<p><strong>ನಾಳೆಯಿಂದ 9 ದಿನ ನವರಾತ್ರಿ, 10ನೇ ದಿನ ವಿಜಯ ದಶಮಿ. ದೇವಿಯನ್ನು ನಾನಾ ರೂಪಗಳಲ್ಲಿ ಆರಾಧಿಸುವ ಉತ್ಸವ. <br /> <br /> ಬೆಂಗಳೂರು ಹಬ್ಬಕ್ಕೆ ಸಜ್ಜುಗೊಂಡಿದೆ. ದೇವಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ, ಸಂಗೀತೋತ್ಸವ, ಜತೆಗೆ ಮನೆಗಳಲ್ಲಿ ಗೊಂಬೆ ಕೂಡ್ರಿಸುವ ಸಡಗರ </strong>.<br /> <br /> ನವರಾತ್ರಿ ಅಥವಾ ದಸರಾ ಹಬ್ಬಕ್ಕೆ ತನ್ನದೇ ಆದ ವಿಶಿಷ್ಟ ಪರಂಪರೆಯಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತದಾದ್ಯಂತ 9 ದಿನ ಆಚರಿಸುವ ನವರಾತ್ರಿಯಲ್ಲಿ ನವದುರ್ಗೆಯರ ಆರಾಧನೆಯೇ ಪ್ರಧಾನ.<br /> <br /> ಸೌಂದರ್ಯ ಲಹರೀ ಹಾಗೂ ದುರ್ಗಾ ಸಪ್ತಶತೀ ಪಾರಾಯಣ, ಹೋಮ-ಹವನ ಧಾರ್ಮಿಕ ಆಚರಣೆಯ ಜತೆಗೇ ಸಂಗೀತ, ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳು ದಸರಾ ವಿಶೇಷ.<br /> <br /> ದಕ್ಷಿಣದಲ್ಲಿ ವಿಜಯನಗರ ಸಾಮ್ರೋಜ್ಯದ ಆಡಳಿತವಿರುವವರೆಗೂ ಹಂಪಿಯ ಮಹಾನವಮಿ ದಿಬ್ಬದಲ್ಲಿ ನವರಾತ್ರಿ ಉತ್ಸವಗಳು ವಿಜಂಭಣೆಯಿಂದ ನೆರವೇರುತ್ತಿದ್ದವು. ವಿಜಯನಗರ ಸಾಮ್ರೋಜ್ಯದ ಪತನಾನಂತರ ಮೈಸೂರು ಒಡೆಯರು ದಸರಾ ಪರಂಪರೆಯನ್ನು ಮುಂದುವರಿಸಿಕೊಂಡು ಬಂದರು. <br /> <br /> ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬಂದ ನಂತರ ಕರ್ನಾಟಕ ಸರ್ಕಾರವೇ ದಸರಾ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿದೆ.ನಗರದ ದೇವಸ್ಥಾನಗಳಲ್ಲಿ, ಮನೆ ಮನಗಳಲ್ಲಿ ಇನ್ನು 10 ದಿನ ಹಬ್ಬವೋ ಹಬ್ಬ. <br /> <br /> ನಿತ್ಯವೂ ಒಂದೊಂದು ರೂಪದಲ್ಲಿ ದೇವಿಯ ಆರಾಧನೆ ನಡೆಯುತ್ತದೆ. ಸಂಗೀತ ನೃತ್ಯ ಉತ್ಸವಗಳು ಕಣ್ಮನಗಳಿಗೆ ಹಬ್ಬ ನೀಡಲಿವೆ. ಅಲಂಕಾರಿಕವಾಗಿ ಗೊಂಬೆಗಳನ್ನು ಪ್ರತಿಷ್ಠಾಪಿಸುವ ಸಂಪ್ರದಾಯ ಅನೇಕ ಮನೆಗಳಲ್ಲಿದೆ. ಒಟ್ಟಾರೆ ಇದು ಶಕ್ತಿ ಶಾರದೆಯ ಮೇಳ. <br /> <br /> <strong>ಒಂಬತ್ತು ರೂಪ</strong><br /> ದುರ್ಗೆ ಅಥವಾ ಶಕ್ತಿ ಪೂಜೆಯೇ ಪ್ರಧಾನವಾಗಿರುವ ದಸರಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನವದುರ್ಗೆಯರಾದ ಶೈಲಪುತ್ರೀ, ಬ್ರಹ್ಮಚಾರಿಣೀ, ಚಂದ್ರಘಂಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯಿನಿ, ಕಾಲರಾತ್ರಿ, ಮಹಾಗೌರಿ ಹಾಗೂ ಸಿದ್ಧಿದಾತ್ರಿ ದೇವಿಯರನ್ನು ಒಂಭತ್ತು ದಿನ ಆರಾಧಿಸಲಾಗುತ್ತದೆ. <br /> <br /> <strong>ಈ ಪರಂಪರೆಯನ್ನು ಶ್ರೀದೇವಿ ಕವಚದಲ್ಲಿ <br /> ಪ್ರಥಮಂ ಶೈಲಪುತ್ರೀ ಚ ದ್ವಿತೀಯಂ ಬ್ರಹ್ಮಚಾರಿಣೀ <br /> ತತೀಯಂ ಚಂದ್ರಘಂಟೀತಿ ಕೂಷ್ಮಾಂಡೇತಿ ಚತುರ್ಥಕಮ್ <br /> ಪಂಚಮಂ ಸ್ಕಂದ ಮಾತೇತಿ ಷಷ್ಠಂ ಕಾತ್ಯಾಯನೀತಿ ಚ <br /> ಸಪ್ತಮಂ ಕಾಲರಾತ್ರಿಶ್ಚ ಮಹಾಗೌರೀತಿ ಚಾಷ್ಟಮಮ್<br /> ನವಮಂ ಸಿದ್ಧಿದಾತ್ರೀ ಚ ನವದುರ್ಗಾಃ ಪ್ರಕೀರ್ತಿತಾಃ <br /> ಎಂದು ಉಲ್ಲೇಖಿಸಲಾಗಿದೆ.<br /> </strong><br /> ದುರ್ಗೆ ಆರಾಧನೆ ಮಂತ್ರಶಾಸ್ತ್ರವಷ್ಟೇ ಅಲ್ಲ; ತಂತ್ರಶಾಸ್ತ್ರ ಹಾಗೂ ಯಂತ್ರ ಶಾಸ್ತ್ರವೂ ಆಗಿರುವುದು ವಿಶೇಷ. ಕೆಲವರು ದುರ್ಗಾ ಮಾತೆಯ ಮೂರ್ತಿಯನ್ನೂ, ಕೆಲವರು ಶ್ರೀಚಕ್ರವನ್ನೂ ಆರಾಧಿಸುವ ಪರಂಪರೆ ಅನೂಚಾನವಾಗಿದೆ. ಇದನ್ನು `ಶ್ರೀವಿದ್ಯಾ~ ಆರಾಧನೆ ಎಂದು ಪಂಡಿತರು ವಿಶ್ಲೇಷಿಸುತ್ತಾರೆ.<br /> <br /> <strong>ನವ ಆರಾಧನೆ<br /> </strong>ದುರ್ಗಾದೇವಿಯ ಪ್ರಥಮ ಸ್ವರೂಪವನ್ನು `ಶೈಲಪುತ್ರಿ~ ಎಂದು ನವರಾತ್ರಿಯ ಮೊದಲನೇ ದಿನ ಆರಾಧಿಸುತ್ತಾರೆ. ಪರ್ವತ ರಾಜ ಹಿಮವಂತನ ಪುತ್ರಿಯಾಗಿ ಅವತರಿಸಿದ ಕಾರಣ ಈಕೆ ಶೈಲಪುತ್ರಿ~. <br /> <br /> ವೃಷಭವಾಹನೆ, ಬಲ ಹಸ್ತದಲ್ಲಿ ತ್ರಿಶೂಲ, ಎಡಹಸ್ತದಲ್ಲಿ ಕಮಲ ಪುಷ್ಪದಿಂದ ಸುಶೋಭಿತಳಾಗಿರುವ ಶೈಲಪುತ್ರಿ ದುರ್ಗೆಯನ್ನು ಮೂಲಾಧಾರ ಚಕ್ರದಲ್ಲಿ ಆರಾಧಕರು ನೆಲೆಗೊಳಿಸುತ್ತಾರೆ. ಇಲ್ಲಿಂದಲೇ ಯೋಗಸಾಧನೆಯ ಪ್ರಾರಂಭ.<br /> <br /> ನವರಾತ್ರಿಯ ದ್ವಿತೀಯ ದಿನವನ್ನು ನವಶಕ್ತಿಯರಲ್ಲಿ ಎರಡನೇ ಸ್ವರೂಪವಾದ `ಬ್ರಹ್ಮಚಾರಿಣಿ~ ದುರ್ಗಾ ಮಾತೆಯ ಆರಾಧನೆಯೊಂದಿಗೆ ನೆರವೇರಿಸಲಾಗುವುದು. ಇವಳ ಉಪಾಸನೆಯಿಂದ ತಪಸ್ಸು, ತ್ಯಾಗ, ವೈರಾಗ್ಯ, ಸದಾಚಾರ, ಸಂಯಮ ವೃದ್ಧಿಯಾಗುತ್ತದೆ. <br /> <br /> ಈಕೆಯ ಸ್ವರೂಪ ಜ್ಯೋತಿರ್ಮಯ ಮತ್ತು ಅತ್ಯಂತ ಭವ್ಯವಾಗಿದ್ದು ಬಲ ಹಸ್ತದಲ್ಲಿ ಜಪಮಾಲೆ ಹಾಗೂ ಎಡಹಸ್ತದಲ್ಲಿ ಕಮಂಡಲ ಇರುತ್ತದೆ.</p>.<p>ಮೂರನೇ ದಿನ `ಚಂದ್ರಘಂಟಾ~ ದೇವಿಯ ಆರಾಧನೆ. ಇವಳ ಸ್ವರೂಪ ಪರಮ ಶಾಂತಿದಾಯಕ ಹಾಗೂ ಶ್ರೇಯಸ್ಕರ. ದಶಹಸ್ತಗಳುಳ್ಳ ದೇವಿಯು ಶಸ್ತ್ರ ಸಜ್ಜಿತಳಾಗಿ, ಯುದ್ಧ ಸನ್ನದ್ಧಳಾಗಿರುವಂತೆ ಕಾಣುತ್ತಾಳೆ. <br /> <br /> ದೇವಿಯ ಮಸ್ತಕದಲ್ಲಿ ಗಂಟೆಯ ಆಕಾರದ ಚಂದ್ರನಿದ್ದಾನೆ. ಆದ್ದರಿಂದಲೇ ಈಕೆ `ಚಂದ್ರಘಂಟಾ~.ದುರ್ಗಾ ಮಾತೆಯ ನಾಲ್ಕನೇ ಸ್ವರೂಪವೇ `ಕೂಷ್ಮಾಂಡಾ~. ಅಷ್ಟ ಭುಜಗಳುಳ್ಳವಳಾದ್ದರಿಂದ ಅಷ್ಟಭುಜಾದೇವಿ ಎಂದೂ ಆರಾಧಿಸುತ್ತಾರೆ. <br /> <br /> ಕಮಂಡಲು, ಧನುಷ, ಬಾಣ, ಕಮಲ, ಅಮೃತ ತುಂಬಿದ ಕಲಶ, ಚಕ್ರ ಮತ್ತು ಗದೆಯನ್ನು ತನ್ನ ಎಂಟು ಹಸ್ತಗಳಲ್ಲಿ ಧರಿಸಿದ್ದಾಳೆ. ಕೂಷ್ಮಾಂಡಾದೇವಿಗೆ ಬೂದುಕುಂಬಳಕಾಯಿ ಬಲಿಯೇ ಅತ್ಯಂತ ಪ್ರಿಯ. ಕುಂಬಳಕಾಯಿಯನ್ನು ಸಂಸ್ಕೃತದಲ್ಲಿ ಕೂಷ್ಮಾಂಡ ಎಂದು ಕರೆಯುತ್ತಾರೆ.<br /> <br /> ಐದನೇ ದಿನ ನವದುರ್ಗೆಯರ ಆರಾಧನೆಯನ್ನು `ಸ್ಕಂದ ಮಾತಾ~ ಸ್ವರೂಪದಲ್ಲಿ ಮಾಡಲಾಗುತ್ತದೆ. ಷಣ್ಮುಖ ಸ್ಕಂದನ ಮಾತೆಯಾದ್ದರಿಂದ ಸ್ಕಂದಮಾತಾ ಹೆಸರು ಬಂದಿದೆ. ನಾಲ್ಕು ಭುಜ-ನಾಲ್ಕು ಹಸ್ತಯುಕ್ತ ಮಾತೆಯು ಸಿಂಹವಾಹನೆ . <br /> <br /> ಸ್ಕಂದಮಾತೆಯ ಉಪಾಸನೆಯಿಂದ ಬಾಲರೂಪೀ ಸುಬ್ರಹ್ಮಣ್ಯ ಸ್ವಾಮಿಯ ಉಪಾಸನೆ ಕೂಡ ತಾನಾಗಿಯೇ ಆಗುತ್ತದೆ.ದುರ್ಗಾಮಾತೆಯ ಆರನೇ ಸ್ವರೂಪದ ಹೆಸರೇ ಕಾತ್ಯಾಯಿನಿ. ನಾಲ್ಕು ಭುಜಗಳುಳ್ಳ ಸಿಂಹವಾಹನೆಯು ಬಂಗಾರದ ವರ್ಣದಿಂದ ಹೊಳೆಯುತ್ತಿರುತ್ತಾಳೆ. <br /> <br /> ಏಳನೇ ದಿನ ಆರಾಧಿಸುವ ದುರ್ಗೆಯ ಏಳನೇ ಶಕ್ತಿಯೇ `ಕಾಲರಾತ್ರಿ~. ಅತ್ಯಂತ ಭಯಂಕರವಾದ ಸ್ವರೂಪವುಳ್ಳವಳಾಗಿದ್ದರೂ ಯಾವಾಗಲೂ ಉಪಾಸಕನಿಗೆ ಶುಭ ಫಲವನ್ನೇ ಕರುಣಿಸುತ್ತಾಳೆ. ಆದ್ದರಿಂದಲೇ ಇವಳನ್ನು ಶುಭಂಕರೀ ಎಂದು ಪೂಜಿಸುತ್ತಾರೆ.