<p>ಸುರಕ್ಷಿತ ಚಾಲನೆಗೆ ಸಂಬಂಧಿಸಿದಂತೆ ಹಲವಾರು ಯಶಸ್ವಿ ಕಾರ್ಯಕ್ರಮ ನಡೆಸಿರುವ ಯಮಹಾ ಬೈಕ್ಸ್ ನಗರದ ಶಾಲಾ ಮಕ್ಕಳಿಗೆ ಸುರಕ್ಷಿತ ಚಾಲನೆ ಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ. <br /> <br /> ಬಸವೇಶ್ವರ ನಗರ ಕಾರ್ಮೆಲ್ ಹೈಸ್ಕೂಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 120 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇಲ್ಲಿ ಅವರಿಗೆ ವಾಹನ ಚಾಲನೆ ಮಾಡುವಾಗ ಅನುಸರಿಸಬೇಕಾದ ಸುರಕ್ಷತೆ ಬಗ್ಗೆ ಉಪನ್ಯಾಸ ಹಾಗೂ ಪ್ರಾಯೋಗಿಕ ವಿಧಾನದ ಮೂಲಕ ತಿಳಿವಳಿಕೆ ನೀಡಲಾಯಿತು. <br /> <br /> ವಿದ್ಯಾರ್ಥಿಗಳು ಯಮಹಾ ಟಿಟಿಆರ್ 50 ಮತ್ತು ಪಿಡಬ್ಲ್ಯೂ 50 ಬೈಕ್ಗಳನ್ನು ಸುರಕ್ಷಿತವಾಗಿ ಚಾಲನೆ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಂಡರು. ವಿದ್ಯಾರ್ಥಿಗಳ ಜೊತೆ ನಾಗರಿಕರಲ್ಲಿ ಜಾಗೃತಿ ಮೂಡಿಸುವುದು ಸಹ ಇದರ ಹಿಂದಿನ ಉದ್ದೇಶವಾಗಿತ್ತು. <br /> <br /> ಈ ಸಂದರ್ಭದಲ್ಲಿ ಮಾತನಾಡಿದ ಯಮಹಾ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ ಜುನ್ ನಾಕಾಟಾ, `ದೇಶದಾದ್ಯಂತ ಯುವ ಜನತೆಯ ಅಭೂತಪೂರ್ವ ಪ್ರೋತ್ಸಾಹ ಮತ್ತು ಪ್ರತಿಕ್ರಿಯೆ ಸ್ವೀಕರಿಸಿದ ನಂತರ ನಾವು ಅಪಘಾತ ಮುಕ್ತ ಪರಿಸರ ನಿರ್ಮಿಸುವ ಸಲುವಾಗಿ ಮಕ್ಕಳಿಗೆ ವೈಎಸ್ಆರ್ಎಸ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ~ ಎಂದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಕ್ಷಿತ ಚಾಲನೆಗೆ ಸಂಬಂಧಿಸಿದಂತೆ ಹಲವಾರು ಯಶಸ್ವಿ ಕಾರ್ಯಕ್ರಮ ನಡೆಸಿರುವ ಯಮಹಾ ಬೈಕ್ಸ್ ನಗರದ ಶಾಲಾ ಮಕ್ಕಳಿಗೆ ಸುರಕ್ಷಿತ ಚಾಲನೆ ಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ. <br /> <br /> ಬಸವೇಶ್ವರ ನಗರ ಕಾರ್ಮೆಲ್ ಹೈಸ್ಕೂಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 120 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇಲ್ಲಿ ಅವರಿಗೆ ವಾಹನ ಚಾಲನೆ ಮಾಡುವಾಗ ಅನುಸರಿಸಬೇಕಾದ ಸುರಕ್ಷತೆ ಬಗ್ಗೆ ಉಪನ್ಯಾಸ ಹಾಗೂ ಪ್ರಾಯೋಗಿಕ ವಿಧಾನದ ಮೂಲಕ ತಿಳಿವಳಿಕೆ ನೀಡಲಾಯಿತು. <br /> <br /> ವಿದ್ಯಾರ್ಥಿಗಳು ಯಮಹಾ ಟಿಟಿಆರ್ 50 ಮತ್ತು ಪಿಡಬ್ಲ್ಯೂ 50 ಬೈಕ್ಗಳನ್ನು ಸುರಕ್ಷಿತವಾಗಿ ಚಾಲನೆ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಂಡರು. ವಿದ್ಯಾರ್ಥಿಗಳ ಜೊತೆ ನಾಗರಿಕರಲ್ಲಿ ಜಾಗೃತಿ ಮೂಡಿಸುವುದು ಸಹ ಇದರ ಹಿಂದಿನ ಉದ್ದೇಶವಾಗಿತ್ತು. <br /> <br /> ಈ ಸಂದರ್ಭದಲ್ಲಿ ಮಾತನಾಡಿದ ಯಮಹಾ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ ಜುನ್ ನಾಕಾಟಾ, `ದೇಶದಾದ್ಯಂತ ಯುವ ಜನತೆಯ ಅಭೂತಪೂರ್ವ ಪ್ರೋತ್ಸಾಹ ಮತ್ತು ಪ್ರತಿಕ್ರಿಯೆ ಸ್ವೀಕರಿಸಿದ ನಂತರ ನಾವು ಅಪಘಾತ ಮುಕ್ತ ಪರಿಸರ ನಿರ್ಮಿಸುವ ಸಲುವಾಗಿ ಮಕ್ಕಳಿಗೆ ವೈಎಸ್ಆರ್ಎಸ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ~ ಎಂದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>