ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ ಆವರಣದಲ್ಲಿ ಮೌನ ಪ್ರತಿಭಟನೆ

ಸಾಧ್ಯವಾಗದ ಸಂಸದ ಪುಟ್ಟರಾಜು ರಾಜೀನಾಮೆ
Last Updated 22 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ನವದೆಹಲಿ: ಕಾವೇರಿ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೆ. 20ರಂದು ರಾಜೀನಾಮೆ ಪತ್ರ ಸಲ್ಲಿಸಿದ್ದ ಮಂಡ್ಯದ ಸಂಸದ, ಜೆಡಿಎಸ್‌ನ ಸಿ.ಎಸ್‌. ಪುಟ್ಟರಾಜು, ಗುರುವಾರ ಲೋಕಸಭೆಗೆ ತೆರಳಿ ರಾಜೀನಾಮೆ ಸಲ್ಲಿಸಲು ಮುಂದಾದರು. ಆದರೆ, ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ವಿದೇಶಕ್ಕೆ ತೆರಳಿದ್ದರಿಂದ ರಾಜೀನಾಮೆ ಸಲ್ಲಿಸಲಾಗದೆ ಮರಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾವೇರಿ ಸಮಸ್ಯೆ ನಿವಾರಣೆಗಾಗಿ ಮಧ್ಯಸ್್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ಸಂಸತ್ ಭವನದ ಆವರಣದಲ್ಲಿನ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಅವರು ಈ ವೇಳೆ ಮೌನ ಪ್ರತಿಭಟನೆ ನಡೆಸಿದರು.

‘ನನ್ನನ್ನು ಆಯ್ಕೆ ಮಾಡಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಜನರಿಗೆ ಕುಡಿಯಲು ನೀರು ದೊರೆಯದ ಸ್ಥಿತಿ ನಿರ್ಮಾಣವಾಗಿದೆ. ಜನರ ಹಿತ ಕಾಪಾಡುವುದು ಅಸಾಧ್ಯವಾಗಿದ್ದರಿಂದ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕಾವೇರಿ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ದನಿ ಎತ್ತುವ ಮೂಲಕ ಮಂಡ್ಯದ ಎಲ್ಲ ಜಲಪ್ರತಿನಿಧಿಗಳೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗ ಬೇಕು ಎಂದ ಅವರು, ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ವಿರೋಧ ಪಕ್ಷವಾಗಿ ರುವ ಬಿಜೆಪಿ ಬೆಂಬಲ ನೀಡದಿದ್ದರೂ, ಕಾವೇರಿ ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ಜೆಡಿಎಸ್‌ ಬೆಂಬಲ ನೀಡಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT