ಕೇಂದ್ರ ತಂಡದ ಭೇಟಿಗೂ ಮುನ್ನ, ಶುಕ್ರವಾರ ರಾಜ್ಯಪಾಲ ಸಿ. ವಿದ್ಯಾಸಾಗರ ರಾವ್ ಅವರು ಅಗತ್ಯ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಕರ್ನಾಟಕ ಕಾವೇರಿ ನೀರು ಬಿಡುಗಡೆ ಮಾಡಿರುವುದರಿಂದ ಮೆಟ್ಟೂರು ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.