<p><strong>ಇಟಾನಗರ: </strong>ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಅವರ ನೇತೃತ್ವದಲ್ಲಿ ಕಾಂಗ್ರೆಸ್ನ 40ಕ್ಕೂ ಹೆಚ್ಚು ಶಾಸಕರು ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಸೇರಿದ್ದಾರೆ. ಇದರೊಂದಿಗೆ ಎರಡು ತಿಂಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶದ ಮೂಲಕ ಮರಳಿ ಅಧಿಕಾರ ಪಡೆದಿದ್ದ ಕಾಂಗ್ರೆಸ್ ಈ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ.<br /> <br /> ಖಂಡು ಅವರು 40ಕ್ಕೂ ಹೆಚ್ಚು ಶಾಸಕರ ಜತೆ ವಿಧಾನಸಭೆ ಸ್ಪೀಕರ್ ತೆನ್ಸಿಂಗ್ ನೊರ್ಬು ಥಾಂಗ್ಡಕ್ ಅವರನ್ನು ಭೇಟಿಯಾಗಿ ಪಕ್ಷಾಂತರದ ವಿಚಾರ ತಿಳಿಸಿದರು. ಈ ಶಾಸಕರು ಪಿಪಿಎ ಸೇರುವ ನಿರ್ಧಾರಕ್ಕೆ ಸ್ಪೀಕರ್ ಒಪ್ಪಿಗೆ ನೀಡಿದ್ದಾರೆ.<br /> <br /> ಒಬ್ಬರನ್ನು ಹೊರತುಪಡಿಸಿ ಕಾಂಗ್ರೆಸ್ನ ಎಲ್ಲ ಶಾಸಕರೂ ಪಿಪಿಎ ಸೇರುವುದರೊಂದಿಗೆ ಆಡಳಿತ ಪಕ್ಷವೇ ಪಿಪಿಎ ಜತೆ ವಿಲೀನವಾದಂತಾಗಿದೆ. ಈ ರಾಜಕೀಯ ಬೆಳವಣಿಗೆಯಿಂದಾಗಿ ಈಶಾನ್ಯದಲ್ಲಿ ಮಣಿಪುರ, ಮೇಘಾಲಯ ಮತ್ತು ಮಿಜೊರಾಂನಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಉಳಿದಿದೆ.<br /> <br /> ಖಂಡು ಅವರು ಎರಡು ತಿಂಗಳ ಹಿಂದೆ ಆಗಿನ ಮುಖ್ಯಮಂತ್ರಿ ನಬಾಂ ತುಕಿ ವಿರುದ್ಧ ಅಭಿಯಾನವನ್ನೇ ನಡೆಸಿದ್ದರು. ಅದರ ಪರಿಣಾಮವಾಗಿ ತುಕಿ ಅವರನ್ನು ಬದಲಾಯಿಸಿ ಆ ಸ್ಥಾನಕ್ಕೆ ಖಂಡು ಅವರನ್ನು ಕಾಂಗ್ರೆಸ್ ನೇಮಿಸಿತ್ತು.<br /> <br /> ಜನವರಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದಾಗಿ ತುಕಿ ಅವರು ಅಧಿಕಾರ ಕಳೆದುಕೊಂಡಿದ್ದರು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ನಂತರ ರಾಷ್ಟ್ರಪತಿ ಆಳ್ವಿಕೆ ತೆರವುಗೊಳಿಸಿ ಫೆಬ್ರುವರಿ 19ರಂದು ಕಲಿಕೊ ಪುಲ್ ಅವರು ಹೊಸ ಸರ್ಕಾರ ರಚಿಸಲು ಅವಕಾಶ ನೀಡಲಾಗಿತ್ತು.<br /> <br /> ಜುಲೈ 13ರಂದು ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಪುಲ್ ರಾಜೀನಾಮೆ ನೀಡಬೇಕಾಯಿತು. ನಂತರದ ಬೆಳವಣಿಗೆಯಲ್ಲಿ ಖಂಡು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.<br /> *<br /> ಮುಖ್ಯಮಂತ್ರಿ ಸೇರಿ ಕಾಂಗ್ರೆಸ್ನ ಶಾಸಕರಿಗೆ ತಮ್ಮ ಪಕ್ಷದ ಕೇಂದ್ರ ನಾಯಕತ್ವದ ಮೇಲೆ ನಂಬಿಕೆ ಇಲ್ಲ. ಹಾಗಾಗಿಯೇ ಅವರು ಪ್ರಾದೇಶಿಕ ಪಕ್ಷಕ್ಕೆ ಪಕ್ಷಾಂತರ ಮಾಡಿದ್ದಾರೆ.<br /> <strong>-ಕಿರಣ್ ರಿಜಿಜು </strong><br /> ಕೇಂದ್ರ ಗೃಹ ಖಾತೆ ರಾಜ್ಯ ಸಚಿವ<br /> *<br /> ಅರುಣಾಚಲದ ಜನ ಕಾಂಗ್ರೆಸ್ಗೆ ಮತ ನೀಡಿದ್ದಾರೆ. ಇಡೀ ಸರ್ಕಾರವೇ ಪಕ್ಷಾಂತರ ಮಾಡುವಂತೆ ತಂತ್ರ ರೂಪಿಸುವ ಅಧಿಕಾರ ಯಾರಿಗಿದೆ? ಪ್ರಧಾನಿ, ಬಿಜೆಪಿ ಅಧ್ಯಕ್ಷ ಇದಕ್ಕೆ ಹೊಣೆ.