<p><strong>ನವದೆಹಲಿ: </strong>ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಶಿಬಿರಗಳ ಮೇಲೆ ಸೆ. 29ರಂದು ಸೇನೆ ನಡೆಸಿದ್ದು ಮೊದಲ ನಿರ್ದಿಷ್ಟ ದಾಳಿಯೇ? ಅಲ್ಲ ಎನ್ನುವ ಅಭಿಪ್ರಾಯವನ್ನು ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಅವರು ವಿದೇಶಾಂಗ ವ್ಯವಹಾರಗಳ ಸಂಸತ್ ಸ್ಥಾಯಿ ಸಮಿತಿಯ ಮುಂದೆ ವ್ಯಕ್ತಪಡಿಸಿದ್ದಾರೆ.</p>.<p>‘ಭಯೋತ್ಪಾದನೆಯ ವಿರುದ್ಧ ಸೇನೆಯು ವೃತ್ತಿಪರ, ಗುರಿ ನಿರ್ದಿಷ್ಟ, ಸೀಮಿತ ಮತ್ತು ಕರಾರುವಾಕ್ ಲೆಕ್ಕಾಚಾರದ ದಾಳಿಯನ್ನು ಹಿಂದೆಯೂ ನಡೆಸಿತ್ತು’ ಎಂದು ಜೈಶಂಕರ್ ಹೇಳಿದ್ದಾರೆ.</p>.<p>ಜೈಶಂಕರ್ ಅವರು ‘ನಿರ್ದಿಷ್ಟ ದಾಳಿ’ ಎಂಬ ಪದವನ್ನು ಬಳಸಿಲ್ಲ. ಆದರೆ ಅವರು ನೀಡಿದ ವಿವರಣೆ ಅಂತಹುದೇ ಕಾರ್ಯಾಚರಣೆಯನ್ನು ಸೂಚಿಸುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಮೂಲವೊಂದು ತಿಳಿಸಿದೆ.</p>.<p>ಸೇನೆಯ ಉಪ ಮುಖ್ಯಸ್ಥ ಬಿಪಿನ್ ರಾವತ್ ಅವರೂ ಸಮಿತಿಗೆ ಮಾಹಿತಿ ನೀಡಿದರು. ಗಡಿ ನಿಯಂತ್ರಣ ರೇಖೆದಾಟಿ ಹೋಗಿ ಹಿಂದೆಯೂ ಕಾರ್ಯಾಚರಣೆ ನಡೆಸಲಾಗಿದೆ. ಆದರೆ ಈ ಬಾರಿ ಮಾತ್ರ ಈ ಬಗೆಗಿನ ಮಾಹಿತಿಯನ್ನು ಬಹಿರಂಗಪಡಿಸಲು ನಿರ್ಧರಿಸಲಾಯಿತು ಎಂದು ಅವರು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡ ಶಶಿ ತರೂರ್ ನೇತೃತ್ವದ ಸಮಿತಿಗೆ ನಿರ್ದಿಷ್ಟ ದಾಳಿ ಮತ್ತು ಅದರಿಂದಾದ ರಾಜತಾಂತ್ರಿಕ ಪರಿಣಾಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು.</p>.<p>ಲೆ. ಜ. ರಾವತ್, ಜೈಶಂಕರ್ ಅವರಲ್ಲದೆ, ರಕ್ಷಣಾ ಕಾರ್ಯದರ್ಶಿ ಜಿ. ಮೋಹನ್ ಕುಮಾರ್, ಗಡಿ ಭದ್ರತಾ ಪಡೆಯ ಮಹಾ ನಿರ್ದೇಶಕ ಕೆ.