ಹಾವೇರಿ: ಚಿತ್ರದುರ್ಗ ಮುರುಘಾಮಠದ ಶಾಖಾಮಠವಾದ ಇಲ್ಲಿಯ ಹೊಸಮಠ ನೀಡುವ ಡಾ. ಶಿವಮೂರ್ತಿ ಮುರುಘಾ ಶರಣ ಪ್ರಶಸ್ತಿಗೆ (‘ಡಾ. ಶಿಮುಶ ಪ್ರಶಸ್ತಿ’) ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹50 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಡಿಸೆಂಬರ್ 3 ರಂದು ಹಾವೇರಿಯಲ್ಲಿ ನಡೆಯುವ ‘ಶರಣ ಸಂಸ್ಕೃತಿ ಉತ್ಸವ’ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೊಸಮಠದ ಚರಮೂರ್ತಿ ಬಸವಶಾಂತಲಿಂಗ ಸ್ವಾಮೀಜಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.