ವಿಶ್ವಸಂಸ್ಥೆ ಮಧ್ಯಪ್ರವೇಶಿಸಿ, ಸಮಸ್ಯೆ ಇತ್ಯರ್ಥವಾಗುವವರೆಗೂ ರ್್ಯಾಟಲ್ ಯೋಜನೆಯನ್ನು ನಿಲ್ಲಿಸುವುದು ಸೂಕ್ತ ಎಂಬುದನ್ನು ಭಾರತಕ್ಕೆ ಮನವರಿಕೆ ಮಾಡಬೇಕು ಎಂದು ಸಭೆ ನಿರ್ಣಯ ಕೈಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ‘ಸಿಂಧೂ ನದಿ ನೀರು ಒಪ್ಪಂದವನ್ನು ಮುರಿಯಲು ಭಾರತಕ್ಕೆ ನಾವು ಅವಕಾಶ ನೀಡುವುದಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಐಜಾಜ್ ಚೌಧರಿ ಹೇಳಿದ್ದಾರೆ.