<p>ಅದು ‘ಜನ ಗಣ ಮನ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ. ಮೈಕ್ ಕೈಗೆತ್ತಿಕೊಂಡ ಚಿತ್ರದ ನಿರ್ದೇಶಕ ಶಶಿಕಾಂತ್ ಆನೇಕಲ್, ‘ಸಮಾಜದಲ್ಲಿ ಪ್ರತಿದಿನ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಚಿತ್ರದಲ್ಲಿ ಇದಕ್ಕೆ ಪರಿಹಾರ ಹುಡುಕುವ ಪ್ರಯತ್ನ ಮಾಡಲಾಗಿದೆ’ ಎಂದರು.</p>.<p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಿದರು. ‘ಸತ್ಯ ಹರಿಶ್ಚಂದ್ರ’ ಚಿತ್ರದ ಹೆಸರಿಗೆ ಅಗೌರವ ತರಲಾಗಿದೆ ಎಂದು ಕನ್ನಡಿಗರು ಬೇಸರಿಸಿಕೊಂಡಿದ್ದಾರೆ. ಇನ್ನು ಮುಂದೆ ಮರುಶೀರ್ಷಿಕೆ ನೀಡುವಾಗ ಪರಾಮರ್ಶೆ ನಡೆಸಿ ಅನುಮೋದನೆ ನೀಡಲು ಮಂಡಳಿ ನಿರ್ಧರಿಸಿದೆ ಎಂದರು.</p>.<p>‘ಕೆಲವು ನಿರ್ದೇಶಕರು ಒಪ್ಪಂದ ಆಗುವುದಕ್ಕೂ ಮೊದಲು ಒಂದು ರೀತಿ ವರ್ತಿಸುತ್ತಾರೆ. ಬಳಿಕ ತಮ್ಮ ಗುಣದಲ್ಲಿ ಬದಲಾವಣೆ ಮಾಡಿಕೊಳ್ಳುತ್ತಿರುವುದು ತಪ್ಪು’ ಎಂದರು.</p>.<p>‘ಮಹಿಳೆಯರ ಮೇಲಿನ ದೌರ್ಜನ್ಯ, ಶೋಷಣೆ ನಡೆಯುತ್ತಲೇ ಇದೆ. ಇದನ್ನು ನಿರ್ಮೂಲನೆ ಮಾಡುವ ಇನ್ಸ್ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದೇನೆ. ಚಿತ್ರದಲ್ಲಿ ಐದು ಪೈಟ್ಗಳಿವೆ‘ ಎಂದರು ನಾಯಕಿ ಆಯಿಷಾ.</p>.<p>ಗೌತಮ್ ಶ್ರೀವತ್ಸ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಗೌರಿ ವೆಂಕಟೇಶ್ ಛಾಯಾಗ್ರಹಣ ಇರುವ ಚಿತ್ರಕ್ಕೆ ಸಾಂಬಶಿವರೆಡ್ಡಿ ಬಂಡವಾಳ ಹೂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅದು ‘ಜನ ಗಣ ಮನ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ. ಮೈಕ್ ಕೈಗೆತ್ತಿಕೊಂಡ ಚಿತ್ರದ ನಿರ್ದೇಶಕ ಶಶಿಕಾಂತ್ ಆನೇಕಲ್, ‘ಸಮಾಜದಲ್ಲಿ ಪ್ರತಿದಿನ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಚಿತ್ರದಲ್ಲಿ ಇದಕ್ಕೆ ಪರಿಹಾರ ಹುಡುಕುವ ಪ್ರಯತ್ನ ಮಾಡಲಾಗಿದೆ’ ಎಂದರು.</p>.<p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಿದರು. ‘ಸತ್ಯ ಹರಿಶ್ಚಂದ್ರ’ ಚಿತ್ರದ ಹೆಸರಿಗೆ ಅಗೌರವ ತರಲಾಗಿದೆ ಎಂದು ಕನ್ನಡಿಗರು ಬೇಸರಿಸಿಕೊಂಡಿದ್ದಾರೆ. ಇನ್ನು ಮುಂದೆ ಮರುಶೀರ್ಷಿಕೆ ನೀಡುವಾಗ ಪರಾಮರ್ಶೆ ನಡೆಸಿ ಅನುಮೋದನೆ ನೀಡಲು ಮಂಡಳಿ ನಿರ್ಧರಿಸಿದೆ ಎಂದರು.</p>.<p>‘ಕೆಲವು ನಿರ್ದೇಶಕರು ಒಪ್ಪಂದ ಆಗುವುದಕ್ಕೂ ಮೊದಲು ಒಂದು ರೀತಿ ವರ್ತಿಸುತ್ತಾರೆ. ಬಳಿಕ ತಮ್ಮ ಗುಣದಲ್ಲಿ ಬದಲಾವಣೆ ಮಾಡಿಕೊಳ್ಳುತ್ತಿರುವುದು ತಪ್ಪು’ ಎಂದರು.</p>.<p>‘ಮಹಿಳೆಯರ ಮೇಲಿನ ದೌರ್ಜನ್ಯ, ಶೋಷಣೆ ನಡೆಯುತ್ತಲೇ ಇದೆ. ಇದನ್ನು ನಿರ್ಮೂಲನೆ ಮಾಡುವ ಇನ್ಸ್ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದೇನೆ. ಚಿತ್ರದಲ್ಲಿ ಐದು ಪೈಟ್ಗಳಿವೆ‘ ಎಂದರು ನಾಯಕಿ ಆಯಿಷಾ.</p>.<p>ಗೌತಮ್ ಶ್ರೀವತ್ಸ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಗೌರಿ ವೆಂಕಟೇಶ್ ಛಾಯಾಗ್ರಹಣ ಇರುವ ಚಿತ್ರಕ್ಕೆ ಸಾಂಬಶಿವರೆಡ್ಡಿ ಬಂಡವಾಳ ಹೂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>