ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನವೆಂಬರ್ ಒಳಗೆ ಎಪಿಎಂಸಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಈ ಹಿಂದೆ ನಿರ್ದೇಶನ ನೀಡಿತ್ತು. ಆ ಪ್ರಕಾರ ಕ್ಷೇತ್ರವಾರು ಮೀಸಲಾತಿ ನಿಗದಿಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಇದೇ ತಿಂಗಳು ವಿಧಾನ ಮಂಡಲ ಅಧಿವೇಶನವೂ ನಡೆಯು ತ್ತಿದೆ. ಹೀಗಾಗಿ ಚುನಾವಣೆಗೆ ಕಾಲಾವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದೇವೆ’ ಎಂದರು.