ಕೆ. ಶರ್ಮ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ (ಆಂತರಿಕ ಭದ್ರತೆ) ಎಂ.ಕೆ ಸಿಂಗ್ಲಾ ಅವರು ಮಾಹಿತಿ ನೀಡಿದರು.</p>.<p>ರಕ್ಷಣೆಯ ಸಂಸತ್ ಸ್ಥಾಯಿ ಸಮಿತಿಗೆ ಕಳೆದ ವಾರ ಸೇನೆ ಮತ್ತು ಸರ್ಕಾರದ ಅಧಿಕಾರಿಗಳು ನಿರ್ದಿಷ್ಟ ದಾಳಿ ಬಗ್ಗೆ ಮಾಹಿತಿ ನೀಡಿದ್ದರು. ಆಗ ಸದಸ್ಯರ ಪ್ರಶ್ನೆಗೆ ಅವಕಾಶ ನೀಡಿರಲಿಲ್ಲ. ಆದರೆ ಮಂಗಳವಾರದ ಮಾಹಿತಿ ನೀಡಿಕೆ ಸಭೆಯಲ್ಲಿ ಸದಸ್ಯರು ಪ್ರಶ್ನೆಗಳನ್ನು ಕೇಳಿದ್ದಾರೆ.</p>.<p>ಕಾಂಗ್ರೆಸ್ನ ಸತ್ಯವ್ರತ ಚತುರ್ವೇದಿ ಮತ್ತು ಸಿಪಿಎಂನ ಮೊಹಮ್ಮದ್ ಸಲೀಂ ಹೆಚ್ಚಿನ ಪ್ರಶ್ನೆಗಳನ್ನು ಕೇಳಿದರು. ನಿರ್ದಿಷ್ಟ ದಾಳಿಯನ್ನು ಪ್ರಧಾನಿ ಮೋದಿ ಅವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಭೆಯಲ್ಲಿ ಯಾವುದೇ ಪ್ರಶ್ನೆ ಕೇಳಲಿಲ್ಲ.</p>.<p>ನಿರ್ದಿಷ್ಟ ದಾಳಿಯು ವಿರೋಧಿಗಳ ಮನಸ್ಸಿನಲ್ಲಿ ಅನಿಶ್ಚಿತತೆ ಮೂಡಿಸಿದೆ. ಮುಂದೆಯೂ ಇಂತಹ ದಾಳಿ ನಡೆಯಬಹುದು ಎಂಬ ಅಂಜಿಕೆಯೂ ಅವರಲ್ಲಿ ಉಂಟಾಗಿದೆ ಎಂದು ಅಧಿಕಾರಿಗಳು ಸಮಿತಿಗೆ ತಿಳಿಸಿದರು.</p>.<p>ಉಗ್ರರ ಶಿಬಿರಗಳನ್ನು ನಾಶ ಮಾಡುವುದು ನಿರ್ದಿಷ್ಟ ದಾಳಿಯ ಉದ್ದೇಶವಾಗಿತ್ತೇ ಹೊರತು ಸಾಕ್ಷ್ಯ ಸಂಗ್ರಹ ಅಲ್ಲ ಎಂದೂ ಸ್ಪಷ್ಟಪಡಿಸಲಾಯಿತು.</p>.<p>ನಿರ್ದಿಷ್ಟ ದಾಳಿಯ ರಾಜತಾಂತ್ರಿಕ ಪರಿಣಾಮ ಏನು ಎಂಬುದನ್ನು ತಿಳಿಯಲು ಎಐಎಡಿಎಂಕೆಯ ಪಿ.ಆರ್. ಸೆಂಥಿಲ್ನಾಥನ್ ಮತ್ತು ಡಿಎಂಕೆಯ ಕನಿಮೊಳಿ ಬಯಸಿದರು.</p>.<p>ಪಾಕಿಸ್ತಾನದ ಜತೆಗಿನ ಸಾಂಸ್ಕೃತಿಕ ಸಂಬಂಧವನ್ನು ಸರ್ಕಾರ ನಿಷೇಧಿಸಿಲ್ಲ. ಅಂತಹ ಯೋಚನೆಯೂ ಇಲ್ಲ ಎಂದು ಜೈಶಂಕರ್ ತಿಳಿಸಿದರು.</p>.<p>ಪಾಕಿಸ್ತಾನ ಜತೆಗೆ ಮಾತುಕತೆ ಪುನರಾರಂಭಕ್ಕೆ ಯಾವುದೇ ವೇಳಾಪಟ್ಟಿ ನಿಗದಿಪಡಿಸಲಾಗಿಲ್ಲ. ಆದರೆ ಆ ದೇಶದ ಜತೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಶಿಬಿರಗಳ ಮೇಲೆ ಸೆ. 