p>ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹಲ್ಲೆಗೊಳಗಾದ ಯುವಕ, ‘ಈಗಿರುವ ಮೀಸಲಾತಿ ಪದ್ಧತಿಯಿಂದ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದಲ್ಲಿರುವ ಕೆಲವೇ ವ್ಯಕ್ತಿಗಳು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಈ ಸಮುದಾಯದ ಅತ್ಯಂತ ಕಡುಬಡವರಿಗೆ ಯಾವುದೇ ಲಾಭವಾಗುತ್ತಿಲ್ಲ. ಇದರ ವಿರುದ್ಧ ನನ್ನ ಪ್ರತಿಭಟನೆಯನ್ನು ಈ ರೀತಿ ದಾಖಲಿಸಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>