<br /> <br /> ದಟ್ಟವಾದ ಅಂಧಕಾರದಂತೆ ಇವಳ ಶರೀರದ ವರ್ಣವು ಕಪ್ಪು. ತಲೆಗೂದಲು ಬಿಚ್ಚಿ ಹರಡಿಕೊಂಡಿದೆ. ಕತ್ತಿನಲ್ಲಿ ಮಿಂಚಿನಂತೆ ಹೊಳೆಯುತ್ತಿರುವ ಮಾಲೆಯನ್ನು ಧರಿಸಿದ್ದಾಳೆ. <br /> <br /> ಮೂರು ಕಣ್ಣುಗಳು ಬ್ರಹ್ಮಾಂಡದಂತೆ ಗೋಲವಾಗಿದ್ದು, ವಿದ್ಯುತ್ತಿನಂತೆ ಕಿರಣಗಳನ್ನು ಹೊಮ್ಮಿಸುತ್ತಿವೆ. ಕಾಲರಾತ್ರೀ ಮಾತೆಯ ವಾಹನ ಕತ್ತೆ.<br /> <br /> ಜಗದಂಬೆಯ ಎಂಟನೆ ಶಕ್ತಿಯೇ `ಮಹಾಗೌರಿ~. ವಷಭ ವಾಹನೆ, ಚತುರ್ಭುಜೆ, ಶ್ವೇತವರ್ಣೆ. ಮೇಲಿನ ಬಲಗೈಯಲ್ಲಿ ಅಭಯ ಮುದ್ರೆ, ಕೆಳಗಿನ ಬಲಗೈಯಲ್ಲಿ ತ್ರಿಶೂಲ ಮತ್ತು ಮೇಲಿನ ಎಡಗೈಯಲ್ಲಿ ಡಮರು ಹಾಗೂ ಕೆಳಗಿನ ಎಡಗೈಯಲ್ಲಿ ವರದಮುದ್ರೆ ಇದೆ.<br /> <br /> ನವರಾತ್ರಿಯ ಎಂಟನೇ ದಿನ (ದುರ್ಗಾಷ್ಟಮೀ) ಮಹಾಗೌರಿಯನ್ನು ಉಪಾಸನೆ ಮಾಡುವ ಪರಂಪರೆಯಿದೆ. ಇವಳ ಆರಾಧನೆ-ಕಪೆಯಿಂದ ಅಲೌಕಿಕ ಸಿದ್ಧಿಗಳು ಪ್ರಾಪ್ತವಾಗುತ್ತವೆ ಎಂಬ ನಂಬಿಕೆಯಿದೆ.<br /> <br /> 9ನೇ ದಿನವೇ ಮಹಾನವಮಿ. ಅಂದು ದುರ್ಗೆಯನ್ನು `ಸಿದ್ಧಿದಾತ್ರಿ~ ರೂಪದಲ್ಲಿ ಪೂಜಿಸಲಾಗುತ್ತದೆ. ಸಾಧಕರಿಗೆ ಎಲ್ಲ ರೀತಿಯ ಸಿದ್ಧಿಗಳನ್ನೂ ಕರುಣಿಸುವವಳಾದ್ದರಿಂದ ಆಕೆ `ಸಿದ್ಧಿದಾತ್ರಿ~. <br /> <br /> ಮಾರ್ಕಂಡೇಯ ಪುರಾಣದಲ್ಲಿ ಉಲ್ಲೆೀಖಿತವಾಗಿರುವ ಅಷ್ಟ ಸಿದ್ಧಿಗಳಾದ `ಅಣಿಮಾ, ಮಹಿಮಾ, ಗರಿಮಾ, ಲಘಿಮಾ, ಪ್ರಾಪ್ತಿ, ಪ್ರಾಕಾಮ್ಯೋ, ಈಶಿತ್ವ ಹಾಗೂ ವಶಿತ್ವ~ ಮುಂತಾದ ಎಲ್ಲ ಸಿದ್ಧಿಗಳನ್ನೂ ದಯಪಾಲಿಸುವ ಮಹಾಮಹಿಮೆಯಾಗಿದ್ದಾಳೆ.<br /> <br /> ಸಿದ್ಧಿದಾತ್ರಿಗೆ ಚತುರ್ಭುಜಗಳಿವೆ. ಕಮಲ ಪುಷ್ಪದ ಮೇಲೆ ವಿರಾಜಮಾನಳಾಗಿದ್ದಾಳೆ. ಚಕ್ರ, ಶಂಖ, ಗದೆ ಹಾಗೂ ಕಮಲ ಪುಷ್ಪವನ್ನು ಕೈಗಳಲ್ಲಿ ಧರಿಸಿದ್ದಾಳೆ.<br /> ಹೀಗೆ, ನವರಾತ್ರಿಗೆ ನವದುರ್ಗೆಯರ ಆರಾಧನೆಯನ್ನು ಪರಂಪರಾನುಗತವಾಗಿ ಮಾಡಿಕೊಂಡು ಬರಲಾಗುತ್ತಿದೆ.<br /> <br /> ನವದುರ್ಗೆಯರ ಏಕೀಕೃತ ಮೂರ್ತಿ ಅಷ್ಟಾದಶಭುಜ ಅಂದರೆ, ಹದಿನೆಂಟು ಭುಜ-ಹಸ್ತಗಳನ್ನುಳ್ಳ ಮಹಾಕಾಳಿ, ಮಹಾಲಕ್ಷ್ಮಿ ಮತ್ತು ಮಹಾಸರಸ್ವತಿ ಸ್ವರೂಪಿಣಿಯೇ ಮಹಾತ್ರಿಪುರ ಸುಂದರಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಳೆಯಿಂದ 9 ದಿನ ನವರಾತ್ರಿ, 10ನೇ ದಿನ ವಿಜಯ ದಶಮಿ. ದೇವಿಯನ್ನು ನಾನಾ ರೂಪಗಳಲ್ಲಿ ಆರಾಧಿಸುವ ಉತ್ಸವ. <br /> <br /> ಬೆಂಗಳೂರು ಹಬ್ಬಕ್ಕೆ ಸಜ್ಜುಗೊಂಡಿದೆ. ದೇವಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ, ಸಂಗೀತೋತ್ಸವ, ಜತೆಗೆ ಮನೆಗಳಲ್ಲಿ ಗೊಂಬೆ ಕೂಡ್ರಿಸುವ ಸಡಗರ </strong>.<br /> <br /> ನವರಾತ್ರಿ ಅಥವಾ ದಸರಾ ಹಬ್ಬಕ್ಕೆ ತನ್ನದೇ ಆದ ವಿಶಿಷ್ಟ ಪರಂಪರೆಯಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತದಾದ್ಯಂತ 9 ದಿನ ಆಚರಿಸುವ ನವರಾತ್ರಿಯಲ್ಲಿ ನವದುರ್ಗೆಯರ ಆರಾಧನೆಯೇ ಪ್ರಧಾನ.<br /> <br /> ಸೌಂದರ್ಯ ಲಹರೀ ಹಾಗೂ ದುರ್ಗಾ ಸಪ್ತಶತೀ ಪಾರಾಯಣ, ಹೋಮ-ಹವನ ಧಾರ್ಮಿಕ ಆಚರಣೆಯ ಜತೆಗೇ ಸಂಗೀತ, ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳು ದಸರಾ ವಿಶೇಷ.<br /> <br /> ದಕ್ಷಿಣದಲ್ಲಿ ವಿಜಯನಗರ ಸಾಮ್ರೋಜ್ಯದ ಆಡಳಿತವಿರುವವರೆಗೂ ಹಂಪಿಯ ಮಹಾನವಮಿ ದಿಬ್ಬದಲ್ಲಿ ನವರಾತ್ರಿ ಉತ್ಸವಗಳು ವಿಜಂಭಣೆಯಿಂದ ನೆರವೇರುತ್ತಿದ್ದವು. ವಿಜಯನಗರ ಸಾಮ್ರೋಜ್ಯದ ಪತನಾನಂತರ ಮೈಸೂರು ಒಡೆಯರು ದಸರಾ ಪರಂಪರೆಯನ್ನು ಮುಂದುವರಿಸಿಕೊಂಡು ಬಂದರು. <br /> <br /> ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬಂದ ನಂತರ ಕರ್ನಾಟಕ ಸರ್ಕಾರವೇ ದಸರಾ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿದೆ.ನಗರದ ದೇವಸ್ಥಾನಗಳಲ್ಲಿ, ಮನೆ ಮನಗಳಲ್ಲಿ ಇನ್ನು 10 ದಿನ ಹಬ್ಬವೋ ಹಬ್ಬ. <br /> <br /> ನಿತ್ಯವೂ ಒಂದೊಂದು ರೂಪದಲ್ಲಿ ದೇವಿಯ ಆರಾಧನೆ ನಡೆಯುತ್ತದೆ. ಸಂಗೀತ ನೃತ್ಯ ಉತ್ಸವಗಳು ಕಣ್ಮನಗಳಿಗೆ ಹಬ್ಬ ನೀಡಲಿವೆ. ಅಲಂಕಾರಿಕವಾಗಿ ಗೊಂಬೆಗಳನ್ನು ಪ್ರತಿಷ್ಠಾಪಿಸುವ ಸಂಪ್ರದಾಯ ಅನೇಕ ಮನೆಗಳಲ್ಲಿದೆ. ಒಟ್ಟಾರೆ ಇದು ಶಕ್ತಿ ಶಾರದೆಯ ಮೇಳ. <br /> <br /> <strong>ಒಂಬತ್ತು ರೂಪ</strong><br /> ದುರ್ಗೆ ಅಥವಾ ಶಕ್ತಿ ಪೂಜೆಯೇ ಪ್ರಧಾನವಾಗಿರುವ ದಸರಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನವದುರ್ಗೆಯರಾದ ಶೈಲಪುತ್ರೀ, ಬ್ರಹ್ಮಚಾರಿಣೀ, ಚಂದ್ರಘಂಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯಿನಿ, ಕಾಲರಾತ್ರಿ, ಮಹಾಗೌರಿ ಹಾಗೂ ಸಿದ್ಧಿದಾತ್ರಿ ದೇವಿಯರನ್ನು ಒಂಭತ್ತು ದಿನ ಆರಾಧಿಸಲಾಗುತ್ತದೆ. <br /> <br /> <strong>ಈ ಪರಂಪರೆಯನ್ನು ಶ್ರೀದೇವಿ ಕವಚದಲ್ಲಿ <br /> ಪ್ರಥಮಂ ಶೈಲಪುತ್ರೀ ಚ ದ್ವಿತೀಯಂ ಬ್ರಹ್ಮಚಾರಿಣೀ <br /> ತತೀಯಂ ಚಂದ್ರಘಂಟೀತಿ ಕೂಷ್ಮಾಂಡೇತಿ ಚತುರ್ಥಕಮ್ <br /> ಪಂಚಮಂ ಸ್ಕಂದ ಮಾತೇತಿ ಷಷ್ಠಂ ಕಾತ್ಯಾಯನೀತಿ ಚ <br /> ಸಪ್ತಮಂ ಕಾಲರಾತ್ರಿಶ್ಚ ಮಹಾಗೌರೀತಿ ಚಾಷ್ಟಮಮ್<br /> ನವಮಂ ಸಿದ್ಧಿದಾತ್ರೀ ಚ ನವದುರ್ಗಾಃ ಪ್ರಕೀರ್ತಿತಾಃ <br /> ಎಂದು ಉಲ್ಲೇಖಿಸಲಾಗಿದೆ.<br /> </strong><br /> ದುರ್ಗೆ ಆರಾಧನೆ ಮಂತ್ರಶಾಸ್ತ್ರವಷ್ಟೇ ಅಲ್ಲ; ತಂತ್ರಶಾಸ್ತ್ರ ಹಾಗೂ ಯಂತ್ರ ಶಾಸ್ತ್ರವೂ ಆಗಿರುವುದು ವಿಶೇಷ. ಕೆಲವರು ದುರ್ಗಾ ಮಾತೆಯ ಮೂರ್ತಿಯನ್ನೂ, ಕೆಲವರು ಶ್ರೀಚಕ್ರವನ್ನೂ ಆರಾಧಿಸುವ ಪರಂಪರೆ ಅನೂಚಾನವಾಗಿದೆ. ಇದನ್ನು `ಶ್ರೀವಿದ್ಯಾ~ ಆರಾಧನೆ ಎಂದು ಪಂಡಿತರು ವಿಶ್ಲೇಷಿಸುತ್ತಾರೆ.<br /> <br /> <strong>ನವ ಆರಾಧನೆ<br /> </strong>ದುರ್ಗಾದೇವಿಯ ಪ್ರಥಮ ಸ್ವರೂಪವನ್ನು `ಶೈಲಪುತ್ರಿ~ ಎಂದು ನವರಾತ್ರಿಯ ಮೊದಲನೇ ದಿನ ಆರಾಧಿಸುತ್ತಾರೆ. ಪರ್ವತ ರಾಜ ಹಿಮವಂತನ ಪುತ್ರಿಯಾಗಿ ಅವತರಿಸಿದ ಕಾರಣ ಈಕೆ ಶೈಲಪುತ್ರಿ~. <br /> <br /> ವೃಷಭವಾಹನೆ, ಬಲ ಹಸ್ತದಲ್ಲಿ ತ್ರಿಶೂಲ, ಎಡಹಸ್ತದಲ್ಲಿ ಕಮಲ ಪುಷ್ಪದಿಂದ ಸುಶೋಭಿತಳಾಗಿರುವ ಶೈಲಪುತ್ರಿ ದುರ್ಗೆಯನ್ನು ಮೂಲಾಧಾರ ಚಕ್ರದಲ್ಲಿ ಆರಾಧಕರು ನೆಲೆಗೊಳಿಸುತ್ತಾರೆ. ಇಲ್ಲಿಂದಲೇ ಯೋಗಸಾಧನೆಯ ಪ್ರಾರಂಭ.<br /> <br /> ನವರಾತ್ರಿಯ ದ್ವಿತೀಯ ದಿನವನ್ನು ನವಶಕ್ತಿಯರಲ್ಲಿ ಎರಡನೇ ಸ್ವರೂಪವಾದ `ಬ್ರಹ್ಮಚಾರಿಣಿ~ ದುರ್ಗಾ ಮಾತೆಯ ಆರಾಧನೆಯೊಂದಿಗೆ ನೆರವೇರಿಸಲಾಗುವುದು. ಇವಳ ಉಪಾಸನೆಯಿಂದ ತಪಸ್ಸು, ತ್ಯಾಗ, ವೈರಾಗ್ಯ, ಸದಾಚಾರ, ಸಂಯಮ ವೃದ್ಧಿಯಾಗುತ್ತದೆ. <br /> <br /> ಈಕೆಯ ಸ್ವರೂಪ ಜ್ಯೋತಿರ್ಮಯ ಮತ್ತು ಅತ್ಯಂತ ಭವ್ಯವಾಗಿದ್ದು ಬಲ ಹಸ್ತದಲ್ಲಿ ಜಪಮಾಲೆ ಹಾಗೂ ಎಡಹಸ್ತದಲ್ಲಿ ಕಮಂಡಲ ಇರುತ್ತದೆ.