29ರಂದು ಸೇನೆ ನಡೆಸಿದ್ದು ಮೊದಲ ನಿರ್ದಿಷ್ಟ ದಾಳಿಯೇ? ಅಲ್ಲ ಎನ್ನುವ ಅಭಿಪ್ರಾಯವನ್ನು ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಅವರು ವಿದೇಶಾಂಗ ವ್ಯವಹಾರಗಳ ಸಂಸತ್ ಸ್ಥಾಯಿ ಸಮಿತಿಯ ಮುಂದೆ ವ್ಯಕ್ತಪಡಿಸಿದ್ದಾರೆ.</p>.<p>‘ಭಯೋತ್ಪಾದನೆಯ ವಿರುದ್ಧ ಸೇನೆಯು ವೃತ್ತಿಪರ, ಗುರಿ ನಿರ್ದಿಷ್ಟ, ಸೀಮಿತ ಮತ್ತು ಕರಾರುವಾಕ್ ಲೆಕ್ಕಾಚಾರದ ದಾಳಿಯನ್ನು ಹಿಂದೆಯೂ ನಡೆಸಿತ್ತು’ ಎಂದು ಜೈಶಂಕರ್ ಹೇಳಿದ್ದಾರೆ.</p>.<p>ಜೈಶಂಕರ್ ಅವರು ‘ನಿರ್ದಿಷ್ಟ ದಾಳಿ’ ಎಂಬ ಪದವನ್ನು ಬಳಸಿಲ್ಲ. ಆದರೆ ಅವರು ನೀಡಿದ ವಿವರಣೆ ಅಂತಹುದೇ ಕಾರ್ಯಾಚರಣೆಯನ್ನು ಸೂಚಿಸುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಮೂಲವೊಂದು ತಿಳಿಸಿದೆ.</p>.<p>ಸೇನೆಯ ಉಪ ಮುಖ್ಯಸ್ಥ ಬಿಪಿನ್ ರಾವತ್ ಅವರೂ ಸಮಿತಿಗೆ ಮಾಹಿತಿ ನೀಡಿದರು. ಗಡಿ ನಿಯಂತ್ರಣ ರೇಖೆದಾಟಿ ಹೋಗಿ ಹಿಂದೆಯೂ ಕಾರ್ಯಾಚರಣೆ ನಡೆಸಲಾಗಿದೆ. ಆದರೆ ಈ ಬಾರಿ ಮಾತ್ರ ಈ ಬಗೆಗಿನ ಮಾಹಿತಿಯನ್ನು ಬಹಿರಂಗಪಡಿಸಲು ನಿರ್ಧರಿಸಲಾಯಿತು ಎಂದು ಅವರು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡ ಶಶಿ ತರೂರ್ ನೇತೃತ್ವದ ಸಮಿತಿಗೆ ನಿರ್ದಿಷ್ಟ ದಾಳಿ ಮತ್ತು ಅದರಿಂದಾದ ರಾಜತಾಂತ್ರಿಕ ಪರಿಣಾಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು.</p>.<p>ಲೆ. ಜ. ರಾವತ್, ಜೈಶಂಕರ್ ಅವರಲ್ಲದೆ, ರಕ್ಷಣಾ ಕಾರ್ಯದರ್ಶಿ ಜಿ. ಮೋಹನ್ ಕುಮಾರ್, ಗಡಿ ಭದ್ರತಾ ಪಡೆಯ ಮಹಾ ನಿರ್ದೇಶಕ ಕೆ.ಕೆ. ಶರ್ಮ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ (ಆಂತರಿಕ ಭದ್ರತೆ) ಎಂ.