ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪವಿತ್ರ ಆರ್ಥಿಕತೆ ಸತ್ಯಾಗ್ರಹ -ನಟ ಕಿಶೋರ್‌ ಬೆಂಬಲ

Last Updated 29 ಸೆಪ್ಟೆಂಬರ್ 2019, 19:45 IST
ಅಕ್ಷರ ಗಾತ್ರ

ಪವಿತ್ರ ಆರ್ಥಿಕತೆಗಾಗಿಗ್ರಾಮಸೇವಾ ಸಂಘ ಆರಂಭಿಸಿರುವ ಸತ್ಯಾಗ್ರಹದಲ್ಲಿ ಸಂಘದ ಕಾರ್ಯಕರ್ತರ ಜೊತೆ ಚಿತ್ರನಟ ಕಿಶೋರ್‌ ಭಾಗವಹಿಸಿದ್ದರು.ಮಹಾತ್ಮ ಗಾಂಧಿ ರಸ್ತೆಯ ಕಾವೇರಿ ಎಂಪೋರಿಯಂ ಸಿಗ್ನಲ್‌ ಬಳಿ ಶನಿವಾರ ಸಂಜೆ ಜನರ ಸತ್ಯಾಗ್ರಹದ ದೀಕ್ಷೆ ಹಾಗೂ ಆರ್ಥಿಕ ಸಹಕಾರ ಕೋರುವಸಂದೇಶ ಪತ್ರ ಹಿಡಿದು ಅವರು ಸತ್ಯಾಗ್ರಹ‌ ನಡೆಸಿದರು.

‘ಸ್ಥಳೀಯ ಸಂಪನ್ಮೂಲಗಳ ಕೇಂದ್ರಿತವಾದ ಆರ್ಥಿಕ ವ್ಯವಸ್ಥೆ ನಮ್ಮದಾಗಬೇಕಿದೆ.ಪರಿಸರ ರಕ್ಷಿಸುವ ಪ್ರಯತ್ನದೊಂದಿಗೆ ಹೆಚ್ಚು ಜನರಿಗೆ ಉದ್ಯೋಗಾವಕಾಶ ನೀಡುವ ಕೆಲಸ ನಮ್ಮಿಂದಾಗಬೇಕಿದೆ‘ ಎಂದು ಕಿಶೋರ್‌ ಅಭಿಪ್ರಾಯಪಟ್ಟರು.

ಸತ್ಯಾಗ್ರಹದ ಭಾಗವಾಗಿ ಭಾನುವಾರ ಸಂಜೆ ನಡೆದ ಮುಶೈರಾದಲ್ಲಿ ಭಾಗವಹಿಸಿದ್ದ ಕವಿಗಳು ಉರ್ದು, ಕನ್ನಡ, ಬೆಂಗಾಲಿ, ಹಿಂದಿ ಕವಿತೆಗಳನ್ನು ವಾಚಿಸಿದರು.ಅಕ್ಟೋಬರ್ 2ರಿಂದ ಉಪವಾಸ ಸತ್ಯಾಗ್ರಹ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT