<p>ಬಿ.ಎಂ. ಶ್ರೀನಿವಾಸಯ್ಯ (ಬಿಎಂಎಸ್) ಎಂಜಿನಿಯರಿಂಗ್ ಕಾಲೇಜಿನ ಉದ್ಯಮಶೀಲತಾ ಅಭಿವೃದ್ಧಿ ಘಟಕವು ‘ನಾವೀನ್ಯ ಹಾಗೂ ಕ್ರಿಯಾಶೀಲತೆ’ ವಿಷಯ ಕುರಿತುಇ-–ಸಪ್ತಾಹ ಆಯೋಜಿಸಿತ್ತು.<br /> <br /> ದೊಡ್ಡ ಬಸವನಗುಡಿ ರಸ್ತೆಯಲ್ಲಿರುವ ಕಾಲೇಜಿನ ಆವರಣದಲ್ಲಿ ನಡೆದ ಸಪ್ತಾಹದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಜಗತ್ತಿನ ಅವಶ್ಯಕತೆಗಳ ಬಗ್ಗೆ ಮಾಹಿತಿ ನೀಡಲಾಯಿತು. ವ್ಯಕ್ತಿಗಳ ನಡುವಿನ ಪರಸ್ಪರ ಅರ್ಥೈಸುವಿಕೆ ಹಾಗೂ ಮಾರುಕಟ್ಟೆ ಕೌಶಲಗಳನ್ನು ಉತ್ತಮಪಡಿಸಿಕೊಳ್ಳಲು ನೆರವಾಯಿತು.<br /> <br /> ‘ವಿದ್ಯಾರ್ಥಿಗಳ ಸ್ವತಂತ್ರ ಹಾಗೂ ಕ್ರಿಯಾತ್ಮಕ ಆಲೋಚನೆಗಳಿಗೆ ಕಾಲೇಜು ಸದಾ ಪ್ರೋತ್ಸಾಹ ಹಾಗೂ ಪ್ರಾಮುಖ್ಯ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲೇ ಉದ್ಯಮಶೀಲತಾ ಪರಿಕಲ್ಪನೆಯನ್ನು ಅವರ ಮನಸ್ಸುಗಳಲ್ಲಿ ತುಂಬುವುದು ನಮ್ಮ ಉದ್ದೇಶ ಹಾಗೂ ಇ–-ಸಪ್ತಾಹದ ಉದ್ದೇಶವೂ ಇದೇ ಆಗಿದೆ’ ಎನ್ನುತ್ತಾರೆ ಕಾಲೇಜಿನ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಬಾಬು.<br /> <br /> ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ವಿಚಾರ ಗೋಷ್ಠಿಯನ್ನು ಕೂಡ ಏರ್ಪಡಿಸಲಾಗಿತ್ತು. ಕಾಲೇಜಿನ ನಾಟಕ ತಂಡ ‘ಪ್ರವೃತ್ತಿ’ ಸದಸ್ಯರಿಂದ ಬೀದಿ ನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿ.ಎಂ. ಶ್ರೀನಿವಾಸಯ್ಯ (ಬಿಎಂಎಸ್) ಎಂಜಿನಿಯರಿಂಗ್ ಕಾಲೇಜಿನ ಉದ್ಯಮಶೀಲತಾ ಅಭಿವೃದ್ಧಿ ಘಟಕವು ‘ನಾವೀನ್ಯ ಹಾಗೂ ಕ್ರಿಯಾಶೀಲತೆ’ ವಿಷಯ ಕುರಿತುಇ-–ಸಪ್ತಾಹ ಆಯೋಜಿಸಿತ್ತು.<br /> <br /> ದೊಡ್ಡ ಬಸವನಗುಡಿ ರಸ್ತೆಯಲ್ಲಿರುವ ಕಾಲೇಜಿನ ಆವರಣದಲ್ಲಿ ನಡೆದ ಸಪ್ತಾಹದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಜಗತ್ತಿನ ಅವಶ್ಯಕತೆಗಳ ಬಗ್ಗೆ ಮಾಹಿತಿ ನೀಡಲಾಯಿತು. ವ್ಯಕ್ತಿಗಳ ನಡುವಿನ ಪರಸ್ಪರ ಅರ್ಥೈಸುವಿಕೆ ಹಾಗೂ ಮಾರುಕಟ್ಟೆ ಕೌಶಲಗಳನ್ನು ಉತ್ತಮಪಡಿಸಿಕೊಳ್ಳಲು ನೆರವಾಯಿತು.<br /> <br /> ‘ವಿದ್ಯಾರ್ಥಿಗಳ ಸ್ವತಂತ್ರ ಹಾಗೂ ಕ್ರಿಯಾತ್ಮಕ ಆಲೋಚನೆಗಳಿಗೆ ಕಾಲೇಜು ಸದಾ ಪ್ರೋತ್ಸಾಹ ಹಾಗೂ ಪ್ರಾಮುಖ್ಯ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲೇ ಉದ್ಯಮಶೀಲತಾ ಪರಿಕಲ್ಪನೆಯನ್ನು ಅವರ ಮನಸ್ಸುಗಳಲ್ಲಿ ತುಂಬುವುದು ನಮ್ಮ ಉದ್ದೇಶ ಹಾಗೂ ಇ–-ಸಪ್ತಾಹದ ಉದ್ದೇಶವೂ ಇದೇ ಆಗಿದೆ’ ಎನ್ನುತ್ತಾರೆ ಕಾಲೇಜಿನ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಬಾಬು.<br /> <br /> ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ವಿಚಾರ ಗೋಷ್ಠಿಯನ್ನು ಕೂಡ ಏರ್ಪಡಿಸಲಾಗಿತ್ತು. ಕಾಲೇಜಿನ ನಾಟಕ ತಂಡ ‘ಪ್ರವೃತ್ತಿ’ ಸದಸ್ಯರಿಂದ ಬೀದಿ ನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>