ಸುಮಾರು ಎರಡು ವರ್ಷಗಳ ಹಿಂದೆ ಅವರ ‘ಯಾನ’ ಕಾದಂಬರಿ ಪ್ರಕಟವಾಗಿ ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿತ್ತು. ನಲವತ್ತು ವರ್ಷಗಳ ಹಿಂದೆ ‘ಪರ್ವ’ ಕಾದಂಬರಿಯಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯ ಪಾತ್ರದ ಮೂಲಕ ಮಹಾಭಾರತವನ್ನು ಪುನರ್ ವ್ಯಾಖ್ಯಾನಿಸಿದ್ದರು. ಇದೀಗ ‘ಉತ್ತರಕಾಂಡ’ದಲ್ಲಿ ಸೀತೆಯ ಪಾತ್ರದ ಮೂಲಕ ರಾಮಾಯಣದ ಅರ್ಥಕ್ಕೆ ಹೊಸದಾದ ಆಯಾಮ ನೀಡಿದ್ದಾರೆ ಎನ್ನಲಾಗಿದೆ.