<p>ಭಾರತಿ ಎಂಟರ್ಪ್ರೈಸಸ್ ಮತ್ತು ವಾಲ್ಮಾರ್ಟ್ ಪಾಲುದಾರಿಕೆಯ ಭಾರತಿ ವಾಲ್ಮಾರ್ಟ್ ಈಗ ಬೆಂಗಳೂರಿನಲ್ಲಿ ಕರ್ನಾಟಕ ಉದ್ಯೋಗ ತರಬೇತಿ ನಿರ್ದೇಶನಾಲಯ ಮತ್ತು ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ (ಕೆವಿಟಿಎಸ್ಡಿಸಿ) ಸಹಯೋಗದಲ್ಲಿ ಭಾರತಿ ವಾಲ್ಮಾರ್ಟ್ ಕೌಶಲ್ಯ ಕೇಂದ್ರ ತೆರೆದಿದೆ.<br /> <br /> ಪೀಣ್ಯದ ಸರ್ಕಾರಿ ಐಐಟಿಯಲ್ಲಿ ಈ ಕೇಂದ್ರ ಕಾರ್ಯ ನಿರ್ವಹಿಸಲಿದೆ. ಈ ಸಂಬಂಧ ಮಾಡಿಕೊಳ್ಳಲಾದ ಒಪ್ಪಂದದ ಪ್ರಕಾರ, ಇಲ್ಲಿ ಸೇರ್ಪಡೆಯಾಗುವ ವಿದ್ಯಾರ್ಥಿಗಳಿಗೆ ರಿಟೇಲ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಅಗತ್ಯವಾದ ಉಚಿತ ತರಬೇತಿ ನೀಡಲಾಗುತ್ತದೆ. <br /> <br /> ತಿಂಗಳಿಗೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸೌಲಭ್ಯ ಇಲ್ಲಿದೆ. ಶೇ 100ರಷ್ಟು ಶಿಷ್ಯವೇತನ ದೊರೆಯಲಿದೆ. ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡ ನಂತರ ಭಾರತಿ ವಾಲ್ಮಾರ್ಟ್ ಪ್ರಮಾಣಪತ್ರ ನೀಡಲಿದೆ. ಈ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವಂತೆಯೂ ಪ್ರಯತ್ನಿಸಲಾಗುತ್ತದೆ.<br /> <br /> ಸೇವಾಕ್ಷೇತ್ರ ವ್ಯಾಪಕವಾಗಿ ಅತ್ಯಾಧುನಿಕವಾಗಿ ವಿಕಸನಗೊಳ್ಳುತ್ತಿರುವ ಸಂದರ್ಭದಲ್ಲಿ ಇಂದು ಪೈಪೋಟಿಗೆ ಅರ್ಹರಾಗಿ ಅಂತರರಾಷ್ಟ್ರೀಯ ಮಾನದಂಡಗಳಿಗೆ ಪೂರಕವಾಗಿ ತರಬೇತಿ ನೀಡುವ ಕ್ರಮ ಇದು ಎಂದು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಎಸ್.ಆರ್. ಉಮಾಶಂಕರ್ ಹೇಳುತ್ತಾರೆ.<br /> <br /> ವಾಲ್ಮಾರ್ಟ್ ಇಂಡಿಯಾ ಅಧ್ಯಕ್ಷ ಹಾಗೂ ಭಾರತಿ ವಾಲ್ಮಾರ್ಟ್ನ ಮುಖ್ಯಸ್ಥ ರಾಜ್ ಜೈನ್ ಅವರ ಪ್ರಕಾರ ಕೇವಲ ಎರಡು ಮೂರು ವಾರಗಳ ಅಲ್ಪಾವಧಿಯಲ್ಲಿ ರಿಟೇಲ್ ಕ್ಷೇತ್ರದ ಕೆಲಸಕ್ಕೆ ಅಣಿಗೊಳಿಸುವಂತಹ ತರಬೇತಿ ಇದು. <br /> <br /> ಉದ್ಘಾಟನಾ ಸಮಾರಂಭದಲ್ಲಿ ಕಾರ್ಮಿಕ ಸಚಿವ ಬಚ್ಚೇಗೌಡ, ಕೌಶಲ್ಯ ಅಭಿವೃದ್ಧಿ ನಿಗಮದ ಎಂಡಿ ವಿಷ್ಣುಕಾಂತ ಚಟ್ಪಲ್ಲಿ ಕೂಡ ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತಿ ಎಂಟರ್ಪ್ರೈಸಸ್ ಮತ್ತು ವಾಲ್ಮಾರ್ಟ್ ಪಾಲುದಾರಿಕೆಯ ಭಾರತಿ ವಾಲ್ಮಾರ್ಟ್ ಈಗ ಬೆಂಗಳೂರಿನಲ್ಲಿ ಕರ್ನಾಟಕ ಉದ್ಯೋಗ ತರಬೇತಿ ನಿರ್ದೇಶನಾಲಯ ಮತ್ತು ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ (ಕೆವಿಟಿಎಸ್ಡಿಸಿ) ಸಹಯೋಗದಲ್ಲಿ ಭಾರತಿ ವಾಲ್ಮಾರ್ಟ್ ಕೌಶಲ್ಯ ಕೇಂದ್ರ ತೆರೆದಿದೆ.<br /> <br /> ಪೀಣ್ಯದ ಸರ್ಕಾರಿ ಐಐಟಿಯಲ್ಲಿ ಈ ಕೇಂದ್ರ ಕಾರ್ಯ ನಿರ್ವಹಿಸಲಿದೆ. ಈ ಸಂಬಂಧ ಮಾಡಿಕೊಳ್ಳಲಾದ ಒಪ್ಪಂದದ ಪ್ರಕಾರ, ಇಲ್ಲಿ ಸೇರ್ಪಡೆಯಾಗುವ ವಿದ್ಯಾರ್ಥಿಗಳಿಗೆ ರಿಟೇಲ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಅಗತ್ಯವಾದ ಉಚಿತ ತರಬೇತಿ ನೀಡಲಾಗುತ್ತದೆ. <br /> <br /> ತಿಂಗಳಿಗೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸೌಲಭ್ಯ ಇಲ್ಲಿದೆ. ಶೇ 100ರಷ್ಟು ಶಿಷ್ಯವೇತನ ದೊರೆಯಲಿದೆ. ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡ ನಂತರ ಭಾರತಿ ವಾಲ್ಮಾರ್ಟ್ ಪ್ರಮಾಣಪತ್ರ ನೀಡಲಿದೆ. ಈ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವಂತೆಯೂ ಪ್ರಯತ್ನಿಸಲಾಗುತ್ತದೆ.<br /> <br /> ಸೇವಾಕ್ಷೇತ್ರ ವ್ಯಾಪಕವಾಗಿ ಅತ್ಯಾಧುನಿಕವಾಗಿ ವಿಕಸನಗೊಳ್ಳುತ್ತಿರುವ ಸಂದರ್ಭದಲ್ಲಿ ಇಂದು ಪೈಪೋಟಿಗೆ ಅರ್ಹರಾಗಿ ಅಂತರರಾಷ್ಟ್ರೀಯ ಮಾನದಂಡಗಳಿಗೆ ಪೂರಕವಾಗಿ ತರಬೇತಿ ನೀಡುವ ಕ್ರಮ ಇದು ಎಂದು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಎಸ್.ಆರ್. ಉಮಾಶಂಕರ್ ಹೇಳುತ್ತಾರೆ.<br /> <br /> ವಾಲ್ಮಾರ್ಟ್ ಇಂಡಿಯಾ ಅಧ್ಯಕ್ಷ ಹಾಗೂ ಭಾರತಿ ವಾಲ್ಮಾರ್ಟ್ನ ಮುಖ್ಯಸ್ಥ ರಾಜ್ ಜೈನ್ ಅವರ ಪ್ರಕಾರ ಕೇವಲ ಎರಡು ಮೂರು ವಾರಗಳ ಅಲ್ಪಾವಧಿಯಲ್ಲಿ ರಿಟೇಲ್ ಕ್ಷೇತ್ರದ ಕೆಲಸಕ್ಕೆ ಅಣಿಗೊಳಿಸುವಂತಹ ತರಬೇತಿ ಇದು. <br /> <br /> ಉದ್ಘಾಟನಾ ಸಮಾರಂಭದಲ್ಲಿ ಕಾರ್ಮಿಕ ಸಚಿವ ಬಚ್ಚೇಗೌಡ, ಕೌಶಲ್ಯ ಅಭಿವೃದ್ಧಿ ನಿಗಮದ ಎಂಡಿ ವಿಷ್ಣುಕಾಂತ ಚಟ್ಪಲ್ಲಿ ಕೂಡ ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>