ಕೆ ಸಿಂಗ್ಲಾ ಅವರು ಮಾಹಿತಿ ನೀಡಿದರು.</p>.<p>ರಕ್ಷಣೆಯ ಸಂಸತ್ ಸ್ಥಾಯಿ ಸಮಿತಿಗೆ ಕಳೆದ ವಾರ ಸೇನೆ ಮತ್ತು ಸರ್ಕಾರದ ಅಧಿಕಾರಿಗಳು ನಿರ್ದಿಷ್ಟ ದಾಳಿ ಬಗ್ಗೆ ಮಾಹಿತಿ ನೀಡಿದ್ದರು. ಆಗ ಸದಸ್ಯರ ಪ್ರಶ್ನೆಗೆ ಅವಕಾಶ ನೀಡಿರಲಿಲ್ಲ. ಆದರೆ ಮಂಗಳವಾರದ ಮಾಹಿತಿ ನೀಡಿಕೆ ಸಭೆಯಲ್ಲಿ ಸದಸ್ಯರು ಪ್ರಶ್ನೆಗಳನ್ನು ಕೇಳಿದ್ದಾರೆ.</p>.<p>ಕಾಂಗ್ರೆಸ್ನ ಸತ್ಯವ್ರತ ಚತುರ್ವೇದಿ ಮತ್ತು ಸಿಪಿಎಂನ ಮೊಹಮ್ಮದ್ ಸಲೀಂ ಹೆಚ್ಚಿನ ಪ್ರಶ್ನೆಗಳನ್ನು ಕೇಳಿದರು. ನಿರ್ದಿಷ್ಟ ದಾಳಿಯನ್ನು ಪ್ರಧಾನಿ ಮೋದಿ ಅವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಭೆಯಲ್ಲಿ ಯಾವುದೇ ಪ್ರಶ್ನೆ ಕೇಳಲಿಲ್ಲ.</p>.<p>ನಿರ್ದಿಷ್ಟ ದಾಳಿಯು ವಿರೋಧಿಗಳ ಮನಸ್ಸಿನಲ್ಲಿ ಅನಿಶ್ಚಿತತೆ ಮೂಡಿಸಿದೆ. ಮುಂದೆಯೂ ಇಂತಹ ದಾಳಿ ನಡೆಯಬಹುದು ಎಂಬ ಅಂಜಿಕೆಯೂ ಅವರಲ್ಲಿ ಉಂಟಾಗಿದೆ ಎಂದು ಅಧಿಕಾರಿಗಳು ಸಮಿತಿಗೆ ತಿಳಿಸಿದರು.</p>.<p>ಉಗ್ರರ ಶಿಬಿರಗಳನ್ನು ನಾಶ ಮಾಡುವುದು ನಿರ್ದಿಷ್ಟ ದಾಳಿಯ ಉದ್ದೇಶವಾಗಿತ್ತೇ ಹೊರತು ಸಾಕ್ಷ್ಯ ಸಂಗ್ರಹ ಅಲ್ಲ ಎಂದೂ ಸ್ಪಷ್ಟಪಡಿಸಲಾಯಿತು.</p>.<p>ನಿರ್ದಿಷ್ಟ ದಾಳಿಯ ರಾಜತಾಂತ್ರಿಕ ಪರಿಣಾಮ ಏನು ಎಂಬುದನ್ನು ತಿಳಿಯಲು ಎಐಎಡಿಎಂಕೆಯ ಪಿ.ಆರ್. ಸೆಂಥಿಲ್ನಾಥನ್ ಮತ್ತು ಡಿಎಂಕೆಯ ಕನಿಮೊಳಿ ಬಯಸಿದರು.</p>.<p>ಪಾಕಿಸ್ತಾನದ ಜತೆಗಿನ ಸಾಂಸ್ಕೃತಿಕ ಸಂಬಂಧವನ್ನು ಸರ್ಕಾರ ನಿಷೇಧಿಸಿಲ್ಲ. ಅಂತಹ ಯೋಚನೆಯೂ ಇಲ್ಲ ಎಂದು ಜೈಶಂಕರ್ ತಿಳಿಸಿದರು.</p>.<p>ಪಾಕಿಸ್ತಾನ ಜತೆಗೆ ಮಾತುಕತೆ ಪುನರಾರಂಭಕ್ಕೆ ಯಾವುದೇ ವೇಳಾಪಟ್ಟಿ ನಿಗದಿಪಡಿಸಲಾಗಿಲ್ಲ. ಆದರೆ ಆ ದೇಶದ ಜತೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>