<br /> <strong>ರಣದೀಪ್ ಸುರ್ಜೆವಾಲಾ </strong><br /> ಕಾಂಗ್ರೆಸ್ ವಕ್ತಾರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಟಾನಗರ: </strong>ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಅವರ ನೇತೃತ್ವದಲ್ಲಿ ಕಾಂಗ್ರೆಸ್ನ 40ಕ್ಕೂ ಹೆಚ್ಚು ಶಾಸಕರು ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಸೇರಿದ್ದಾರೆ. ಇದರೊಂದಿಗೆ ಎರಡು ತಿಂಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶದ ಮೂಲಕ ಮರಳಿ ಅಧಿಕಾರ ಪಡೆದಿದ್ದ ಕಾಂಗ್ರೆಸ್ ಈ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ.<br /> <br /> ಖಂಡು ಅವರು 40ಕ್ಕೂ ಹೆಚ್ಚು ಶಾಸಕರ ಜತೆ ವಿಧಾನಸಭೆ ಸ್ಪೀಕರ್ ತೆನ್ಸಿಂಗ್ ನೊರ್ಬು ಥಾಂಗ್ಡಕ್ ಅವರನ್ನು ಭೇಟಿಯಾಗಿ ಪಕ್ಷಾಂತರದ ವಿಚಾರ ತಿಳಿಸಿದರು. ಈ ಶಾಸಕರು ಪಿಪಿಎ ಸೇರುವ ನಿರ್ಧಾರಕ್ಕೆ ಸ್ಪೀಕರ್ ಒಪ್ಪಿಗೆ ನೀಡಿದ್ದಾರೆ.<br /> <br /> ಒಬ್ಬರನ್ನು ಹೊರತುಪಡಿಸಿ ಕಾಂಗ್ರೆಸ್ನ ಎಲ್ಲ ಶಾಸಕರೂ ಪಿಪಿಎ ಸೇರುವುದರೊಂದಿಗೆ ಆಡಳಿತ ಪಕ್ಷವೇ ಪಿಪಿಎ ಜತೆ ವಿಲೀನವಾದಂತಾಗಿದೆ. ಈ ರಾಜಕೀಯ ಬೆಳವಣಿಗೆಯಿಂದಾಗಿ ಈಶಾನ್ಯದಲ್ಲಿ ಮಣಿಪುರ, ಮೇಘಾಲಯ ಮತ್ತು ಮಿಜೊರಾಂನಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಉಳಿದಿದೆ.<br /> <br /> ಖಂಡು ಅವರು ಎರಡು ತಿಂಗಳ ಹಿಂದೆ ಆಗಿನ ಮುಖ್ಯಮಂತ್ರಿ ನಬಾಂ ತುಕಿ ವಿರುದ್ಧ ಅಭಿಯಾನವನ್ನೇ ನಡೆಸಿದ್ದರು. ಅದರ ಪರಿಣಾಮವಾಗಿ ತುಕಿ ಅವರನ್ನು ಬದಲಾಯಿಸಿ ಆ ಸ್ಥಾನಕ್ಕೆ ಖಂಡು ಅವರನ್ನು ಕಾಂಗ್ರೆಸ್ ನೇಮಿಸಿತ್ತು.<br /> <br /> ಜನವರಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದಾಗಿ ತುಕಿ ಅವರು ಅಧಿಕಾರ ಕಳೆದುಕೊಂಡಿದ್ದರು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ನಂತರ ರಾಷ್ಟ್ರಪತಿ ಆಳ್ವಿಕೆ ತೆರವುಗೊಳಿಸಿ ಫೆಬ್ರುವರಿ 19ರಂದು ಕಲಿಕೊ ಪುಲ್ ಅವರು ಹೊಸ ಸರ್ಕಾರ ರಚಿಸಲು ಅವಕಾಶ ನೀಡಲಾಗಿತ್ತು.<br /> <br /> ಜುಲೈ 13ರಂದು ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಪುಲ್ ರಾಜೀನಾಮೆ ನೀಡಬೇಕಾಯಿತು. ನಂತರದ ಬೆಳವಣಿಗೆಯಲ್ಲಿ ಖಂಡು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.<br /> *<br /> ಮುಖ್ಯಮಂತ್ರಿ ಸೇರಿ ಕಾಂಗ್ರೆಸ್ನ ಶಾಸಕರಿಗೆ ತಮ್ಮ ಪಕ್ಷದ ಕೇಂದ್ರ ನಾಯಕತ್ವದ ಮೇಲೆ ನಂಬಿಕೆ ಇಲ್ಲ. ಹಾಗಾಗಿಯೇ ಅವರು ಪ್ರಾದೇಶಿಕ ಪಕ್ಷಕ್ಕೆ ಪಕ್ಷಾಂತರ ಮಾಡಿದ್ದಾರೆ.<br /> <strong>-ಕಿರಣ್ ರಿಜಿಜು </strong><br /> ಕೇಂದ್ರ ಗೃಹ ಖಾತೆ ರಾಜ್ಯ ಸಚಿವ<br /> *<br /> ಅರುಣಾಚಲದ ಜನ ಕಾಂಗ್ರೆಸ್ಗೆ ಮತ ನೀಡಿದ್ದಾರೆ. ಇಡೀ ಸರ್ಕಾರವೇ ಪಕ್ಷಾಂತರ ಮಾಡುವಂತೆ ತಂತ್ರ ರೂಪಿಸುವ ಅಧಿಕಾರ ಯಾರಿಗಿದೆ? ಪ್ರಧಾನಿ, ಬಿಜೆಪಿ ಅಧ್ಯಕ್ಷ ಇದಕ್ಕೆ ಹೊಣೆ.<br /> <strong>ರಣದೀಪ್ ಸುರ್ಜೆವಾಲಾ </strong><br /> ಕಾಂಗ್ರೆಸ್ ವಕ್ತಾರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>