ರಾಜ್ಯ ಸರ್ಕಾರದ ಪಬ್ಲಿಕ್ ಪ್ರಾಸಿಕ್ಯೂಟರ್ ಚಂದ್ರಮೌಳಿ, ಪ್ರಾಸಿಕ್ಯೂಷನ್ ಮಾಜಿ ನಿರ್ದೇಶಕ ಸದಾಶಿವಮೂರ್ತಿ ಅಂತಿಮ ಸ್ಪರ್ಧೆಯ ತೀರ್ಪುಗಾರರಾಗಿದ್ದರು. ಸಮಾರೋಪದಲ್ಲಿ ಅತಿಥಿಯಾಗಿದ್ದ ಮಾಜಿ ಪೊಲೀಸ್ ಕಮೀಷನರ್ ಎಲ್.ರೇವಣಸಿದ್ಧಯ್ಯ, ಸುಲಭವಾಗಿ ಸರಳವಾಗಿ ಹಣ ಗಳಿಸುವ ಉದ್ದೇಶ ಬಿಟ್ಟು ಶ್ರಮವಹಿಸಿ ಅಭ್ಯಾಸ ಮಾಡಲು ಸಲಹೆ ನೀಡಿದರು. ಹೈಕೋರ್ಟ್ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ಪಾಟೀ ಸವಾಲಿನ ಕಲೆಯನ್ನು ವಿವರಿಸಿದರು. ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿ ಡಾ.ಜೆ.ಎಸ್. ಪಾಟೀಲ್, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶ್ರೀನಿವಾಸ ರೆಡ್ಡಿ, ಸಿಎಂಆರ್ ಸಮೂಹದ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ಸಿಎಂಆರ್ ಜ್ಞಾನಧಾರಾ ಟ್ರಸ್ಟ್ ಅಧ್ಯಕ್ಷೆ ಡಾ.ಸಬಿತಾ ರಾಮಮೂರ್ತಿ ಮತ್ತಿತರರು ಹಾಜರಿದ್ದರು.