ಆದೇಶ ಖಂಡಿಸಿ ಪ್ರತಿಭಟನೆ
ಕಾವೇರಿ ಮೇಲುಸ್ತುವಾರಿ ಸಮಿತಿಯು ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದನ್ನು ಖಂಡಿಸಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ವಿವಿಧೆಡೆ ಪ್ರತಿಭಟನೆ ಮಾಡಲಾಯಿತು.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಕರವೇ, ಕನ್ನಡ ಸೇನೆ ಸೇರಿದಂತೆ ಹಲವು ಸಂಘಟನೆಗಳ ಸದಸ್ಯರು ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರಿನಲ್ಲಿ ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರ ತಡೆದು ಪ್ರತಿಭಟನೆ ಮಾಡಿದರು. ನಂತರ ವಾಹನಗಳ ಸಂಚಾರ ಸುಗಮವಾಗಿದೆ.
ಶಾಸಕ ಕೆ.ಟಿ. ಶ್ರೀಕಂಠೇಗೌಡ, ಜಿ.ಪಂ. ಸದಸ್ಯ ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಸಿದ್ದರಾಮೇಗೌಡ, ಮಂಜುನಾಥ್, ಅರವಿಂದ್ ಮತ್ತಿತರರು ಪಾಲ್ಗೊಂಡಿದ್ದರು.