ಈವರೆಗೆ ಸಾಹಿತಿ ರಾ.ನಂ. ಚಂದ್ರಶೇಖರ್, ಕನ್ನಡಪರ ಹೋರಾಟಗಾರ ಶ್ರ.ದೇ.ಪಾರ್ಶ್ವನಾಥ್, ಕಸಾಪ ಕಾರ್ಯದರ್ಶಿ ವ.ಚ.ಚನ್ನೇಗೌಡ, ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಮತ್ತು ಶರಣು ಬಿ.ಗದ್ದುಗೆ ಅವರಿಗೆ ನೀಡಿ ಗೌರವಿಸಲಾಗಿದೆ. ಈ ಬಾರಿಯ 6ನೇ ಸಾಲಿನ ಪ್ರಶಸ್ತಿಗೆ ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ವಿಷ್ಣುವರ್ಧನ್ ಅವರ ನೆನಪಿನ ಪ್ರಶಸ್ತಿ ಸ್ವೀಕರಿಸಲು ಅತ್ಯಂತ ಹರ್ಷಪಡುತ್ತೇನೆ ಎಂದು ನಿಸಾರ್ ಅಹಮದ್ ಪ್ರತಿಕ್ರಿಯಿಸಿದ್ದಾರೆ.