</p>.<p>ಮೂರನೇ ದಿನ `ಚಂದ್ರಘಂಟಾ~ ದೇವಿಯ ಆರಾಧನೆ. ಇವಳ ಸ್ವರೂಪ ಪರಮ ಶಾಂತಿದಾಯಕ ಹಾಗೂ ಶ್ರೇಯಸ್ಕರ. ದಶಹಸ್ತಗಳುಳ್ಳ ದೇವಿಯು ಶಸ್ತ್ರ ಸಜ್ಜಿತಳಾಗಿ, ಯುದ್ಧ ಸನ್ನದ್ಧಳಾಗಿರುವಂತೆ ಕಾಣುತ್ತಾಳೆ. <br /> <br /> ದೇವಿಯ ಮಸ್ತಕದಲ್ಲಿ ಗಂಟೆಯ ಆಕಾರದ ಚಂದ್ರನಿದ್ದಾನೆ. ಆದ್ದರಿಂದಲೇ ಈಕೆ `ಚಂದ್ರಘಂಟಾ~.ದುರ್ಗಾ ಮಾತೆಯ ನಾಲ್ಕನೇ ಸ್ವರೂಪವೇ `ಕೂಷ್ಮಾಂಡಾ~. ಅಷ್ಟ ಭುಜಗಳುಳ್ಳವಳಾದ್ದರಿಂದ ಅಷ್ಟಭುಜಾದೇವಿ ಎಂದೂ ಆರಾಧಿಸುತ್ತಾರೆ. <br /> <br /> ಕಮಂಡಲು, ಧನುಷ, ಬಾಣ, ಕಮಲ, ಅಮೃತ ತುಂಬಿದ ಕಲಶ, ಚಕ್ರ ಮತ್ತು ಗದೆಯನ್ನು ತನ್ನ ಎಂಟು ಹಸ್ತಗಳಲ್ಲಿ ಧರಿಸಿದ್ದಾಳೆ. ಕೂಷ್ಮಾಂಡಾದೇವಿಗೆ ಬೂದುಕುಂಬಳಕಾಯಿ ಬಲಿಯೇ ಅತ್ಯಂತ ಪ್ರಿಯ. ಕುಂಬಳಕಾಯಿಯನ್ನು ಸಂಸ್ಕೃತದಲ್ಲಿ ಕೂಷ್ಮಾಂಡ ಎಂದು ಕರೆಯುತ್ತಾರೆ.<br /> <br /> ಐದನೇ ದಿನ ನವದುರ್ಗೆಯರ ಆರಾಧನೆಯನ್ನು `ಸ್ಕಂದ ಮಾತಾ~ ಸ್ವರೂಪದಲ್ಲಿ ಮಾಡಲಾಗುತ್ತದೆ. ಷಣ್ಮುಖ ಸ್ಕಂದನ ಮಾತೆಯಾದ್ದರಿಂದ ಸ್ಕಂದಮಾತಾ ಹೆಸರು ಬಂದಿದೆ. ನಾಲ್ಕು ಭುಜ-ನಾಲ್ಕು ಹಸ್ತಯುಕ್ತ ಮಾತೆಯು ಸಿಂಹವಾಹನೆ . <br /> <br /> ಸ್ಕಂದಮಾತೆಯ ಉಪಾಸನೆಯಿಂದ ಬಾಲರೂಪೀ ಸುಬ್ರಹ್ಮಣ್ಯ ಸ್ವಾಮಿಯ ಉಪಾಸನೆ ಕೂಡ ತಾನಾಗಿಯೇ ಆಗುತ್ತದೆ.ದುರ್ಗಾಮಾತೆಯ ಆರನೇ ಸ್ವರೂಪದ ಹೆಸರೇ ಕಾತ್ಯಾಯಿನಿ. ನಾಲ್ಕು ಭುಜಗಳುಳ್ಳ ಸಿಂಹವಾಹನೆಯು ಬಂಗಾರದ ವರ್ಣದಿಂದ ಹೊಳೆಯುತ್ತಿರುತ್ತಾಳೆ. <br /> <br /> ಏಳನೇ ದಿನ ಆರಾಧಿಸುವ ದುರ್ಗೆಯ ಏಳನೇ ಶಕ್ತಿಯೇ `ಕಾಲರಾತ್ರಿ~. ಅತ್ಯಂತ ಭಯಂಕರವಾದ ಸ್ವರೂಪವುಳ್ಳವಳಾಗಿದ್ದರೂ ಯಾವಾಗಲೂ ಉಪಾಸಕನಿಗೆ ಶುಭ ಫಲವನ್ನೇ ಕರುಣಿಸುತ್ತಾಳೆ. ಆದ್ದರಿಂದಲೇ ಇವಳನ್ನು ಶುಭಂಕರೀ ಎಂದು ಪೂಜಿಸುತ್ತಾರೆ.<br /> <br /> ದಟ್ಟವಾದ ಅಂಧಕಾರದಂತೆ ಇವಳ ಶರೀರದ ವರ್ಣವು ಕಪ್ಪು. ತಲೆಗೂದಲು ಬಿಚ್ಚಿ ಹರಡಿಕೊಂಡಿದೆ. ಕತ್ತಿನಲ್ಲಿ ಮಿಂಚಿನಂತೆ ಹೊಳೆಯುತ್ತಿರುವ ಮಾಲೆಯನ್ನು ಧರಿಸಿದ್ದಾಳೆ. <br /> <br /> ಮೂರು ಕಣ್ಣುಗಳು ಬ್ರಹ್ಮಾಂಡದಂತೆ ಗೋಲವಾಗಿದ್ದು, ವಿದ್ಯುತ್ತಿನಂತೆ ಕಿರಣಗಳನ್ನು ಹೊಮ್ಮಿಸುತ್ತಿವೆ. ಕಾಲರಾತ್ರೀ ಮಾತೆಯ ವಾಹನ ಕತ್ತೆ.<br /> <br /> ಜಗದಂಬೆಯ ಎಂಟನೆ ಶಕ್ತಿಯೇ `ಮಹಾಗೌರಿ~. ವಷಭ ವಾಹನೆ, ಚತುರ್ಭುಜೆ, ಶ್ವೇತವರ್ಣೆ. ಮೇಲಿನ ಬಲಗೈಯಲ್ಲಿ ಅಭಯ ಮುದ್ರೆ, ಕೆಳಗಿನ ಬಲಗೈಯಲ್ಲಿ ತ್ರಿಶೂಲ ಮತ್ತು ಮೇಲಿನ ಎಡಗೈಯಲ್ಲಿ ಡಮರು ಹಾಗೂ ಕೆಳಗಿನ ಎಡಗೈಯಲ್ಲಿ ವರದಮುದ್ರೆ ಇದೆ.<br /> <br /> ನವರಾತ್ರಿಯ ಎಂಟನೇ ದಿನ (ದುರ್ಗಾಷ್ಟಮೀ) ಮಹಾಗೌರಿಯನ್ನು ಉಪಾಸನೆ ಮಾಡುವ ಪರಂಪರೆಯಿದೆ. ಇವಳ ಆರಾಧನೆ-ಕಪೆಯಿಂದ ಅಲೌಕಿಕ ಸಿದ್ಧಿಗಳು ಪ್ರಾಪ್ತವಾಗುತ್ತವೆ ಎಂಬ ನಂಬಿಕೆಯಿದೆ.<br /> <br /> 9ನೇ ದಿನವೇ ಮಹಾನವಮಿ. ಅಂದು ದುರ್ಗೆಯನ್ನು `ಸಿದ್ಧಿದಾತ್ರಿ~ ರೂಪದಲ್ಲಿ ಪೂಜಿಸಲಾಗುತ್ತದೆ. ಸಾಧಕರಿಗೆ ಎಲ್ಲ ರೀತಿಯ ಸಿದ್ಧಿಗಳನ್ನೂ ಕರುಣಿಸುವವಳಾದ್ದರಿಂದ ಆಕೆ `ಸಿದ್ಧಿದಾತ್ರಿ~. <br /> <br /> ಮಾರ್ಕಂಡೇಯ ಪುರಾಣದಲ್ಲಿ ಉಲ್ಲೆೀಖಿತವಾಗಿರುವ ಅಷ್ಟ ಸಿದ್ಧಿಗಳಾದ `ಅಣಿಮಾ, ಮಹಿಮಾ, ಗರಿಮಾ, ಲಘಿಮಾ, ಪ್ರಾಪ್ತಿ, ಪ್ರಾಕಾಮ್ಯೋ, ಈಶಿತ್ವ ಹಾಗೂ ವಶಿತ್ವ~ ಮುಂತಾದ ಎಲ್ಲ ಸಿದ್ಧಿಗಳನ್ನೂ ದಯಪಾಲಿಸುವ ಮಹಾಮಹಿಮೆಯಾಗಿದ್ದಾಳೆ.<br /> <br /> ಸಿದ್ಧಿದಾತ್ರಿಗೆ ಚತುರ್ಭುಜಗಳಿವೆ. ಕಮಲ ಪುಷ್ಪದ ಮೇಲೆ ವಿರಾಜಮಾನಳಾಗಿದ್ದಾಳೆ. ಚಕ್ರ, ಶಂಖ, ಗದೆ ಹಾಗೂ ಕಮಲ ಪುಷ್ಪವನ್ನು ಕೈಗಳಲ್ಲಿ ಧರಿಸಿದ್ದಾಳೆ.<br /> ಹೀಗೆ, ನವರಾತ್ರಿಗೆ ನವದುರ್ಗೆಯರ ಆರಾಧನೆಯನ್ನು ಪರಂಪರಾನುಗತವಾಗಿ ಮಾಡಿಕೊಂಡು ಬರಲಾಗುತ್ತಿದೆ.<br /> <br /> ನವದುರ್ಗೆಯರ ಏಕೀಕೃತ ಮೂರ್ತಿ ಅಷ್ಟಾದಶಭುಜ ಅಂದರೆ, ಹದಿನೆಂಟು ಭುಜ-ಹಸ್ತಗಳನ್ನುಳ್ಳ ಮಹಾಕಾಳಿ, ಮಹಾಲಕ್ಷ್ಮಿ ಮತ್ತು ಮಹಾಸರಸ್ವತಿ ಸ್ವರೂಪಿಣಿಯೇ ಮಹಾತ್ರಿಪುರ ಸುಂದರಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>